Homeಚಳವಳಿಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌ ವಿರುದ್ಧ ದೇಶಾದ್ಯಂತ ದನಿಯೆತ್ತಿದ ಕಲಾವಿದರು: ಬೆಂಬಲದ ಮಹಾಪೂರ

ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌ ವಿರುದ್ಧ ದೇಶಾದ್ಯಂತ ದನಿಯೆತ್ತಿದ ಕಲಾವಿದರು: ಬೆಂಬಲದ ಮಹಾಪೂರ

- Advertisement -
- Advertisement -

49 ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವುದನ್ನು ಖಂಡಿಸಿ, ಸಾಂಸ್ಕೃತಿಕ ಸಮುದಾಯದ 185 ಸೆಲೆಬ್ರಿಟಿಗಳು ಪತ್ರ ಚಳವಳಿ ಆರಂಭಿಸಿದ್ದಾರೆ. ಬಿಹಾರದ ಮುಜಫ್ಫರ್‍ಪುರದಲ್ಲಿ ನಡೆದ ಸಾಮೂಹಿಕ ಹಲ್ಲೆ ಖಂಡಿಸಿ, ಪ್ರಧಾನಿಗೆ ಬಹಿರಂಗ ಪತ್ರ ಬರೆದಿದ್ದ 49 ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವ ಕ್ರಮವನ್ನು ದೇಶದ ಎಲ್ಲ ಭಾಗದ ಸೆಲೆಬ್ರಿಟಿಗಳು ಖಂಡಿಸಿದ್ದಾರೆ.

ನಟ ನಾಸಿರುದ್ದೀನ್ ಶಾ, ಡ್ಯಾನ್ಸರ್ ಮಲ್ಲಿಕಾ ಸಾರಾಬಾಯಿ, ಲೇಖಕ ಅಶೋಕ್ ವಾಜಪೇಯಿ, ನಯನತಾರಾ ಸೆಹಗಲ್, ಶಶಿ ದೇಶಪಾಂಡೆ, ರೋಮಿಲಾ ಥಾಪರ್, ಟಿ.ಎಂ ಕೃಷ್ಣಾ, ವಿವನ್ ಸುಂದರನ್ ಸೇರಿದಂತೆ 185 ಸೆಲೆಬ್ರಿಟಿಗಳು, 49 ಸೆಲೆಬ್ರಿಟಿಗಳ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಪತ್ರದ ಮೂಲಕ ಸೆಲೆಬ್ರಿಟಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ದೇಶದ್ರೋಹದ ಕೇಸ್ ದಾಖಲಿಸಿರುವುದನ್ನು ವಿರೋಧಿಸಿದ್ದಾರೆ.

ನಾಗರಿಕ ಸಮಾಜದ ಗೌರವಾನ್ವಿತ ಸದಸ್ಯರಂತೆ ಕರ್ತವ್ಯ ನಿರ್ವಹಿಸಿದ ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಾಮೂಹಿಕ ಹಲ್ಲೆ, ಗುಂಪುಗಳ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ್ದೇ ಅಪರಾಧದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಂತಿಯುತವಾಗಿ ಬದುಕು ನಡೆಸುತ್ತಿರುವ ಜನತೆಯನ್ನು ಪ್ರೀತಿಸಬೇಕು. ನಮ್ಮ ಸಂವಿಧಾನ ಜಾತ್ಯಾತೀತ ರಾಷ್ಟ್ರವನ್ನಾಗಿಸಿದೆ. ಇಲ್ಲಿ ಎಲ್ಲಾ ಜಾತಿ, ಸಮುದಾಯ ಹಾಗೂ ಜನರಿಗೆ ಸಮಾನ ಹಕ್ಕು ಮತ್ತು ಕರ್ತವ್ಯಗಳಿವೆ. ಮುಸ್ಲಿಂ ಮತ್ತು ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ ಪ್ರಕಾರ, 2016ರಲ್ಲಿ ದಲಿತರ ವಿರುದ್ಧ 840ಕ್ಕಿಂತ ಹೆಚ್ಚು ದೌರ್ಜನ್ಯ ನಡೆದಿರುವ ಬಗ್ಗೆ ವರದಿಯಾಗಿದೆ. ಜನವರಿ 1, 2009ರಿಂದ ಅಕ್ಟೋಬರ್ 29, 2018ರವರೆಗೆ ಧಾರ್ಮಿಕ ವಿಚಾರವಾಗಿ 254 ಅಪರಾಧ ವರದಿಗಳಾಗಿವೆ. ಧಾರ್ಮಿಕ ವಿಚಾರವಾಗಿ ನಡೆದ ಅಪರಾಧಗಳಲ್ಲಿ ಕನಿಷ್ಠ 91 ಮಂದಿ ಮೃತಪಟ್ಟಿದ್ದು, 579 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದೆ. ನಾಗರಿಕರ ಧಾರ್ಮಿಕ ಅಪರಾಧ ವರದಿ ಪ್ರಕಾರ, ಭಾರತದ ಜನಸಂಖ್ಯೆಯ ಶೇ.14ರಲ್ಲಿ, ಮುಸ್ಲಿಮರು ಶೇ. 62 ಪ್ರಕರಣಗಳಲ್ಲಿ ಬಲಿಪಶುವಾಗಿದ್ದಾರೆ. ಶೇ. 14 ರಷ್ಟು ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ಬಲಿಯಾಗಿದ್ದಾರೆ. ಅಷ್ಟೇ ಅಲ್ಲ 2014ರಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸುಮಾರು ಶೇ. 90ರಷ್ಟು ದಾಳಿ ನಡದಿರುವ ಪ್ರಕರಣಗಳು ವರದಿ ಆಗಿರುವುದನ್ನು ಉಲ್ಲೇಖಿಸಿದ್ದಾರೆ.

ಜೈ ಶ್ರೀರಾಮ್ ಘೋಷಣೆ ಯುದ್ಧದ ಭಯದ ವಾತಾವರಣ ನಿರ್ಮಿಸಿದೆ. ಧಾರ್ಮಿಕತೆಯ ಹೆಸರಲ್ಲಿ ಹಲವು ಘಟನೆಗಳು ನಡೆದಿವೆ. ಧರ್ಮದ ಹೆಸರಲ್ಲಿ ಸಾಮೂಹಿಕ ಹಲ್ಲೆಗಳು ನಡೆದಿದ್ದು, ದೇಶದಲ್ಲಿ ಭೀತಿ ಹುಟ್ಟಿಸಿವೆ ಎಂದು ಸೆಲೆಬ್ರಿಟಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಂದ್ರ ಸರ್ಕಾರದ ದೌರ್ಜನ್ಯ ಮತ್ತು ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತರೆಲ್ಲರೂ ಒಕ್ಕೊರಲಿನಿಂದ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...