Homeಮುಖಪುಟಅಮಿತ್ ಶಾರ ನೆಕ್ಸ್ಟ್ ಟಾರ್ಗೆಟ್ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್: ಸಿಖ್ ವಿರೋಧಿ ಗಲಭೆಯ ಪ್ರಕರಣ...

ಅಮಿತ್ ಶಾರ ನೆಕ್ಸ್ಟ್ ಟಾರ್ಗೆಟ್ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್: ಸಿಖ್ ವಿರೋಧಿ ಗಲಭೆಯ ಪ್ರಕರಣ ರೀಓಪನ್..

- Advertisement -
- Advertisement -

1984 ರ ಸಿಖ್ ವಿರೋಧಿ ಗಲಭೆಯ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಹಿರಿಯ ಮುಖಂಡ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್  ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯವು ಆ ಕೇಸ್ ಅನ್ನು ರೀಓಪನ್ ಮಾಡಲು ಮುಂದಾಗಿದೆ. ಗಲಭೆಯಲ್ಲಿ ನನ್ನ ಪಾತ್ರವಿಲ್ಲ ಎಂದು ಕಮಲ್ ನಾಥ್ ನಿರಾಕರಿಸಿದ್ದಾರೆ. ಆದರೆ ಸಾಲು ಸಾಲು ವಿರೋಧ ಪಕ್ಷದ ನಾಯಕರನ್ನು ಬೇಟೆಯಾಡಲು ಮುಂದಾಗಿರುವ ಅಮಿತ್ ಶಾ ಧೃಡ ತೀರ್ಮಾನ ಮಾಡಿದಂತಿದೆ.

ಕಳೆದ ವರ್ಷ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಪಕ್ಷ ಕೂದಲೆಳೆ ಅಂತರದಲ್ಲಿ ಬಿಜೆಪಿಯನ್ನು ಸೋಲಿಸಿ ಸರಳ ಬಹುಮತ ಪಡೆಯಿತು. ಆಗ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆಗೆ ಸಿಖ್ ಗುಂಪುಗಳು ಈ ಪ್ರಕರಣವನ್ನು ಉಲ್ಲೇಖಿಸಿ ಪ್ರತಿಭಟನೆ ನಡೆಸಿದ್ದರು. ಈಗ ಭಾರೀ ಬಹುಮತದೊಂದಿಗೆ ಎರಡನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ವಿರೋಧ ಪಕ್ಷದ ನಾಯಕರನ್ನು ಮುಗಿಸಲು ನಿರ್ಧರಿಸಿದೆ. ಅದರ ಭಾಗವಾಗಿ ಸಣ್ಣ ಕೇಸಿನಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಕರ್ನಾಟಕದ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಜೈಲಿನಲ್ಲಿದ್ದಾರೆ. ಆ ಲಿಸ್ಟಿಗೆ ಹೊಸ ಸೇರ್ಪಡೆ ಕಮಲ್ ನಾಥ್ ಆಗಿದ್ದಾರೆ.

ಅಗಸ್ಟಾ ವೆಸ್ಟ್‌ಲ್ಯಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿಯನ್ನು ಬಂಧಿಸಿದ ಕೆಲ ದಿನಗಳ ನಂತರ ಗೃಹ ಸಚಿವಾಲಯದ ಈ ನಿರ್ಧಾರ ಬಂದಿದೆ. 1984ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿಯನ್ನು ಸಿಖ್ ಸಮುದಾಯಕ್ಕೆ ಸೇರಿದ್ದ ಅವರ ಅಂಗರಕ್ಷಕರು ಗುಂಡಿಕ್ಕಿ ಕೊಂದರು. ಇದಕ್ಕೆ ಪ್ರತೀಕಾರಕ್ಕಾಗಿ ಕಮಲ್ ನಾಥ್ ಮತ್ತು ಪಕ್ಷದ ದೆಹಲಿ ನಾಯಕರಾದ ಜಗದೀಶ್ ಟೈಟ್ಲರ್ ಮತ್ತು ಸಜ್ಜನ್ ಕುಮಾರ್ ಅವರೊಂದಿಗೆ 1984 ರಲ್ಲಿ ಸಿಖ್ಖರ ಮೇಲಿನ ಗಲಭೆಗೆ ಜನಸಂದಣಿಯನ್ನು ಪ್ರಚೋದಿಸಿದ ಆರೋಪ ಹೊರಿಸಲಾಗಿದೆ.

ಕಮಲ್ ನಾಥ್ ಅವರು ಗಲಭೆಯಲ್ಲಿ ಕೇಂದ್ರ ದೆಹಲಿಯ ರಾಕಬ್‌ಗಂಜ್ ಗುರುದ್ವಾರದ ಹೊರಗೆ ಜನಸಮೂಹವನ್ನು ಮುನ್ನಡೆಸಿದ್ದಾರೆ ಮತ್ತು ಇಬ್ಬರು ಸಿಖ್ಖರು ಆತನ ಸಮ್ಮುಖದಲ್ಲಿ ಕೊಲ್ಲಲ್ಪಟ್ಟರು ಎಂದು ಸಾಕ್ಷಿಗಳು ಆರೋಪಿಸಿದ್ದರು. ಗಲಭೆಗಳ ಬಗ್ಗೆ ತನಿಖೆ ನಡೆಸುತ್ತಿದ್ದ ನಾನಾವತಿ ಆಯೋಗವು ಆಗಿನ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಸಂಜಯ್ ಸೂರಿ ಸೇರಿದಂತೆ ಇಬ್ಬರು ವ್ಯಕ್ತಿಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು ಕಮಲ್ ನಾಥ್ ಸ್ಥಳದಲ್ಲಿದ್ದರು ಎಂದು ಉಲ್ಲೇಖಿಸಿದೆ.

