Homeಅಂತರಾಷ್ಟ್ರೀಯಹಿಂಸಾಚಾರಕ್ಕೆ 19 ಸಾವು: ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ನೇಪಾಳ ಸರ್ಕಾರ

ಹಿಂಸಾಚಾರಕ್ಕೆ 19 ಸಾವು: ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ನೇಪಾಳ ಸರ್ಕಾರ

- Advertisement -
- Advertisement -

ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ತಾಣಗಳ ಮೇಲಿನ ನಿಷೇಧವನ್ನು ವಿರೋಧಿಸಿ ಯುವಜನರು ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಸೋಮವಾರ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಮತ್ತು 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಪ್ರಕ್ಷುಬ್ಧತೆಯು ಪ್ರಧಾನಿ ಕೆ.ಪಿ ಶರ್ಮಾ ಒಲಿ ಅವರ ಸಮ್ಮಿಶ್ರ ಸರ್ಕಾರದ ಪಾಲುದಾರ ನೇಪಾಳಿ ಕಾಂಗ್ರೆಸ್‌ನ ಗೃಹ ಸಚಿವ ರಮೇಶ್ ಲೇಖಕ್ ಅವರ ರಾಜೀನಾಮೆಗೆ ಕಾರಣವಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಪರಿಸ್ಥಿತಿಯ ಜವಾಬ್ದಾರಿಯನ್ನು ಹೊತ್ತುಕೊಂಡು ಲೇಖಕ್ ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ಪಿಟಿಐಗೆ ತಿಳಿಸಿವೆ.

ಹಿಂಸಾಚಾರ ತೀವ್ರಗೊಳ್ಳುತ್ತಿದ್ದಂತೆ, ನೇಪಾಳಿ ಸೈನ್ಯವನ್ನು ಕಠ್ಮಂಡುವಿನಲ್ಲಿ ನಿಯೋಜಿಸಲಾಗಿದೆ. ಸೈನಿಕರು ನ್ಯೂ ಬನೇಶ್ವರ್‌ನಲ್ಲಿರುವ ಸಂಸತ್ ಸಂಕೀರ್ಣದ ಸುತ್ತಲಿನ ರಸ್ತೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ರಾತ್ರಿ ತಡವಾಗಿ, ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ಆದೇಶವನ್ನು ಹಿಂತೆಗೆದುಕೊಂಡಿರುವುದಾಗಿ ಸರ್ಕಾರ ಘೋಷಿಸಿದೆ.

ತುರ್ತು ಸಚಿವ ಸಂಪುಟ ಸಭೆಯ ನಂತರ, ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಂಡಿದೆ ಎಂದು ನೇಪಾಳ ಸಂವಹನ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪೃಥ್ವಿ ಸುಬ್ಬ ಗುರುಂಗ್ ತಿಳಿಸಿದ್ಧಾರೆ.

‘ಜೆನ್‌ ಝೀ’ಗಳ ಬೇಡಿಕೆಗಳ ಮೇರೆಗೆ ಸಾಮಾಜಿಕ ಮಾಧ್ಯಮ ತಾಣಗಳನ್ನು ಪುನರಾರಂಭಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮಾಹಿತಿ ಸಚಿವಾಲಯವು ಸಂಬಂಧಿತ ಸಂಸ್ಥೆಗಳಿಗೆ ಆದೇಶಿಸಿದೆ ಎಂದು ಗುರುಂಗ್ ಹೇಳಿದ್ದಾರೆ.

ನೇಪಾಳ ಪೊಲೀಸ್ ವಕ್ತಾರ ಬಿನೋದ್ ಘಿಮಿರೆ ಮಾತನಾಡಿ, ಪ್ರತಿಭಟನೆಯ ಸಂದರ್ಭದಲ್ಲಿ ಕಠ್ಮಂಡುವಿನ ವಿವಿಧ ಭಾಗಗಳಲ್ಲಿ ನಡೆದ ಘರ್ಷಣೆಯಲ್ಲಿ 17 ಜನರು ಸಾವನ್ನಪ್ಪಿದ್ದಾರೆ ಮತ್ತು ಪೂರ್ವ ನೇಪಾಳದ ಸುನ್ಸಾರಿ ಜಿಲ್ಲೆಯಲ್ಲಿ ಇಬ್ಬರು ಪ್ರತಿಭಟನಾಕಾರರು ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸಾವುಗಳ ಬಗ್ಗೆ ಪ್ರಧಾನಿ ಓಲಿ ಅವರು ದುಖಃ ವ್ಯಕ್ತಪಡಿಸಿದ್ದು, ಶಾಂತಿಯುತ ಪ್ರತಿಭಟನೆ ಹಿಂಸೆಗೆ ತಿರುಗಲು ವ್ಯವಸ್ಥಿತ ಪಿತೂರಿ ಕಾರಣ ಎಂದಿದ್ದಾರೆ. ಘಟನೆ ಕುರಿತು ತನಿಖೆಗೆ ಆದೇಶಿಸಿರುವ ಅವರು, 15 ದಿನಗಳಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

‘ಪಾಲೆಸ್ತೀನ್ ಆಕ್ಷನ್’ ಬೆಂಬಲಿಸಿ ಪ್ರತಿಭಟನೆ: 890ಕ್ಕೂ ಹೆಚ್ಚು ಜನರನ್ನು ಭಯೋತ್ಪಾದನಾ ಕಾಯ್ದೆ ಬಂಧಿಸಿದ ಲಂಡನ್ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...