Homeಮುಖಪುಟಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆಯ 190ನೇ ಜನ್ಮದಿನ: ಗಣ್ಯರ ಶುಭಾಶಯ

ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ

- Advertisement -
- Advertisement -

ಇಂದು ಆಧುನಿಕ ಶಿಕ್ಷಣದ ತಾಯಿ ಎಂದೇ ಕರೆಯಲ್ಪಡುವ ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನ. 1831ರಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ನೈಗಾಂನ್‌ನಲ್ಲಿ ಹುಟ್ಟಿದ ಸಾವಿತ್ರಿ ಬಾಯಿಯವರು ಎರಡು ಶತಮಾನಗಳ ಹಿಂದೆ ದಮನಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣವನ್ನು ಕೊಟ್ಟಂತಹ ಮೊದಲ ಶಿಕ್ಷಕಿ. ಗೆಳತಿ ಫಾತಿಮಾ ಶೇಕ್‌ರೊಂದಿಗೆ ಸೇರಿ ಬಾಲಕಿಯರ ಸಾಕ್ಷರತೆಗೆ ಅವಿಸ್ಮರಣೀಯ ಕೊಡುಗೆ ನೀಡಿದ ಸಾವಿತ್ರಿ ಬಾಯಿ ಅವರ 190 ನೇ ಜನ್ಮ ದಿನ ಇಂದು. ಈ ಹಿನ್ನಲೆಯಲ್ಲಿ ಅವರ ಜನ್ಮ ದಿನಕ್ಕೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಝಾದ್, “ಭಾರತದ ಮೊದಲ ಶಿಕ್ಷಕಿ, ಮನುವಾದದ ವಿರುದ್ಧ ಹೋರಾಡಿದ ಕ್ರಾಂತಿಜ್ಯೋತಿ ತಾಯಿ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆಯಂದು ಅವರಿಗೆ ಕೋಟಿ ನಮನಗಳು. ಜೈ ಸಾವಿತ್ರಿ, ಜೈ ಭೀಮ್” ಎಂದು ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಖ್ಯಾತ ನಟಿ ತಾಪ್ಸಿ ಪನ್ನು, “ಹೆಣ್ಣೊಬ್ಬಳು ಕಲಿತರೆ, ಕುಟುಂಬವೊಂದು ಕಲಿತಂತೆ; ಒಂದು ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ, ನೀವು ಭವಿಷ್ಯಕ್ಕೆ ಶಿಕ್ಷಣ ನೀಡಿದಂತೆ” ಎಂದು ಟ್ವೀಟ್ ಮಾಡಿದ್ದಾರೆ.

ಊನಾ ಚಳುವಳಿಯ ನಾಯಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಇಂದು ತಾಯಿ ಸಾವಿತ್ರಿಬಾಯಿ ಫುಲೆ ಜನ್ಮದಿನ. ಬಾಲಕಿಯರಿಗಾಗಿ ಮೊದಲ ಶಾಲೆಯನ್ನು ತೆರೆದ ಭಾರತದ ಮೊದಲ ಮಹಿಳಾ ಶಿಕ್ಷಕಿ. ಸಾವಿತ್ರಿ ಅಮ್ಮನಿಗೆ ನನ್ನ ಶುಭಾಶಯಗಳು. ಹಾಗೆಯೇ ಸುಧಾ, ಗುಲ್ಫಿಶಾ, ದೇವಂಗಾನ ಮತ್ತು ಇಂದು ಜೈಲಿನಲ್ಲಿದ್ದ ಎಲ್ಲ ಮಹಿಳೆಯರಿಗೆ ನನ್ನ ವಂದನೆ. ಯಾಕೆಂದರೆ ಅವರು ಕೂಡ ಸಾವಿತ್ರಿ ಬಾಯಿ ಅವರಂತೆಯೆ ಅನ್ಯಾಯದ ವಿರುದ್ಧ ಹೋರಾಡಿದವರು” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸಾವಿತ್ರಿ ಬಾಯಿ ಅವರ ಚಿತ್ರಕ್ಕೆ ನಮನ ಸಲ್ಲಿಸಿದರು.

