Homeಮುಖಪುಟಅಮಿತ್ ಶಾರ ನೆಕ್ಸ್ಟ್ ಟಾರ್ಗೆಟ್ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್: ಸಿಖ್ ವಿರೋಧಿ ಗಲಭೆಯ ಪ್ರಕರಣ...

ಅಮಿತ್ ಶಾರ ನೆಕ್ಸ್ಟ್ ಟಾರ್ಗೆಟ್ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್: ಸಿಖ್ ವಿರೋಧಿ ಗಲಭೆಯ ಪ್ರಕರಣ ರೀಓಪನ್..

- Advertisement -
- Advertisement -

1984 ರ ಸಿಖ್ ವಿರೋಧಿ ಗಲಭೆಯ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಹಿರಿಯ ಮುಖಂಡ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್  ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯವು ಆ ಕೇಸ್ ಅನ್ನು ರೀಓಪನ್ ಮಾಡಲು ಮುಂದಾಗಿದೆ. ಗಲಭೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಕಮಲ್ ನಾಥ್ ನಿರಾಕರಿಸಿದ್ದಾರೆ. ಆದರೆ ಸಾಲು ಸಾಲು ವಿರೋಧ ಪಕ್ಷದ ನಾಯಕರನ್ನು ಬೇಟೆಯಾಡಲು ಮುಂದಾಗಿರುವ ಅಮಿತ್ ಶಾ ಧೃಡ ತೀರ್ಮಾನ ಮಾಡಿದಂತಿದೆ.

ಕಳೆದ ವರ್ಷ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಪಕ್ಷ ಕೂದಲೆಳೆ ಅಂತರದಲ್ಲಿ ಬಿಜೆಪಿಯನ್ನು ಸೋಲಿಸಿ ಸರಳ ಬಹುಮತ ಪಡೆಯಿತು. ಆಗ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆಗೆ ಸಿಖ್ ಗುಂಪುಗಳು ಈ ಪ್ರಕರಣವನ್ನು ಉಲ್ಲೇಖಿಸಿ ಪ್ರತಿಭಟನೆ ನಡೆಸಿದ್ದರು. ಈಗ ಭಾರೀ ಬಹುಮತದೊಂದಿಗೆ ಎರಡನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ವಿರೋಧ ಪಕ್ಷದ ನಾಯಕರನ್ನು ಮುಗಿಸಲು ನಿರ್ಧರಿಸಿದೆ. ಅದರ ಭಾಗವಾಗಿ ಸಣ್ಣ ಕೇಸಿನಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಕರ್ನಾಟಕದ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಜೈಲಿನಲ್ಲಿದ್ದಾರೆ. ಆ ಲಿಸ್ಟಿಗೆ ಹೊಸ ಸೇರ್ಪಡೆ ಕಮಲ್ ನಾಥ್ ಆಗಿದ್ದಾರೆ.

ಅಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿಯನ್ನು ಬಂಧಿಸಿದ ಕೆಲ ದಿನಗಳ ನಂತರ ಗೃಹ ಸಚಿವಾಲಯದ ಈ ನಿರ್ಧಾರ ಬಂದಿದೆ. 1984ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿಯನ್ನು ಸಿಖ್ ಸಮುದಾಯಕ್ಕೆ ಸೇರಿದ್ದ ಅವರ ಅಂಗರಕ್ಷಕರು ಗುಂಡಿಕ್ಕಿ ಕೊಂದರು. ಇದಕ್ಕೆ ಪ್ರತೀಕಾರಕ್ಕಾಗಿ ಕಮಲ್ ನಾಥ್ ಮತ್ತು ಪಕ್ಷದ ದೆಹಲಿ ನಾಯಕರಾದ ಜಗದೀಶ್ ಟೈಟ್ಲರ್ ಮತ್ತು ಸಜ್ಜನ್ ಕುಮಾರ್ ಅವರೊಂದಿಗೆ 1984 ರಲ್ಲಿ ಸಿಖ್ಖರ ಮೇಲಿನ ಗಲಭೆಗೆ ಜನಸಂದಣಿಯನ್ನು ಪ್ರಚೋದಿಸಿದ ಆರೋಪ ಹೊರಿಸಲಾಗಿದೆ.

ಕಮಲ್ ನಾಥ್ ಅವರು ಗಲಭೆಯಲ್ಲಿ ಕೇಂದ್ರ ದೆಹಲಿಯ ರಾಕಬ್‌ಗಂಜ್ ಗುರುದ್ವಾರದ ಹೊರಗೆ ಜನಸಮೂಹವನ್ನು ಮುನ್ನಡೆಸಿದ್ದಾರೆ ಮತ್ತು ಇಬ್ಬರು ಸಿಖ್ಖರು ಆತನ ಸಮ್ಮುಖದಲ್ಲಿ ಕೊಲ್ಲಲ್ಪಟ್ಟರು ಎಂದು ಸಾಕ್ಷಿಗಳು ಆರೋಪಿಸಿದ್ದರು. ಗಲಭೆಗಳ ಬಗ್ಗೆ ತನಿಖೆ ನಡೆಸುತ್ತಿದ್ದ ನಾನಾವತಿ ಆಯೋಗವು ಆಗಿನ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಸಂಜಯ್ ಸೂರಿ ಸೇರಿದಂತೆ ಇಬ್ಬರು ವ್ಯಕ್ತಿಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು ಕಮಲ್ ನಾಥ್ ಸ್ಥಳದಲ್ಲಿದ್ದರು ಎಂದು ಉಲ್ಲೇಖಿಸಿದೆ.

