Homeಮುಖಪುಟಸಚಿನ್ ಪೈಲಟ್‌ಗೆ 19 ಶಾಸಕರ ಬೆಂಬಲ: CM ಸ್ಥಾನಕ್ಕೆ ಪಟ್ಟು

ಸಚಿನ್ ಪೈಲಟ್‌ಗೆ 19 ಶಾಸಕರ ಬೆಂಬಲ: CM ಸ್ಥಾನಕ್ಕೆ ಪಟ್ಟು

- Advertisement -
- Advertisement -

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರೊಂದಿಗಿನ ವೈಮನಸ್ಸಿನ ಕಾರಣಕ್ಕಾಗಿ ಬಂಡಾಯವೆದ್ದಿರುವ ಉಪಮುಖ್ಯಮಂತ್ರಿ ಸಚಿನ್ ಪೈಲಟ್ 19 ಶಾಸಕರ ಬೆಂಬಲವೊಂದಿದ್ದು, ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

16 ಕಾಂಗ್ರೆಸ್ ಶಾಸಕರು ಮತ್ತು ಮೂವರು ಪಕ್ಷೇತರರ ಬೆಂಬಲದೊಂದಿಗೆ ದೆಹಲಿಯಲ್ಲಿ ಬೀಡುಬಿಟ್ಟಿರುವ ಸಚಿನ್ ಪೈಲಟ್ ಏಕಕಾಲದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಬಿಜೆಪಿ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ರಾಜಸ್ಥಾನದ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಅವರು ಒಂದು ವೇಳೆ ಬಿಜೆಪಿ ಸಿಎಂ ಹುದ್ದೆ ನೀಡದಿದ್ದರೆ ಪ್ರಾದೇಶಿಕ ಪಕ್ಷ ಸ್ಥಾಪಿಸಲು ಮುಂದಾಲಿದ್ದಾರೆ ಎನ್ನಲಾಗುತ್ತಿದೆ.

ಮಧ್ಯಪ್ರದೇಶದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಸಂದರ್ಭದಲ್ಲಿಯೇ ಸಚಿನ್ ಪೈಲಟ್‌ರವರನ್ನು ಬಿಜೆಪಿ ಸಂಪರ್ಕಿಸಿತ್ತು ಎನ್ನಲಾಗುತ್ತಿದೆ. ಆದರೆ ಕಳೆದ ಶುಕ್ರವಾರ ಸರ್ಕಾರವನ್ನು ಅಸ್ಥಿರಗೊಳಿಸುವ ಆರೋಪದ ಮೇಲೆ ವಿಶೇಷ ಕಾರ್ಯಾಚರಣೆ ಗುಂಪು ಸಚಿನ್‌ ಪೈಲಟ್‌ರನ್ನು ಪ್ರಶ್ನಿಸಿ ಸಮನ್ಸ್ ನೀಡಿದ್ದು ಅವರನ್ನು ಕೆರಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಗೃಹ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ರವರು ಒಂದು ಕರೆ ಮಾಡಿ ವಿಚಾರಣೆಗೆ ನೋಟಿಸ್ ನೀಡಿರುವುದಾಗಿ ತಿಳಿಸುತ್ತಾರೆ. ಇದು ಒಬ್ಬ ಉಪಮುಖ್ಯಮಂತ್ರಿಯನ್ನು ನಡೆಸುಕೊಳ್ಳವ ವಿಧಾನವೇ? ಎಂದು ಪೈಲಟ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್‌ರವರನ್ನು ಭೇಟಿ ಮಾಡಿರುವ ಪೈಲಟ್ ಗೆಹ್ಲೋಟ್‌ ಜೊತೆಗಿನ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕ ಪಕ್ಷವನ್ನು ರಚಿಸಲು ಸಿದ್ಧನಿದ್ದೇನೆ ಮತ್ತು ಬಿಜೆಪಿಗೆ ಸೇರುವುದಿಲ್ಲ ಎಂದು ಸಚಿನ್ ಪೈಲಟ್ ಕಾಂಗ್ರೆಸ್ ಹೈಕಮಾಂಡ್‌ಗೆ ಸೂಚಿಸಿದ್ದಾರೆ ಕಾಂಗ್ರೆಸ್ ಹಿರಿಯ ಮುಖಂಡರು ತಿಳಿಸಿದ್ದಾರೆ. ಅದೇ ಸಮಯದಲ್ಲಿ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಸಿಎಂ ಸ್ಥಾನ ಕೊಟ್ಟರೆ ಮಾತ್ರ ಬೆಂಬಲ ಎಂದಿದ್ದಾರೆ ಎನ್ನಲಾಗಿದೆ.

ಸಚಿನ್ ಪೈಲಟ್‌ಗೆ ಮುಖ್ಯಮಂತ್ರಿ ಹುದ್ದೆ ನೀಡುವುದನ್ನು ಬಿಜೆಪಿ ತಳ್ಳಿಹಾಕಿದೆ ಎಂದು ಮೂಲಗಳು ತಿಳಿಸಿವೆ. ಇದು ಆಂತರಿಕ ನಾಯಕತ್ವದ ಸಮಸ್ಯೆಗಳನ್ನು ಹುಟ್ಟುಹಾಕಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ. ಆದರೂ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆಗೆ 45 ಶಾಸಕರ ಬೆಂಬಲವಿದ್ದು, ಅವರ ಮೊದಲ ಆದ್ಯತೆ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಉರುಳಿಸುವುದು ಎಂದು ಮೂಲಗಳು ತಿಳಿಸಿವೆ.

ಸಚಿನ್ ಪೈಲಟ್‌ ಪ್ರಶ್ನಿಸಲು ಆದೇಶ ಹೊರಡಿಸಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಅಶೋಕ್ ಗೆಹ್ಲೋಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ. “ಸೋನಿಯಾ ಮತ್ತು ರಾಹುಲ್ ಗಾಂಧಿ ಇಬ್ಬರಿಗೂ ಪರಿಸ್ಥಿತಿಯ ಬಗ್ಗೆ ವಿವರಿಸಲಾಗಿದೆ. ಮಧ್ಯಪ್ರದೇಶದ ಪರಿಸ್ಥಿತಿ ಇಲ್ಲಿ ಮರಕಳಿಸಲು ನಾವು ಅನುಮತಿಸುವುದಿಲ್ಲ” ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ರಾತ್ರಿ ಎಲ್ಲಾ ಕಾಂಗ್ರೆಸ್ ಶಾಸಕರ ಸಭೆಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಕರೆದಿದ್ದಾರೆ.


ಇದನ್ನೂ ಒದಿ: ರಾಜಸ್ಥಾನದಲ್ಲಿ ಆಪರೇಷನ್ ಕಮಲ; ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಸಚಿನ್ ಪೈಲಟ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...