Homeಮುಖಪುಟ1,911 ವಿದ್ಯಾರ್ಥಿಗಳಿಗೆ 19 ಕೋಟಿ ರೂ. ಸೈಬರ್ ವಂಚನೆ

1,911 ವಿದ್ಯಾರ್ಥಿಗಳಿಗೆ 19 ಕೋಟಿ ರೂ. ಸೈಬರ್ ವಂಚನೆ

- Advertisement -
- Advertisement -

ಕೋಲ್ಕತಾ:  ಪಶ್ಚಿಮ ಬಂಗಾಳ ಸರಕಾರವು ಜಾರಿಗೆ ತಂದಿರುವ “ತರುನೆರ್ ಸ್ವಪ್ನೊ” ( ಯುವಕರ ಕನಸು) ಎಂಬ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗಾಗಿ ರೂ.10,000 ಒದಗಿಸುವ  ಯೋಜನೆಯಾಗಿದೆ. ಇದರಲ್ಲಿ ಸುಮಾರು 16 ಲಕ್ಷ ವಿದ್ಯಾರ್ಥಿಗಳು ಫಲಾನುಭವಿಗಳಾಗಿದ್ದು, ಇದರಲ್ಲಿ  1,911ರಷ್ಟು ವಿದ್ಯಾರ್ಥಿಗಳಿಗೆ ಸುಮಾರು 19 ಕೋಟಿ ಸೈಬರ್ ಕ್ರೈಂ ವಂಚನೆ ನಡೆದ ಘಟನೆ ವರದಿಯಾಗಿದೆ.

ಈ ಸಂಬಂಧ 93 ದೂರುಗಳು ದಾಖಲಾಗಿದ್ದು, 11 ಜನರನ್ನು ಬಂಧಿಸಲಾಗಿದೆ.  ಈ ಪ್ರಕರಣದಲ್ಲಿ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಜಾರ್ಖಾಂಡ್ ಗಳನ್ನೊಳಗೊಂಡಂತೆ ಅಂತರ್ ರಾಜ್ಯ ಗ್ಯಾಂಗ್ ಗಳು ಭಾಗಿಯಾಗಿರುವುದು ಬಹಿರಂಗಗೊಂಡಿದೆ ಎಂದು ದಕ್ಷಿಣ ಬೆಂಗಾಳ ಹೆಚ್ಚವರಿ ಪೊಲೀಸ್ ಮಹಾನಿರ್ದೇಶಕ ಸುಪ್ರಿತಿಂ ಸಾರ್ಕರ್ ಹೇಳಿದ್ದಾರೆ.

ಬಂಧಿತರಲ್ಲಿ ಕೆಲವರು ಸರಕಾರಿ ಸೌಲಭ್ಯಗಳಲ್ಲಿ ಹಣ ವರ್ಗಾವಣೆ ಮಾಡುವ ಡಿಬಿಟಿ ಯೋಜನೆಗಳು ಮತ್ತು ನ್ಯಾಷನಲ್ ಸ್ಕಾಲರ್ ಶಿಪ್ ಪೋರ್ಟಲ್ ಗಳನ್ನು ಒಳಗೊಂಡಂತೆ ಈ ಹಿಂದಿನ ಹಗರಣಗಳಲ್ಲಿ ದುರುಪಯೋಗಪಡಿಸಿಕೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಸುಪ್ರಿತಿಂ ಸಾರ್ಕರ್ ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಹಣ ವರ್ಗಾವಣೆ ವಂಚನೆಯ ಸೂತ್ರದಾರರು ಮತ್ತು ಹ್ಯಾಕರ್ ಗಳನ್ನು ಬಂಧಿಸಲು ರಾಜ್ಯಾದ್ಯಂತ ಕೋಲ್ಕತಾ ಪೊಲೀಸ್ ಮತ್ತು ಸಿಐಡಿ ಇಲಾಖೆಗಳು ದಾಳಿಯನ್ನು ನಡೆಸುತ್ತಿವೆ. ಈ ಪ್ರಕರಣದಲ್ಲಿ ಬ್ಯಾಂಕ್ ಅಕೌಂಟ್ ಹೊಂದಿರುವ ಹತ್ತಿರದ ಚೋಪ್ರಾ, ಇಸ್ಲಾಂಪುರ ನಿವಾಸಿಗಳಿಗೆ ಹಣ ವರ್ಗಾವಣೆಯಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಈ ಯೋಜನೆಯಡಿಯಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಸರಕಾರಿ ಅನುದಾನಿತ ಶಾಲೆಗಳು ಮತ್ತು ಮದ್ರಾಸಗಳ ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳೂ ಕೂಡ ಒಂದು ಬಾರಿಗೆ ಮಾತ್ರ ಅನ್ವಯವಾಗುವ ರೂ. 10,000 ವನ್ನು ಲ್ಯಾಪ್ ಟ್ಯಾಪ್ ಖರೀದಿಗಾಗಿ ಪಡೆಯಬಹುದಾಗಿದೆ.  ಸಂಬಂಧಿಸಿದ ಶಾಲೆಗಳು  ಸರಕಾರಿ ಪೋರ್ಟಲ್ ನಲ್ಲಿ ಅರ್ಹ ವಿದ್ಯಾರ್ಥಿಗಳ ಬ್ಯಾಂಕ್ ಅಕೌಂಟಿನ ಮಾಹಿತಿಯನ್ನು ರವಾನಿಸುತ್ತವೆ. ನಂತರ ಹಣವು ಫಲಾನುಭವಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆಯಾಗುತ್ತದೆ.

ವಿದ್ಯಾರ್ಥಿಗಳ ಅಂಕಿ-ಅಂಶಗಳನ್ನು ಶಾಲೆಯ ಆಡಳಿತ ವರ್ಗವು ಪೋರ್ಟಲ್ ನಲ್ಲಿ ತಾನು ಉಪಯೋಗಿಸುತ್ತಿರುವ ಐಡಿಯೊಂದಿಗೆ ಲಾಗ್  ಮಾಡುವ ಆಗತ್ಯವಿದೆ.  ಪ್ರಾಥಮಿಕ ತನಿಖೆ ಪ್ರಕಾರ ಹ್ಯಾಕರ್ ಗಳು ಈ ವಿದ್ಯಾರ್ಥಿಗಳ ಬ್ಯಾಂಕ್ ಅಕೌಂಟಿಗೆ ತಮ್ಮ ಬ್ಯಾಂಕ್ ಅಕೌಂಟ್ ನಂಬರ್ ಅನ್ನು ಬದಲಾಯಿಸಲು ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ….ಝಾನ್ಸಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 10 ನವಜಾತ ಶಿಶುಗಳು ಸಜೀವ ದಹನ,16 ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...