ತಾನು ಹಾಜರಿದ್ದನ್ನು ಒಪ್ಪಿಕೊಂಡ ಕಮಲ್ ನಾಥ್, ಆದರೆ ತಾನು ಜನಸಮೂಹವನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದ್ದರು. ಹಾಗಾಗಿ ಗಲಭೆಯಲ್ಲಿ ಆತನ ಭಾಗಿಗೆ ಯಾವುದೇ ಪುರಾವೆಗಳಿಲ್ಲ ಎಂದು ಆಯೋಗ ಹೇಳಿದೆ. ಸಜ್ಜನ್ ಕುಮಾರ್ ಈ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದರು.

ಗಲಭೆಗೆ ಸಂಬಂಧಿಸಿದ 220 ಕ್ಕೂ ಹೆಚ್ಚು ಮುಚ್ಚಿದ ಪ್ರಕರಣಗಳ ತನಿಖೆಗಾಗಿ ಕೇಂದ್ರವು ವಿಶೇಷ ತನಿಖಾ ತಂಡವನ್ನು ಸ್ಥಾಪಿಸಲು ನಿರ್ಧರಿಸಿದ ಎರಡು ವರ್ಷಗಳ ನಂತರ, ಗಲಭೆಗೆ ಸಂಬಂಧಿಸಿದಂತೆ 88 ಜನರ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಕಳೆದ ವರ್ಷ ಎತ್ತಿಹಿಡಿದಿತ್ತು. ಈ ನಿರ್ಧಾರವನ್ನು ಮಾಜಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು “ನರಮೇಧ” ಎಂದು ಬಣ್ಣಿಸಿದ್ದರು. ಆ ಸಂದರ್ಭದಲ್ಲಿ ಬಿಜೆಪಿ ಮಿತ್ರಪಕ್ಷವಾಗಿರುವ ಅಕಾಲಿ ದಳ, ಸರ್ಕಾರ ತಮ್ಮ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದೆ ಎಂದು ಹೇಳಿ ಕಮಲ್ ನಾಥ್ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಕ್ಷಣ ಕಮಲ್ ನಾಥ್ ಅವರಿಂದ ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕೆಂದು ಶಿರೋಮಣಿ ಅಕಾಲಿ ದಳದ ಸದಸ್ಯ ದೆಹಲಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಒತ್ತಾಯಿಸಿದ್ದಾರೆ. ಕಮಲ್ ನಾಥ್ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳಲು ಸಿದ್ಧವಾಗಿರುವ ಇಬ್ಬರು ಸಾಕ್ಷಿಗಳಿಗೆ ಅವರು ರಕ್ಷಣೆ ಕೋರಿದ್ದಾರೆ.

“ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ವಿರುದ್ಧದ 1984 ರ ಸಿಖ್ ನರಮೇಧ ಪ್ರಕರಣವನ್ನು ಮತ್ತೆ ತೆರೆದಿರುವುದು ಸಿಖ್ಖರ ವಿಜಯವಾಗಿದೆ. ಮುಚ್ಚಲ್ಪಟ್ಟ ಪ್ರಕರಣಗಳನ್ನು ಪುನಃ ತೆರೆಯುವಂತೆ ಒತ್ತಾಯಿಸಿ ನಾವು ನಡೆಸಿದ ನಿರಂತರ ಪ್ರಯತ್ನಗಳ ಫಲಿತಾಂಶವಾಗಿದೆ. ಈಗ ಕಮಲ್ ನಾಥ್ ಅವರ ಅಪರಾಧಗಳಿಗೆ ಬೆಲೆ ತೆರಲಿಲದ್ದಾರೆ” ಎಂದು ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಟ್ವೀಟ್ ಮಾಡಿದ್ದಾರೆ.

“ಶುಭಾಶಯಗಳು. ಇದು ಅಗತ್ಯವಾಗಿದ್ದ ಕ್ರಮವಾಗಿದೆ. ಹಾಗೆಯೇ ನಾವು ಕೂಡ ನ್ಯಾಯದ ನಿರೀಕ್ಷೆಯಲ್ಲಿರುವುದರಿಂದ ಗೃಹ ಸಚಿವಾಲಯವು 2002ರ ಗುಜರಾತ್ ಗಲಭೆ ಪ್ರಕರಣವನ್ನು ಮತ್ತೆ ತೆರೆಯಬಹುದೇ?” ಎಂದು ಖ್ಯಾತ ತನಿಖಾ ಪರ್ತಕರ್ತೆ ರಾಣಾ ಅಯ್ಯೂಬ್ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...