Homeಮುಖಪುಟರಾಹುಲ್ ಗಾಂಧಿಗೆ 19 ಪಕ್ಷಗಳ ಬೆಂಬಲ: ಕಾಂಗ್ರೆಸ್‌ನಿಂದ ದೇಶಾದ್ಯಂತ ಒಂದು ತಿಂಗಳ ಜೈ ಭಾರತ್ ಮಹಾಸತ್ಯಾಗ್ರಹ...

ರಾಹುಲ್ ಗಾಂಧಿಗೆ 19 ಪಕ್ಷಗಳ ಬೆಂಬಲ: ಕಾಂಗ್ರೆಸ್‌ನಿಂದ ದೇಶಾದ್ಯಂತ ಒಂದು ತಿಂಗಳ ಜೈ ಭಾರತ್ ಮಹಾಸತ್ಯಾಗ್ರಹ ಹೋರಾಟ

- Advertisement -
- Advertisement -

ಕಾಂಗ್ರೆಸ್ ಪಕ್ಷವು ಬ್ಲಾಕ್, ಜಿಲ್ಲೆ, ರಾಜ್ಯ ಮತ್ತು ದೇಶ ಮಟ್ಟದಲ್ಲಿ ತಿಂಗಳು ಪೂರ್ತಿ ಜೈ ಭಾರತ್ ಮಹಾ ಸತ್ಯಾಗ್ರಹ ಹೋರಾಟ ನಡೆಸುತ್ತಿದೆ. ಈ ಹೋರಾಟ ರಾಹುಲ್‌ಗಾಂಧಿಗಾಗಿ ಅಲ್ಲ ಬದಲಿಗೆ ಆಪತ್ತಿನಲ್ಲಿರುವ ಪ್ರಜಾತಂತ್ರಕ್ಕಾಗಿ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ತಿಳಿಸಿದ್ದಾರೆ.

ಇಂತು ರಾತ್ರಿ 7 ಗಂಟೆಗೆ ಪ್ರಜಾತಂತ್ರ ಉಳಿಸಿ ಆಂದೋಲನ ಆರಂಭಿಸುತ್ತೇವೆ. ಇದಕ್ಕೆ 19 ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಸಾವರ್ಕರ್ ವಿಷಯದಲ್ಲಿ ಉದ್ಧವ್ ಠಾಕ್ರೆಯವರಿಗೆ ಭಿನ್ನಾಭಿಪ್ರಾಯವಿದ್ದರೂ ಸಹ ಅವರು ಬೆಂಬಲ ನೀಡಿದ್ದಾರೆ. ನಾವೆಲ್ಲ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನಮ್ಮ ಹೋರಾಟವಿರುವುದು ರಾಹುಲ್ ಗಾಂಧಿಯನ್ನು ಉಳಿಸುವುದಕ್ಕಾಗಿ ಅಲ್ಲ. ಬದಲಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ. ಅದಾನಿ ಮತ್ತು ನರೇಂದ್ರ ಮೋದಿ ನಡುವೆ ಏನು ಸಂಬಂಧ ಎಂಬುದು ನಮ್ಮ ಪ್ರಶ್ನೆಯಾಗಿದೆ. ಜಂಟಿ ಸಂಸದೀಯ ತನಿಖೆಗೆ ಸರ್ಕಾರ ಏಕೆ ಹೆದರುತ್ತಿದೆ ಎಂದು ಜೈರಾಂ ರಮೇಶ್ ಪ್ರಶ್ನಿಸಿದ್ದಾರೆ.

ಸರ್ಕಾರ ನೀರವ್ ಮೋದಿಯವರ ಮೇಲೆ ಸಮರ್ಪಕ ತನಿಖೆ ನಡೆಸದೇ ಕ್ಲೀನ್ ಚಿಟ್ ಕೊಟ್ಟಿತ್ತು. ಆನಂತರ ಜನರ ಎಷ್ಟೇ ಹೋರಾಟ ಮಾಡಿದರೂ, ವಿರೋಧ ಪಕ್ಷಗಳು ಎಷ್ಟೇ ಒತ್ತಾಯ ಮಾಡಿದರೂ ಸಹ ಜಾತಿಗಣತಿ ನಡೆಸಲಿಲ್ಲ. ಈಗ ಓಬಿಸಿಗಳಿಗೆ ಅನ್ಯಾಯವಾಗಿದೆ ಎಂದು ಸುಳ್ಳು ಹೇಳುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ಕಾನೂನು ತಂಡವು ಕೆಲಸ ಮಾಡುತ್ತಿದ್ದು, ಸೂರತ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ. ಒಂದು ತಿಂಗಳ ಕಾಲಾವಕಾಶವಿರುವುದರಿಂದ ಅಷ್ಟರಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.

ಮತ್ತೊರ್ವ ಮುಖಂಡ ಕೆ.ಸಿ ವೇಣುಗೋಪಾಲ್ ಮಾತನಾಡಿ, “ರಾಹುಲ್ ಗಾಂಧಿಯವರ ವಿರುದ್ಧ ತೀರ್ಪು ಬಂದ 24 ಗಂಟೆಯೊಳಗೆ ಅವರ ಲೋಕಸಭಾ ಸ್ಥಾನ ರದ್ದುಗೊಳಿಸಲಾಗುತ್ತದೆ. ಅವರು ಪತ್ರಿಕಾಗೋಷ್ಠಿ ನಡೆಸಿದ 24 ಗಂಟೆಯೊಳಗೆ ಅವರನ್ನು ಬಂಗಲೆಯಿಂದ ಒಕ್ಕಲೆಬ್ಬಿಸಲಾಗುತ್ತದೆ. ಆದರೆ ರಾಹುಲ್ ಗಾಂಧಿ ಬಂಗಲೆ ಬಗ್ಗೆ ಚಿಂತಿರಾಗಿಲ್ಲ. ಅವರನ್ನು ಬೆದರಿಸಿದರೆ ನಾವು ಹೆದರುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಕೋಲಾರದ ಸಂವಿಧಾನ ಉಳಿಸಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗಿ: ಕೆ.ಎಚ್ ಮುನಿಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...