Homeಚಳವಳಿಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌ ವಿರುದ್ಧ ದೇಶಾದ್ಯಂತ ದನಿಯೆತ್ತಿದ ಕಲಾವಿದರು: ಬೆಂಬಲದ ಮಹಾಪೂರ

ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌ ವಿರುದ್ಧ ದೇಶಾದ್ಯಂತ ದನಿಯೆತ್ತಿದ ಕಲಾವಿದರು: ಬೆಂಬಲದ ಮಹಾಪೂರ

- Advertisement -
- Advertisement -

49 ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವುದನ್ನು ಖಂಡಿಸಿ, ಸಾಂಸ್ಕೃತಿಕ ಸಮುದಾಯದ 185 ಸೆಲೆಬ್ರಿಟಿಗಳು ಪತ್ರ ಚಳವಳಿ ಆರಂಭಿಸಿದ್ದಾರೆ. ಬಿಹಾರದ ಮುಜಫ್ಫರ್‍ಪುರದಲ್ಲಿ ನಡೆದ ಸಾಮೂಹಿಕ ಹಲ್ಲೆ ಖಂಡಿಸಿ, ಪ್ರಧಾನಿಗೆ ಬಹಿರಂಗ ಪತ್ರ ಬರೆದಿದ್ದ 49 ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವ ಕ್ರಮವನ್ನು ದೇಶದ ಎಲ್ಲ ಭಾಗದ ಸೆಲೆಬ್ರಿಟಿಗಳು ಖಂಡಿಸಿದ್ದಾರೆ.

ನಟ ನಾಸಿರುದ್ದೀನ್ ಶಾ, ಡ್ಯಾನ್ಸರ್ ಮಲ್ಲಿಕಾ ಸಾರಾಬಾಯಿ, ಲೇಖಕ ಅಶೋಕ್ ವಾಜಪೇಯಿ, ನಯನತಾರಾ ಸೆಹಗಲ್, ಶಶಿ ದೇಶಪಾಂಡೆ, ರೋಮಿಲಾ ಥಾಪರ್, ಟಿ.ಎಂ ಕೃಷ್ಣಾ, ವಿವನ್ ಸುಂದರನ್ ಸೇರಿದಂತೆ 185 ಸೆಲೆಬ್ರಿಟಿಗಳು, 49 ಸೆಲೆಬ್ರಿಟಿಗಳ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಪತ್ರದ ಮೂಲಕ ಸೆಲೆಬ್ರಿಟಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ದೇಶದ್ರೋಹದ ಕೇಸ್ ದಾಖಲಿಸಿರುವುದನ್ನು ವಿರೋಧಿಸಿದ್ದಾರೆ.

ನಾಗರಿಕ ಸಮಾಜದ ಗೌರವಾನ್ವಿತ ಸದಸ್ಯರಂತೆ ಕರ್ತವ್ಯ ನಿರ್ವಹಿಸಿದ ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಾಮೂಹಿಕ ಹಲ್ಲೆ, ಗುಂಪುಗಳ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ್ದೇ ಅಪರಾಧದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಂತಿಯುತವಾಗಿ ಬದುಕು ನಡೆಸುತ್ತಿರುವ ಜನತೆಯನ್ನು ಪ್ರೀತಿಸಬೇಕು. ನಮ್ಮ ಸಂವಿಧಾನ ಜಾತ್ಯಾತೀತ ರಾಷ್ಟ್ರವನ್ನಾಗಿಸಿದೆ. ಇಲ್ಲಿ ಎಲ್ಲಾ ಜಾತಿ, ಸಮುದಾಯ ಹಾಗೂ ಜನರಿಗೆ ಸಮಾನ ಹಕ್ಕು ಮತ್ತು ಕರ್ತವ್ಯಗಳಿವೆ. ಮುಸ್ಲಿಂ ಮತ್ತು ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ ಪ್ರಕಾರ, 2016ರಲ್ಲಿ ದಲಿತರ ವಿರುದ್ಧ 840ಕ್ಕಿಂತ ಹೆಚ್ಚು ದೌರ್ಜನ್ಯ ನಡೆದಿರುವ ಬಗ್ಗೆ ವರದಿಯಾಗಿದೆ. ಜನವರಿ 1, 2009ರಿಂದ ಅಕ್ಟೋಬರ್ 29, 2018ರವರೆಗೆ ಧಾರ್ಮಿಕ ವಿಚಾರವಾಗಿ 254 ಅಪರಾಧ ವರದಿಗಳಾಗಿವೆ. ಧಾರ್ಮಿಕ ವಿಚಾರವಾಗಿ ನಡೆದ ಅಪರಾಧಗಳಲ್ಲಿ ಕನಿಷ್ಠ 91 ಮಂದಿ ಮೃತಪಟ್ಟಿದ್ದು, 579 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದೆ. ನಾಗರಿಕರ ಧಾರ್ಮಿಕ ಅಪರಾಧ ವರದಿ ಪ್ರಕಾರ, ಭಾರತದ ಜನಸಂಖ್ಯೆಯ ಶೇ.14ರಲ್ಲಿ, ಮುಸ್ಲಿಮರು ಶೇ. 62 ಪ್ರಕರಣಗಳಲ್ಲಿ ಬಲಿಪಶುವಾಗಿದ್ದಾರೆ. ಶೇ. 14 ರಷ್ಟು ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ಬಲಿಯಾಗಿದ್ದಾರೆ. ಅಷ್ಟೇ ಅಲ್ಲ 2014ರಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸುಮಾರು ಶೇ. 90ರಷ್ಟು ದಾಳಿ ನಡದಿರುವ ಪ್ರಕರಣಗಳು ವರದಿ ಆಗಿರುವುದನ್ನು ಉಲ್ಲೇಖಿಸಿದ್ದಾರೆ.

ಜೈ ಶ್ರೀರಾಮ್ ಘೋಷಣೆ ಯುದ್ಧದ ಭಯದ ವಾತಾವರಣ ನಿರ್ಮಿಸಿದೆ. ಧಾರ್ಮಿಕತೆಯ ಹೆಸರಲ್ಲಿ ಹಲವು ಘಟನೆಗಳು ನಡೆದಿವೆ. ಧರ್ಮದ ಹೆಸರಲ್ಲಿ ಸಾಮೂಹಿಕ ಹಲ್ಲೆಗಳು ನಡೆದಿದ್ದು, ದೇಶದಲ್ಲಿ ಭೀತಿ ಹುಟ್ಟಿಸಿವೆ ಎಂದು ಸೆಲೆಬ್ರಿಟಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಂದ್ರ ಸರ್ಕಾರದ ದೌರ್ಜನ್ಯ ಮತ್ತು ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತರೆಲ್ಲರೂ ಒಕ್ಕೊರಲಿನಿಂದ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...