ತಾನು ಹಾಜರಿದ್ದನ್ನು ಒಪ್ಪಿಕೊಂಡ ಕಮಲ್ ನಾಥ್, ಆದರೆ ತಾನು ಜನಸಮೂಹವನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದ್ದರು. ಹಾಗಾಗಿ ಗಲಭೆಯಲ್ಲಿ ಆತನ ಭಾಗಿಗೆ ಯಾವುದೇ ಪುರಾವೆಗಳಿಲ್ಲ ಎಂದು ಆಯೋಗ ಹೇಳಿದೆ. ಸಜ್ಜನ್ ಕುಮಾರ್ ಈ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದರು.

ಗಲಭೆಗೆ ಸಂಬಂಧಿಸಿದ 220 ಕ್ಕೂ ಹೆಚ್ಚು ಮುಚ್ಚಿದ ಪ್ರಕರಣಗಳ ತನಿಖೆಗಾಗಿ ಕೇಂದ್ರವು ವಿಶೇಷ ತನಿಖಾ ತಂಡವನ್ನು ಸ್ಥಾಪಿಸಲು ನಿರ್ಧರಿಸಿದ ಎರಡು ವರ್ಷಗಳ ನಂತರ, ಗಲಭೆಗೆ ಸಂಬಂಧಿಸಿದಂತೆ 88 ಜನರ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಕಳೆದ ವರ್ಷ ಎತ್ತಿಹಿಡಿದಿತ್ತು. ಈ ನಿರ್ಧಾರವನ್ನು ಮಾಜಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು “ನರಮೇಧ” ಎಂದು ಬಣ್ಣಿಸಿದ್ದರು. ಆ ಸಂದರ್ಭದಲ್ಲಿ ಬಿಜೆಪಿ ಮಿತ್ರಪಕ್ಷವಾಗಿರುವ ಅಕಾಲಿ ದಳ, ಸರ್ಕಾರ ತಮ್ಮ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದೆ ಎಂದು ಹೇಳಿ ಕಮಲ್ ನಾಥ್ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಕ್ಷಣ ಕಮಲ್ ನಾಥ್ ಅವರಿಂದ ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕೆಂದು ಶಿರೋಮಣಿ ಅಕಾಲಿ ದಳದ ಸದಸ್ಯ ದೆಹಲಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಒತ್ತಾಯಿಸಿದ್ದಾರೆ. ಕಮಲ್ ನಾಥ್ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳಲು ಸಿದ್ಧವಾಗಿರುವ ಇಬ್ಬರು ಸಾಕ್ಷಿಗಳಿಗೆ ಅವರು ರಕ್ಷಣೆ ಕೋರಿದ್ದಾರೆ.

“ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ವಿರುದ್ಧದ 1984 ರ ಸಿಖ್ ನರಮೇಧ ಪ್ರಕರಣವನ್ನು ಮತ್ತೆ ತೆರೆದಿರುವುದು ಸಿಖ್ಖರ ವಿಜಯವಾಗಿದೆ. ಮುಚ್ಚಲ್ಪಟ್ಟ ಪ್ರಕರಣಗಳನ್ನು ಪುನಃ ತೆರೆಯುವಂತೆ ಒತ್ತಾಯಿಸಿ ನಾವು ನಡೆಸಿದ ನಿರಂತರ ಪ್ರಯತ್ನಗಳ ಫಲಿತಾಂಶವಾಗಿದೆ. ಈಗ ಕಮಲ್ ನಾಥ್ ಅವರ ಅಪರಾಧಗಳಿಗೆ ಬೆಲೆ ತೆರಲಿಲದ್ದಾರೆ” ಎಂದು ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಟ್ವೀಟ್ ಮಾಡಿದ್ದಾರೆ.

“ಶುಭಾಶಯಗಳು. ಇದು ಅಗತ್ಯವಾಗಿದ್ದ ಕ್ರಮವಾಗಿದೆ. ಹಾಗೆಯೇ ನಾವು ಕೂಡ ನ್ಯಾಯದ ನಿರೀಕ್ಷೆಯಲ್ಲಿರುವುದರಿಂದ ಗೃಹ ಸಚಿವಾಲಯವು 2002ರ ಗುಜರಾತ್ ಗಲಭೆ ಪ್ರಕರಣವನ್ನು ಮತ್ತೆ ತೆರೆಯಬಹುದೇ?” ಎಂದು ಖ್ಯಾತ ತನಿಖಾ ಪರ್ತಕರ್ತೆ ರಾಣಾ ಅಯ್ಯೂಬ್ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...