ಇತಿಹಾಸಕಾರ ಇರ್ಫಾನ್ ಹಬೀಬ್, “ಸಾವಿತ್ರಿ ಬಾಯಿ ಮಹಿಳೆಯರಿಗೆ ಮತ್ತು ನಮ್ಮ ಸಮಾಜದಿಂದ ಬಹಿಷ್ಕಾರಕ್ಕೊಳಗಾದವರಿಗೆ ಶಿಕ್ಷಣವನ್ನು ಒದಗಿಸಿದವರಲ್ಲಿ ಮೊದಲಿಗರು. ಸಮಾನತೆಗಾಗಿ ಹೋರಾಡಿದ ತನ್ನ ಪತಿ ಜ್ಯೋತಿಬಾ ಫುಲೆಗೆ ಸಹಾಯ ಮಾಡಿದ್ದರು. ಸಾವಿತ್ರಿ ಬಾಯಿ ಫುಲೆ ಇಂದು 1831 ರಲ್ಲಿ ಜನಿಸಿದರು. ಭಾರತದ ಮೊದಲ ಮಹಿಳಾ ಶಿಕ್ಷಕರಲ್ಲಿ ಒಬ್ಬರು, ಜೀವನದುದ್ದಕ್ಕೂ ಶಿಕ್ಷಣಕ್ಕೆ ಬದ್ಧರಾಗಿದ್ದರು. ಅವರು ಸಮರ್ಥ ಬರಹಗಾರ ಮತ್ತು ಕವಯಿತ್ರಿಯೂ ಆಗಿದ್ದರು” ಎಂದು ಸಾವಿತ್ರಿ ಬಾಯಿಯನ್ನು ನೆನಪಿಸಿಕೊಂಡಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, “ಪ್ರಮುಖ ಸಾಮಾಜಿಕ ಸುಧಾರಕಿ ಮತ್ತು ಶಿಕ್ಷಣ ತಜ್ಞರಾದ ಸಾವಿತ್ರಿ ಬಾಯಿ ಫುಲೆ ಅವರಿಗೆ ಅವರ ಜನ್ಮ ದಿನದಂದು ನನ್ನ ವಿನಮ್ರ ಗೌರವ. ಭಾರತದ ಮೊದಲ ಮಹಿಳಾ ಶಿಕ್ಷಕಿ ಎಂದು ಪರಿಗಣಿಸಲ್ಪಟ್ಟ ಅವರು, ಮಹಿಳೆಯರ ಜೀವನ ಮತ್ತು ಹಕ್ಕುಗಳಿಗಾಗಿ ತಮ್ಮ ಜೀವನಪರ್ಯಂತ ಕೆಲಸ ಮಾಡಿದರು. ಮಹಿಳೆಯರ ಉನ್ನತಿಗಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ” ಎಂದು ಟ್ವೀಟ್ಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಆಂಧ್ರಪ್ರದೇಶದ ವಿಪಕ್ಷ ನಾಯಕ ಚಂದ್ರಬಾಬು ನಾಯ್ದು, “ಕ್ರಾಂತಿಕಾರಿ ಸಾವಿತ್ರಿ ಬಾಯಿ ಅವರ ಜನ್ಮ ದಿನದಂದು ಅವರಿಗೆ ನನ್ನ ನಮನ. ಭಾರತದಲ್ಲಿ ಮಹಿಳಾ ಸಬಲೀಕರಣದ ಪ್ರವರ್ತಕಿಯಾಗಿದ್ದ ಅವರು ದೂರದೃಷ್ಟಿಯಿದ್ದ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು. ಅವರ ಪರಂಪರೆ ನಮಗೆ ಸ್ಫೂರ್ತಿ ನೀಡಲಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...