Homeಚಳವಳಿಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌ ವಿರುದ್ಧ ದೇಶಾದ್ಯಂತ ದನಿಯೆತ್ತಿದ ಕಲಾವಿದರು: ಬೆಂಬಲದ ಮಹಾಪೂರ

ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌ ವಿರುದ್ಧ ದೇಶಾದ್ಯಂತ ದನಿಯೆತ್ತಿದ ಕಲಾವಿದರು: ಬೆಂಬಲದ ಮಹಾಪೂರ

- Advertisement -
- Advertisement -

49 ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವುದನ್ನು ಖಂಡಿಸಿ, ಸಾಂಸ್ಕೃತಿಕ ಸಮುದಾಯದ 185 ಸೆಲೆಬ್ರಿಟಿಗಳು ಪತ್ರ ಚಳವಳಿ ಆರಂಭಿಸಿದ್ದಾರೆ. ಬಿಹಾರದ ಮುಜಫ್ಫರ್‍ಪುರದಲ್ಲಿ ನಡೆದ ಸಾಮೂಹಿಕ ಹಲ್ಲೆ ಖಂಡಿಸಿ, ಪ್ರಧಾನಿಗೆ ಬಹಿರಂಗ ಪತ್ರ ಬರೆದಿದ್ದ 49 ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವ ಕ್ರಮವನ್ನು ದೇಶದ ಎಲ್ಲ ಭಾಗದ ಸೆಲೆಬ್ರಿಟಿಗಳು ಖಂಡಿಸಿದ್ದಾರೆ.

ನಟ ನಾಸಿರುದ್ದೀನ್ ಶಾ, ಡ್ಯಾನ್ಸರ್ ಮಲ್ಲಿಕಾ ಸಾರಾಬಾಯಿ, ಲೇಖಕ ಅಶೋಕ್ ವಾಜಪೇಯಿ, ನಯನತಾರಾ ಸೆಹಗಲ್, ಶಶಿ ದೇಶಪಾಂಡೆ, ರೋಮಿಲಾ ಥಾಪರ್, ಟಿ.ಎಂ ಕೃಷ್ಣಾ, ವಿವನ್ ಸುಂದರನ್ ಸೇರಿದಂತೆ 185 ಸೆಲೆಬ್ರಿಟಿಗಳು, 49 ಸೆಲೆಬ್ರಿಟಿಗಳ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಪತ್ರದ ಮೂಲಕ ಸೆಲೆಬ್ರಿಟಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ದೇಶದ್ರೋಹದ ಕೇಸ್ ದಾಖಲಿಸಿರುವುದನ್ನು ವಿರೋಧಿಸಿದ್ದಾರೆ.

ನಾಗರಿಕ ಸಮಾಜದ ಗೌರವಾನ್ವಿತ ಸದಸ್ಯರಂತೆ ಕರ್ತವ್ಯ ನಿರ್ವಹಿಸಿದ ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಾಮೂಹಿಕ ಹಲ್ಲೆ, ಗುಂಪುಗಳ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ್ದೇ ಅಪರಾಧದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಂತಿಯುತವಾಗಿ ಬದುಕು ನಡೆಸುತ್ತಿರುವ ಜನತೆಯನ್ನು ಪ್ರೀತಿಸಬೇಕು. ನಮ್ಮ ಸಂವಿಧಾನ ಜಾತ್ಯಾತೀತ ರಾಷ್ಟ್ರವನ್ನಾಗಿಸಿದೆ. ಇಲ್ಲಿ ಎಲ್ಲಾ ಜಾತಿ, ಸಮುದಾಯ ಹಾಗೂ ಜನರಿಗೆ ಸಮಾನ ಹಕ್ಕು ಮತ್ತು ಕರ್ತವ್ಯಗಳಿವೆ. ಮುಸ್ಲಿಂ ಮತ್ತು ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ ಪ್ರಕಾರ, 2016ರಲ್ಲಿ ದಲಿತರ ವಿರುದ್ಧ 840ಕ್ಕಿಂತ ಹೆಚ್ಚು ದೌರ್ಜನ್ಯ ನಡೆದಿರುವ ಬಗ್ಗೆ ವರದಿಯಾಗಿದೆ. ಜನವರಿ 1, 2009ರಿಂದ ಅಕ್ಟೋಬರ್ 29, 2018ರವರೆಗೆ ಧಾರ್ಮಿಕ ವಿಚಾರವಾಗಿ 254 ಅಪರಾಧ ವರದಿಗಳಾಗಿವೆ. ಧಾರ್ಮಿಕ ವಿಚಾರವಾಗಿ ನಡೆದ ಅಪರಾಧಗಳಲ್ಲಿ ಕನಿಷ್ಠ 91 ಮಂದಿ ಮೃತಪಟ್ಟಿದ್ದು, 579 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದೆ. ನಾಗರಿಕರ ಧಾರ್ಮಿಕ ಅಪರಾಧ ವರದಿ ಪ್ರಕಾರ, ಭಾರತದ ಜನಸಂಖ್ಯೆಯ ಶೇ.14ರಲ್ಲಿ, ಮುಸ್ಲಿಮರು ಶೇ. 62 ಪ್ರಕರಣಗಳಲ್ಲಿ ಬಲಿಪಶುವಾಗಿದ್ದಾರೆ. ಶೇ. 14 ರಷ್ಟು ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ಬಲಿಯಾಗಿದ್ದಾರೆ. ಅಷ್ಟೇ ಅಲ್ಲ 2014ರಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸುಮಾರು ಶೇ. 90ರಷ್ಟು ದಾಳಿ ನಡದಿರುವ ಪ್ರಕರಣಗಳು ವರದಿ ಆಗಿರುವುದನ್ನು ಉಲ್ಲೇಖಿಸಿದ್ದಾರೆ.

ಜೈ ಶ್ರೀರಾಮ್ ಘೋಷಣೆ ಯುದ್ಧದ ಭಯದ ವಾತಾವರಣ ನಿರ್ಮಿಸಿದೆ. ಧಾರ್ಮಿಕತೆಯ ಹೆಸರಲ್ಲಿ ಹಲವು ಘಟನೆಗಳು ನಡೆದಿವೆ. ಧರ್ಮದ ಹೆಸರಲ್ಲಿ ಸಾಮೂಹಿಕ ಹಲ್ಲೆಗಳು ನಡೆದಿದ್ದು, ದೇಶದಲ್ಲಿ ಭೀತಿ ಹುಟ್ಟಿಸಿವೆ ಎಂದು ಸೆಲೆಬ್ರಿಟಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಂದ್ರ ಸರ್ಕಾರದ ದೌರ್ಜನ್ಯ ಮತ್ತು ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತರೆಲ್ಲರೂ ಒಕ್ಕೊರಲಿನಿಂದ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...