Homeಮುಖಪುಟಸಚಿನ್ ಪೈಲಟ್‌ಗೆ 19 ಶಾಸಕರ ಬೆಂಬಲ: CM ಸ್ಥಾನಕ್ಕೆ ಪಟ್ಟು

ಸಚಿನ್ ಪೈಲಟ್‌ಗೆ 19 ಶಾಸಕರ ಬೆಂಬಲ: CM ಸ್ಥಾನಕ್ಕೆ ಪಟ್ಟು

- Advertisement -
- Advertisement -

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರೊಂದಿಗಿನ ವೈಮನಸ್ಸಿನ ಕಾರಣಕ್ಕಾಗಿ ಬಂಡಾಯವೆದ್ದಿರುವ ಉಪಮುಖ್ಯಮಂತ್ರಿ ಸಚಿನ್ ಪೈಲಟ್ 19 ಶಾಸಕರ ಬೆಂಬಲವೊಂದಿದ್ದು, ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

16 ಕಾಂಗ್ರೆಸ್ ಶಾಸಕರು ಮತ್ತು ಮೂವರು ಪಕ್ಷೇತರರ ಬೆಂಬಲದೊಂದಿಗೆ ದೆಹಲಿಯಲ್ಲಿ ಬೀಡುಬಿಟ್ಟಿರುವ ಸಚಿನ್ ಪೈಲಟ್ ಏಕಕಾಲದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಬಿಜೆಪಿ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ರಾಜಸ್ಥಾನದ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಅವರು ಒಂದು ವೇಳೆ ಬಿಜೆಪಿ ಸಿಎಂ ಹುದ್ದೆ ನೀಡದಿದ್ದರೆ ಪ್ರಾದೇಶಿಕ ಪಕ್ಷ ಸ್ಥಾಪಿಸಲು ಮುಂದಾಲಿದ್ದಾರೆ ಎನ್ನಲಾಗುತ್ತಿದೆ.

ಮಧ್ಯಪ್ರದೇಶದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಸಂದರ್ಭದಲ್ಲಿಯೇ ಸಚಿನ್ ಪೈಲಟ್‌ರವರನ್ನು ಬಿಜೆಪಿ ಸಂಪರ್ಕಿಸಿತ್ತು ಎನ್ನಲಾಗುತ್ತಿದೆ. ಆದರೆ ಕಳೆದ ಶುಕ್ರವಾರ ಸರ್ಕಾರವನ್ನು ಅಸ್ಥಿರಗೊಳಿಸುವ ಆರೋಪದ ಮೇಲೆ ವಿಶೇಷ ಕಾರ್ಯಾಚರಣೆ ಗುಂಪು ಸಚಿನ್‌ ಪೈಲಟ್‌ರನ್ನು ಪ್ರಶ್ನಿಸಿ ಸಮನ್ಸ್ ನೀಡಿದ್ದು ಅವರನ್ನು ಕೆರಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಗೃಹ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ರವರು ಒಂದು ಕರೆ ಮಾಡಿ ವಿಚಾರಣೆಗೆ ನೋಟಿಸ್ ನೀಡಿರುವುದಾಗಿ ತಿಳಿಸುತ್ತಾರೆ. ಇದು ಒಬ್ಬ ಉಪಮುಖ್ಯಮಂತ್ರಿಯನ್ನು ನಡೆಸುಕೊಳ್ಳವ ವಿಧಾನವೇ? ಎಂದು ಪೈಲಟ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್‌ರವರನ್ನು ಭೇಟಿ ಮಾಡಿರುವ ಪೈಲಟ್ ಗೆಹ್ಲೋಟ್‌ ಜೊತೆಗಿನ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕ ಪಕ್ಷವನ್ನು ರಚಿಸಲು ಸಿದ್ಧನಿದ್ದೇನೆ ಮತ್ತು ಬಿಜೆಪಿಗೆ ಸೇರುವುದಿಲ್ಲ ಎಂದು ಸಚಿನ್ ಪೈಲಟ್ ಕಾಂಗ್ರೆಸ್ ಹೈಕಮಾಂಡ್‌ಗೆ ಸೂಚಿಸಿದ್ದಾರೆ ಕಾಂಗ್ರೆಸ್ ಹಿರಿಯ ಮುಖಂಡರು ತಿಳಿಸಿದ್ದಾರೆ. ಅದೇ ಸಮಯದಲ್ಲಿ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಸಿಎಂ ಸ್ಥಾನ ಕೊಟ್ಟರೆ ಮಾತ್ರ ಬೆಂಬಲ ಎಂದಿದ್ದಾರೆ ಎನ್ನಲಾಗಿದೆ.

ಸಚಿನ್ ಪೈಲಟ್‌ಗೆ ಮುಖ್ಯಮಂತ್ರಿ ಹುದ್ದೆ ನೀಡುವುದನ್ನು ಬಿಜೆಪಿ ತಳ್ಳಿಹಾಕಿದೆ ಎಂದು ಮೂಲಗಳು ತಿಳಿಸಿವೆ. ಇದು ಆಂತರಿಕ ನಾಯಕತ್ವದ ಸಮಸ್ಯೆಗಳನ್ನು ಹುಟ್ಟುಹಾಕಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ. ಆದರೂ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆಗೆ 45 ಶಾಸಕರ ಬೆಂಬಲವಿದ್ದು, ಅವರ ಮೊದಲ ಆದ್ಯತೆ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಉರುಳಿಸುವುದು ಎಂದು ಮೂಲಗಳು ತಿಳಿಸಿವೆ.

ಸಚಿನ್ ಪೈಲಟ್‌ ಪ್ರಶ್ನಿಸಲು ಆದೇಶ ಹೊರಡಿಸಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಅಶೋಕ್ ಗೆಹ್ಲೋಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ. “ಸೋನಿಯಾ ಮತ್ತು ರಾಹುಲ್ ಗಾಂಧಿ ಇಬ್ಬರಿಗೂ ಪರಿಸ್ಥಿತಿಯ ಬಗ್ಗೆ ವಿವರಿಸಲಾಗಿದೆ. ಮಧ್ಯಪ್ರದೇಶದ ಪರಿಸ್ಥಿತಿ ಇಲ್ಲಿ ಮರಕಳಿಸಲು ನಾವು ಅನುಮತಿಸುವುದಿಲ್ಲ” ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ರಾತ್ರಿ ಎಲ್ಲಾ ಕಾಂಗ್ರೆಸ್ ಶಾಸಕರ ಸಭೆಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಕರೆದಿದ್ದಾರೆ.


ಇದನ್ನೂ ಒದಿ: ರಾಜಸ್ಥಾನದಲ್ಲಿ ಆಪರೇಷನ್ ಕಮಲ; ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಸಚಿನ್ ಪೈಲಟ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...