Homeಮುಖಪುಟಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ

- Advertisement -
- Advertisement -

ಇಂದು ಆಧುನಿಕ ಶಿಕ್ಷಣದ ತಾಯಿ ಎಂದೇ ಕರೆಯಲ್ಪಡುವ ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನ. 1831ರಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ನೈಗಾಂನ್‌ನಲ್ಲಿ ಹುಟ್ಟಿದ ಸಾವಿತ್ರಿ ಬಾಯಿಯವರು ಎರಡು ಶತಮಾನಗಳ ಹಿಂದೆ ದಮನಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣವನ್ನು ಕೊಟ್ಟಂತಹ ಮೊದಲ ಶಿಕ್ಷಕಿ. ಗೆಳತಿ ಫಾತಿಮಾ ಶೇಕ್‌ರೊಂದಿಗೆ ಸೇರಿ ಬಾಲಕಿಯರ ಸಾಕ್ಷರತೆಗೆ ಅವಿಸ್ಮರಣೀಯ ಕೊಡುಗೆ ನೀಡಿದ ಸಾವಿತ್ರಿ ಬಾಯಿ ಅವರ 190 ನೇ ಜನ್ಮ ದಿನ ಇಂದು. ಈ ಹಿನ್ನಲೆಯಲ್ಲಿ ಅವರ ಜನ್ಮ ದಿನಕ್ಕೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಝಾದ್, “ಭಾರತದ ಮೊದಲ ಶಿಕ್ಷಕಿ, ಮನುವಾದದ ವಿರುದ್ಧ ಹೋರಾಡಿದ ಕ್ರಾಂತಿಜ್ಯೋತಿ ತಾಯಿ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆಯಂದು ಅವರಿಗೆ ಕೋಟಿ ನಮನಗಳು. ಜೈ ಸಾವಿತ್ರಿ, ಜೈ ಭೀಮ್” ಎಂದು ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಖ್ಯಾತ ನಟಿ ತಾಪ್ಸಿ ಪನ್ನು, “ಹೆಣ್ಣೊಬ್ಬಳು ಕಲಿತರೆ, ಕುಟುಂಬವೊಂದು ಕಲಿತಂತೆ; ಒಂದು ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ, ನೀವು ಭವಿಷ್ಯಕ್ಕೆ ಶಿಕ್ಷಣ ನೀಡಿದಂತೆ” ಎಂದು ಟ್ವೀಟ್ ಮಾಡಿದ್ದಾರೆ.

ಊನಾ ಚಳುವಳಿಯ ನಾಯಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಇಂದು ತಾಯಿ ಸಾವಿತ್ರಿಬಾಯಿ ಫುಲೆ ಜನ್ಮದಿನ. ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ. ಸಾವಿತ್ರಿ ಅಮ್ಮನಿಗೆ ನನ್ನ ಶುಭಾಶಯಗಳು. ಹಾಗೆಯೇ ಸುಧಾ, ಗುಲ್ಫಿಶಾ, ದೇವಂಗಾನ ಮತ್ತು ಇಂದು ಜೈಲಿನಲ್ಲಿದ್ದ ಎಲ್ಲ ಮಹಿಳೆಯರಿಗೆ ನನ್ನ ವಂದನೆ. ಯಾಕೆಂದರೆ ಅವರು ಕೂಡ ಸಾವಿತ್ರಿ ಬಾಯಿ ಅವರಂತೆಯೆ ಅನ್ಯಾಯದ ವಿರುದ್ಧ ಹೋರಾಡಿದವರು” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸಾವಿತ್ರಿ ಬಾಯಿ ಅವರ ಚಿತ್ರಕ್ಕೆ ನಮನ ಸಲ್ಲಿಸಿದರು.

ಇತಿಹಾಸಕಾರ ಇರ್ಫಾನ್ ಹಬೀಬ್, “ಸಾವಿತ್ರಿ ಬಾಯಿ ಮಹಿಳೆಯರಿಗೆ ಮತ್ತು ನಮ್ಮ ಸಮಾಜದಿಂದ ಬಹಿಷ್ಕಾರಕ್ಕೊಳಗಾದವರಿಗೆ ಶಿಕ್ಷಣವನ್ನು ಒದಗಿಸಿದವರಲ್ಲಿ ಮೊದಲಿಗರು. ಸಮಾನತೆಗಾಗಿ ಹೋರಾಡಿದ ತನ್ನ ಪತಿ ಜ್ಯೋತಿಬಾ ಫುಲೆಗೆ ಸಹಾಯ ಮಾಡಿದ್ದರು. ಸಾವಿತ್ರಿ ಬಾಯಿ ಫುಲೆ ಇಂದು 1831 ರಲ್ಲಿ ಜನಿಸಿದರು. ಭಾರತದ ಮೊದಲ ಮಹಿಳಾ ಶಿಕ್ಷಕರಲ್ಲಿ ಒಬ್ಬರು, ಜೀವನದುದ್ದಕ್ಕೂ ಶಿಕ್ಷಣಕ್ಕೆ ಬದ್ಧರಾಗಿದ್ದರು. ಅವರು ಸಮರ್ಥ ಬರಹಗಾರ ಮತ್ತು ಕವಯಿತ್ರಿಯೂ ಆಗಿದ್ದರು” ಎಂದು ಸಾವಿತ್ರಿ ಬಾಯಿಯನ್ನು ನೆನಪಿಸಿಕೊಂಡಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, “ಪ್ರಮುಖ ಸಾಮಾಜಿಕ ಸುಧಾರಕಿ ಮತ್ತು ಶಿಕ್ಷಣ ತಜ್ಞರಾದ ಸಾವಿತ್ರಿ ಬಾಯಿ ಫುಲೆ ಅವರಿಗೆ ಅವರ ಜನ್ಮ ದಿನದಂದು ನನ್ನ ವಿನಮ್ರ ಗೌರವ. ಭಾರತದ ಮೊದಲ ಮಹಿಳಾ ಶಿಕ್ಷಕಿ ಎಂದು ಪರಿಗಣಿಸಲ್ಪಟ್ಟ ಅವರು, ಮಹಿಳೆಯರ ಜೀವನ ಮತ್ತು ಹಕ್ಕುಗಳಿಗಾಗಿ ತಮ್ಮ ಜೀವನಪರ್ಯಂತ ಕೆಲಸ ಮಾಡಿದರು. ಮಹಿಳೆಯರ ಉನ್ನತಿಗಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ” ಎಂದು ಟ್ವೀಟ್ಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಆಂಧ್ರಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ದು, “ಕ್ರಾಂತಿಕಾರಿ ಸಾವಿತ್ರಿ ಬಾಯಿ ಅವರ ಜನ್ಮ ದಿನದಂದು ಅವರಿಗೆ ನನ್ನ ನಮನ. ಭಾರತದಲ್ಲಿ ಮಹಿಳಾ ಸಬಲೀಕರಣದ ಪ್ರವರ್ತಕಿಯಾಗಿದ್ದ ಅವರು ದೂರದೃಷ್ಟಿಯಿದ್ದ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು. ಅವರ ಪರಂಪರೆ ನಮಗೆ ಸ್ಫೂರ್ತಿ ನೀಡಲಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...