Homeಮುಖಪುಟಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ

- Advertisement -
- Advertisement -

ಇಂದು ಆಧುನಿಕ ಶಿಕ್ಷಣದ ತಾಯಿ ಎಂದೇ ಕರೆಯಲ್ಪಡುವ ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನ. 1831ರಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ನೈಗಾಂನ್‌ನಲ್ಲಿ ಹುಟ್ಟಿದ ಸಾವಿತ್ರಿ ಬಾಯಿಯವರು ಎರಡು ಶತಮಾನಗಳ ಹಿಂದೆ ದಮನಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣವನ್ನು ಕೊಟ್ಟಂತಹ ಮೊದಲ ಶಿಕ್ಷಕಿ. ಗೆಳತಿ ಫಾತಿಮಾ ಶೇಕ್‌ರೊಂದಿಗೆ ಸೇರಿ ಬಾಲಕಿಯರ ಸಾಕ್ಷರತೆಗೆ ಅವಿಸ್ಮರಣೀಯ ಕೊಡುಗೆ ನೀಡಿದ ಸಾವಿತ್ರಿ ಬಾಯಿ ಅವರ 190 ನೇ ಜನ್ಮ ದಿನ ಇಂದು. ಈ ಹಿನ್ನಲೆಯಲ್ಲಿ ಅವರ ಜನ್ಮ ದಿನಕ್ಕೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಝಾದ್, “ಭಾರತದ ಮೊದಲ ಶಿಕ್ಷಕಿ, ಮನುವಾದದ ವಿರುದ್ಧ ಹೋರಾಡಿದ ಕ್ರಾಂತಿಜ್ಯೋತಿ ತಾಯಿ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆಯಂದು ಅವರಿಗೆ ಕೋಟಿ ನಮನಗಳು. ಜೈ ಸಾವಿತ್ರಿ, ಜೈ ಭೀಮ್” ಎಂದು ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಖ್ಯಾತ ನಟಿ ತಾಪ್ಸಿ ಪನ್ನು, “ಹೆಣ್ಣೊಬ್ಬಳು ಕಲಿತರೆ, ಕುಟುಂಬವೊಂದು ಕಲಿತಂತೆ; ಒಂದು ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ, ನೀವು ಭವಿಷ್ಯಕ್ಕೆ ಶಿಕ್ಷಣ ನೀಡಿದಂತೆ” ಎಂದು ಟ್ವೀಟ್ ಮಾಡಿದ್ದಾರೆ.

ಊನಾ ಚಳುವಳಿಯ ನಾಯಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಇಂದು ತಾಯಿ ಸಾವಿತ್ರಿಬಾಯಿ ಫುಲೆ ಜನ್ಮದಿನ. ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ. ಸಾವಿತ್ರಿ ಅಮ್ಮನಿಗೆ ನನ್ನ ಶುಭಾಶಯಗಳು. ಹಾಗೆಯೇ ಸುಧಾ, ಗುಲ್ಫಿಶಾ, ದೇವಂಗಾನ ಮತ್ತು ಇಂದು ಜೈಲಿನಲ್ಲಿದ್ದ ಎಲ್ಲ ಮಹಿಳೆಯರಿಗೆ ನನ್ನ ವಂದನೆ. ಯಾಕೆಂದರೆ ಅವರು ಕೂಡ ಸಾವಿತ್ರಿ ಬಾಯಿ ಅವರಂತೆಯೆ ಅನ್ಯಾಯದ ವಿರುದ್ಧ ಹೋರಾಡಿದವರು” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸಾವಿತ್ರಿ ಬಾಯಿ ಅವರ ಚಿತ್ರಕ್ಕೆ ನಮನ ಸಲ್ಲಿಸಿದರು.

ಇತಿಹಾಸಕಾರ ಇರ್ಫಾನ್ ಹಬೀಬ್, “ಸಾವಿತ್ರಿ ಬಾಯಿ ಮಹಿಳೆಯರಿಗೆ ಮತ್ತು ನಮ್ಮ ಸಮಾಜದಿಂದ ಬಹಿಷ್ಕಾರಕ್ಕೊಳಗಾದವರಿಗೆ ಶಿಕ್ಷಣವನ್ನು ಒದಗಿಸಿದವರಲ್ಲಿ ಮೊದಲಿಗರು. ಸಮಾನತೆಗಾಗಿ ಹೋರಾಡಿದ ತನ್ನ ಪತಿ ಜ್ಯೋತಿಬಾ ಫುಲೆಗೆ ಸಹಾಯ ಮಾಡಿದ್ದರು. ಸಾವಿತ್ರಿ ಬಾಯಿ ಫುಲೆ ಇಂದು 1831 ರಲ್ಲಿ ಜನಿಸಿದರು. ಭಾರತದ ಮೊದಲ ಮಹಿಳಾ ಶಿಕ್ಷಕರಲ್ಲಿ ಒಬ್ಬರು, ಜೀವನದುದ್ದಕ್ಕೂ ಶಿಕ್ಷಣಕ್ಕೆ ಬದ್ಧರಾಗಿದ್ದರು. ಅವರು ಸಮರ್ಥ ಬರಹಗಾರ ಮತ್ತು ಕವಯಿತ್ರಿಯೂ ಆಗಿದ್ದರು” ಎಂದು ಸಾವಿತ್ರಿ ಬಾಯಿಯನ್ನು ನೆನಪಿಸಿಕೊಂಡಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, “ಪ್ರಮುಖ ಸಾಮಾಜಿಕ ಸುಧಾರಕಿ ಮತ್ತು ಶಿಕ್ಷಣ ತಜ್ಞರಾದ ಸಾವಿತ್ರಿ ಬಾಯಿ ಫುಲೆ ಅವರಿಗೆ ಅವರ ಜನ್ಮ ದಿನದಂದು ನನ್ನ ವಿನಮ್ರ ಗೌರವ. ಭಾರತದ ಮೊದಲ ಮಹಿಳಾ ಶಿಕ್ಷಕಿ ಎಂದು ಪರಿಗಣಿಸಲ್ಪಟ್ಟ ಅವರು, ಮಹಿಳೆಯರ ಜೀವನ ಮತ್ತು ಹಕ್ಕುಗಳಿಗಾಗಿ ತಮ್ಮ ಜೀವನಪರ್ಯಂತ ಕೆಲಸ ಮಾಡಿದರು. ಮಹಿಳೆಯರ ಉನ್ನತಿಗಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ” ಎಂದು ಟ್ವೀಟ್ಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಆಂಧ್ರಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ದು, “ಕ್ರಾಂತಿಕಾರಿ ಸಾವಿತ್ರಿ ಬಾಯಿ ಅವರ ಜನ್ಮ ದಿನದಂದು ಅವರಿಗೆ ನನ್ನ ನಮನ. ಭಾರತದಲ್ಲಿ ಮಹಿಳಾ ಸಬಲೀಕರಣದ ಪ್ರವರ್ತಕಿಯಾಗಿದ್ದ ಅವರು ದೂರದೃಷ್ಟಿಯಿದ್ದ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು. ಅವರ ಪರಂಪರೆ ನಮಗೆ ಸ್ಫೂರ್ತಿ ನೀಡಲಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...