Homeಮುಖಪುಟಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ

- Advertisement -
- Advertisement -

ಇಂದು ಆಧುನಿಕ ಶಿಕ್ಷಣದ ತಾಯಿ ಎಂದೇ ಕರೆಯಲ್ಪಡುವ ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನ. 1831ರಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ನೈಗಾಂನ್‌ನಲ್ಲಿ ಹುಟ್ಟಿದ ಸಾವಿತ್ರಿ ಬಾಯಿಯವರು ಎರಡು ಶತಮಾನಗಳ ಹಿಂದೆ ದಮನಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣವನ್ನು ಕೊಟ್ಟಂತಹ ಮೊದಲ ಶಿಕ್ಷಕಿ. ಗೆಳತಿ ಫಾತಿಮಾ ಶೇಕ್‌ರೊಂದಿಗೆ ಸೇರಿ ಬಾಲಕಿಯರ ಸಾಕ್ಷರತೆಗೆ ಅವಿಸ್ಮರಣೀಯ ಕೊಡುಗೆ ನೀಡಿದ ಸಾವಿತ್ರಿ ಬಾಯಿ ಅವರ 190 ನೇ ಜನ್ಮ ದಿನ ಇಂದು. ಈ ಹಿನ್ನಲೆಯಲ್ಲಿ ಅವರ ಜನ್ಮ ದಿನಕ್ಕೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಝಾದ್, “ಭಾರತದ ಮೊದಲ ಶಿಕ್ಷಕಿ, ಮನುವಾದದ ವಿರುದ್ಧ ಹೋರಾಡಿದ ಕ್ರಾಂತಿಜ್ಯೋತಿ ತಾಯಿ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆಯಂದು ಅವರಿಗೆ ಕೋಟಿ ನಮನಗಳು. ಜೈ ಸಾವಿತ್ರಿ, ಜೈ ಭೀಮ್” ಎಂದು ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಖ್ಯಾತ ನಟಿ ತಾಪ್ಸಿ ಪನ್ನು, “ಹೆಣ್ಣೊಬ್ಬಳು ಕಲಿತರೆ, ಕುಟುಂಬವೊಂದು ಕಲಿತಂತೆ; ಒಂದು ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ, ನೀವು ಭವಿಷ್ಯಕ್ಕೆ ಶಿಕ್ಷಣ ನೀಡಿದಂತೆ” ಎಂದು ಟ್ವೀಟ್ ಮಾಡಿದ್ದಾರೆ.

ಊನಾ ಚಳುವಳಿಯ ನಾಯಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಇಂದು ತಾಯಿ ಸಾವಿತ್ರಿಬಾಯಿ ಫುಲೆ ಜನ್ಮದಿನ. ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ. ಸಾವಿತ್ರಿ ಅಮ್ಮನಿಗೆ ನನ್ನ ಶುಭಾಶಯಗಳು. ಹಾಗೆಯೇ ಸುಧಾ, ಗುಲ್ಫಿಶಾ, ದೇವಂಗಾನ ಮತ್ತು ಇಂದು ಜೈಲಿನಲ್ಲಿದ್ದ ಎಲ್ಲ ಮಹಿಳೆಯರಿಗೆ ನನ್ನ ವಂದನೆ. ಯಾಕೆಂದರೆ ಅವರು ಕೂಡ ಸಾವಿತ್ರಿ ಬಾಯಿ ಅವರಂತೆಯೆ ಅನ್ಯಾಯದ ವಿರುದ್ಧ ಹೋರಾಡಿದವರು” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸಾವಿತ್ರಿ ಬಾಯಿ ಅವರ ಚಿತ್ರಕ್ಕೆ ನಮನ ಸಲ್ಲಿಸಿದರು.

ಇತಿಹಾಸಕಾರ ಇರ್ಫಾನ್ ಹಬೀಬ್, “ಸಾವಿತ್ರಿ ಬಾಯಿ ಮಹಿಳೆಯರಿಗೆ ಮತ್ತು ನಮ್ಮ ಸಮಾಜದಿಂದ ಬಹಿಷ್ಕಾರಕ್ಕೊಳಗಾದವರಿಗೆ ಶಿಕ್ಷಣವನ್ನು ಒದಗಿಸಿದವರಲ್ಲಿ ಮೊದಲಿಗರು. ಸಮಾನತೆಗಾಗಿ ಹೋರಾಡಿದ ತನ್ನ ಪತಿ ಜ್ಯೋತಿಬಾ ಫುಲೆಗೆ ಸಹಾಯ ಮಾಡಿದ್ದರು. ಸಾವಿತ್ರಿ ಬಾಯಿ ಫುಲೆ ಇಂದು 1831 ರಲ್ಲಿ ಜನಿಸಿದರು. ಭಾರತದ ಮೊದಲ ಮಹಿಳಾ ಶಿಕ್ಷಕರಲ್ಲಿ ಒಬ್ಬರು, ಜೀವನದುದ್ದಕ್ಕೂ ಶಿಕ್ಷಣಕ್ಕೆ ಬದ್ಧರಾಗಿದ್ದರು. ಅವರು ಸಮರ್ಥ ಬರಹಗಾರ ಮತ್ತು ಕವಯಿತ್ರಿಯೂ ಆಗಿದ್ದರು” ಎಂದು ಸಾವಿತ್ರಿ ಬಾಯಿಯನ್ನು ನೆನಪಿಸಿಕೊಂಡಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, “ಪ್ರಮುಖ ಸಾಮಾಜಿಕ ಸುಧಾರಕಿ ಮತ್ತು ಶಿಕ್ಷಣ ತಜ್ಞರಾದ ಸಾವಿತ್ರಿ ಬಾಯಿ ಫುಲೆ ಅವರಿಗೆ ಅವರ ಜನ್ಮ ದಿನದಂದು ನನ್ನ ವಿನಮ್ರ ಗೌರವ. ಭಾರತದ ಮೊದಲ ಮಹಿಳಾ ಶಿಕ್ಷಕಿ ಎಂದು ಪರಿಗಣಿಸಲ್ಪಟ್ಟ ಅವರು, ಮಹಿಳೆಯರ ಜೀವನ ಮತ್ತು ಹಕ್ಕುಗಳಿಗಾಗಿ ತಮ್ಮ ಜೀವನಪರ್ಯಂತ ಕೆಲಸ ಮಾಡಿದರು. ಮಹಿಳೆಯರ ಉನ್ನತಿಗಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ” ಎಂದು ಟ್ವೀಟ್ಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಆಂಧ್ರಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ದು, “ಕ್ರಾಂತಿಕಾರಿ ಸಾವಿತ್ರಿ ಬಾಯಿ ಅವರ ಜನ್ಮ ದಿನದಂದು ಅವರಿಗೆ ನನ್ನ ನಮನ. ಭಾರತದಲ್ಲಿ ಮಹಿಳಾ ಸಬಲೀಕರಣದ ಪ್ರವರ್ತಕಿಯಾಗಿದ್ದ ಅವರು ದೂರದೃಷ್ಟಿಯಿದ್ದ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು. ಅವರ ಪರಂಪರೆ ನಮಗೆ ಸ್ಫೂರ್ತಿ ನೀಡಲಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...