Homeಮುಖಪುಟಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ

- Advertisement -
- Advertisement -

ಇಂದು ಆಧುನಿಕ ಶಿಕ್ಷಣದ ತಾಯಿ ಎಂದೇ ಕರೆಯಲ್ಪಡುವ ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನ. 1831ರಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ನೈಗಾಂನ್‌ನಲ್ಲಿ ಹುಟ್ಟಿದ ಸಾವಿತ್ರಿ ಬಾಯಿಯವರು ಎರಡು ಶತಮಾನಗಳ ಹಿಂದೆ ದಮನಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣವನ್ನು ಕೊಟ್ಟಂತಹ ಮೊದಲ ಶಿಕ್ಷಕಿ. ಗೆಳತಿ ಫಾತಿಮಾ ಶೇಕ್‌ರೊಂದಿಗೆ ಸೇರಿ ಬಾಲಕಿಯರ ಸಾಕ್ಷರತೆಗೆ ಅವಿಸ್ಮರಣೀಯ ಕೊಡುಗೆ ನೀಡಿದ ಸಾವಿತ್ರಿ ಬಾಯಿ ಅವರ 190 ನೇ ಜನ್ಮ ದಿನ ಇಂದು. ಈ ಹಿನ್ನಲೆಯಲ್ಲಿ ಅವರ ಜನ್ಮ ದಿನಕ್ಕೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಝಾದ್, “ಭಾರತದ ಮೊದಲ ಶಿಕ್ಷಕಿ, ಮನುವಾದದ ವಿರುದ್ಧ ಹೋರಾಡಿದ ಕ್ರಾಂತಿಜ್ಯೋತಿ ತಾಯಿ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆಯಂದು ಅವರಿಗೆ ಕೋಟಿ ನಮನಗಳು. ಜೈ ಸಾವಿತ್ರಿ, ಜೈ ಭೀಮ್” ಎಂದು ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಖ್ಯಾತ ನಟಿ ತಾಪ್ಸಿ ಪನ್ನು, “ಹೆಣ್ಣೊಬ್ಬಳು ಕಲಿತರೆ, ಕುಟುಂಬವೊಂದು ಕಲಿತಂತೆ; ಒಂದು ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ, ನೀವು ಭವಿಷ್ಯಕ್ಕೆ ಶಿಕ್ಷಣ ನೀಡಿದಂತೆ” ಎಂದು ಟ್ವೀಟ್ ಮಾಡಿದ್ದಾರೆ.

ಊನಾ ಚಳುವಳಿಯ ನಾಯಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಇಂದು ತಾಯಿ ಸಾವಿತ್ರಿಬಾಯಿ ಫುಲೆ ಜನ್ಮದಿನ. ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ. ಸಾವಿತ್ರಿ ಅಮ್ಮನಿಗೆ ನನ್ನ ಶುಭಾಶಯಗಳು. ಹಾಗೆಯೇ ಸುಧಾ, ಗುಲ್ಫಿಶಾ, ದೇವಂಗಾನ ಮತ್ತು ಇಂದು ಜೈಲಿನಲ್ಲಿದ್ದ ಎಲ್ಲ ಮಹಿಳೆಯರಿಗೆ ನನ್ನ ವಂದನೆ. ಯಾಕೆಂದರೆ ಅವರು ಕೂಡ ಸಾವಿತ್ರಿ ಬಾಯಿ ಅವರಂತೆಯೆ ಅನ್ಯಾಯದ ವಿರುದ್ಧ ಹೋರಾಡಿದವರು” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸಾವಿತ್ರಿ ಬಾಯಿ ಅವರ ಚಿತ್ರಕ್ಕೆ ನಮನ ಸಲ್ಲಿಸಿದರು.

ಇತಿಹಾಸಕಾರ ಇರ್ಫಾನ್ ಹಬೀಬ್, “ಸಾವಿತ್ರಿ ಬಾಯಿ ಮಹಿಳೆಯರಿಗೆ ಮತ್ತು ನಮ್ಮ ಸಮಾಜದಿಂದ ಬಹಿಷ್ಕಾರಕ್ಕೊಳಗಾದವರಿಗೆ ಶಿಕ್ಷಣವನ್ನು ಒದಗಿಸಿದವರಲ್ಲಿ ಮೊದಲಿಗರು. ಸಮಾನತೆಗಾಗಿ ಹೋರಾಡಿದ ತನ್ನ ಪತಿ ಜ್ಯೋತಿಬಾ ಫುಲೆಗೆ ಸಹಾಯ ಮಾಡಿದ್ದರು. ಸಾವಿತ್ರಿ ಬಾಯಿ ಫುಲೆ ಇಂದು 1831 ರಲ್ಲಿ ಜನಿಸಿದರು. ಭಾರತದ ಮೊದಲ ಮಹಿಳಾ ಶಿಕ್ಷಕರಲ್ಲಿ ಒಬ್ಬರು, ಜೀವನದುದ್ದಕ್ಕೂ ಶಿಕ್ಷಣಕ್ಕೆ ಬದ್ಧರಾಗಿದ್ದರು. ಅವರು ಸಮರ್ಥ ಬರಹಗಾರ ಮತ್ತು ಕವಯಿತ್ರಿಯೂ ಆಗಿದ್ದರು” ಎಂದು ಸಾವಿತ್ರಿ ಬಾಯಿಯನ್ನು ನೆನಪಿಸಿಕೊಂಡಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, “ಪ್ರಮುಖ ಸಾಮಾಜಿಕ ಸುಧಾರಕಿ ಮತ್ತು ಶಿಕ್ಷಣ ತಜ್ಞರಾದ ಸಾವಿತ್ರಿ ಬಾಯಿ ಫುಲೆ ಅವರಿಗೆ ಅವರ ಜನ್ಮ ದಿನದಂದು ನನ್ನ ವಿನಮ್ರ ಗೌರವ. ಭಾರತದ ಮೊದಲ ಮಹಿಳಾ ಶಿಕ್ಷಕಿ ಎಂದು ಪರಿಗಣಿಸಲ್ಪಟ್ಟ ಅವರು, ಮಹಿಳೆಯರ ಜೀವನ ಮತ್ತು ಹಕ್ಕುಗಳಿಗಾಗಿ ತಮ್ಮ ಜೀವನಪರ್ಯಂತ ಕೆಲಸ ಮಾಡಿದರು. ಮಹಿಳೆಯರ ಉನ್ನತಿಗಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ” ಎಂದು ಟ್ವೀಟ್ಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಆಂಧ್ರಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ದು, “ಕ್ರಾಂತಿಕಾರಿ ಸಾವಿತ್ರಿ ಬಾಯಿ ಅವರ ಜನ್ಮ ದಿನದಂದು ಅವರಿಗೆ ನನ್ನ ನಮನ. ಭಾರತದಲ್ಲಿ ಮಹಿಳಾ ಸಬಲೀಕರಣದ ಪ್ರವರ್ತಕಿಯಾಗಿದ್ದ ಅವರು ದೂರದೃಷ್ಟಿಯಿದ್ದ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು. ಅವರ ಪರಂಪರೆ ನಮಗೆ ಸ್ಫೂರ್ತಿ ನೀಡಲಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...