Homeಮುಖಪುಟ1984 ರ ಸಿಖ್ ವಿರೋಧಿ ಗಲಭೆ: ಅಪರಾಧಿ ಸಜ್ಜನ್ ಕುಮಾರ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

1984 ರ ಸಿಖ್ ವಿರೋಧಿ ಗಲಭೆ: ಅಪರಾಧಿ ಸಜ್ಜನ್ ಕುಮಾರ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

ಆಗಿನ ಪ್ರಧಾನಿ ಇಂದಿರಾ ಗಾಂಧಿಯನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ಪ್ರತೀಕಾರವಾಗಿ 1984 ರಲ್ಲಿ ಸಿಖ್ ಸಮುದಾಯವನ್ನು ಗುರಿಯಾಗಿಸಿಕೊಂಡು ಗಲಭೆಗಳು ಭುಗಿಲೆದ್ದಿದ್ದವು.

- Advertisement -
- Advertisement -

1984 ರ ಸಿಖ್ ವಿರೋಧಿ ಗಲಭೆಯ ತನ್ನ ಪಾತ್ರಕ್ಕಾಗಿ ದೆಹಲಿ ಹೈಕೋರ್ಟ್‌ನಿಂದ 2018 ರಲ್ಲಿ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಸಜ್ಜನ್ ಕುಮಾರ್ ಅವರ ಆರೋಗ್ಯದ ಬಗ್ಗೆ ವಕೀಲರು ಎತ್ತಿದ ಕಳವಳಗಳನ್ನು ಬದಿಗೊತ್ತಿದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಇದು ಸಾಮಾನ್ಯ ಪ್ರಕರಣವಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಹಿಂದೂ-ಸಿಖ್‌ ಸಮುದಾಯದ ಅರ್ಥಶಾಸ್ತ್ರಜ್ಞ ಗೆಳೆಯರಿಬ್ಬರೂ ಭಾರತದ ಪ್ರಸ್ತುತ ಸ್ಥಿತಿ ಕುರಿತು ಬರೆದ ಭಾವನಾತ್ಮಕ ಪತ್ರ.

“ಇದು ಸಣ್ಣ ಪ್ರಕರಣವಲ್ಲ. ನಾವು ನಿಮಗೆ ಜಾಮೀನು ನೀಡಲು ಸಾಧ್ಯವಿಲ್ಲ” ಎಂದು ಸಿಜೆಐ ಬೊಬ್ಡೆ ಹೇಳಿದರು. ಆದರೂ ಮುಖಾಮುಖಿ ವಿಚಾರಣೆ ಪುನರಾರಂಭವಾದ ಕೂಡಲೇ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಜ್ಜನ್ ಕುಮಾರ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ಮಾಡುವುದಾಗಿ ನ್ಯಾಯಪೀಠ ಹೇಳಿದೆ.

1984 ರ ಹತ್ಯಾಕಾಂಡದಲ್ಲಿ ಅವರ ಪಾತ್ರಕ್ಕಾಗಿ 2018 ರ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ 74 ವರ್ಷದ ರಾಜಕಾರಣಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಆಗಿನ ಪ್ರಧಾನಿ ಇಂದಿರಾ ಗಾಂಧಿಯನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ಪ್ರತೀಕಾರವಾಗಿ 1984 ರಲ್ಲಿ ಸಿಖ್ ಸಮುದಾಯವನ್ನು ಗುರಿಯಾಗಿಸಿಕೊಂಡು ಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಆಪರೇಷನ್‌ ‘ಬ್ಲೂ ಸ್ಟಾರ್‌’ ಮತ್ತು ಇಂದಿರಾ ಗಾಂಧಿ ಹತ್ಯೆಗೆ ಕಾರಣಗಳೇನು? ಹೇಗೆ ನಡೆಯಿತು.. ಪ್ರತ್ಯಕ್ಷದರ್ಶಿಯ ವರದಿ

ಸಜ್ಜನ್ ಅವರ ವಕೀಲ ವಿಕಾಸ್ ಸಿಂಗ್ ಕಕ್ಷಿದಾರ ಈಗಾಗಲೇ 18 ತಿಂಗಳು ಜೈಲಿನಲ್ಲಿದ್ದು, ಅವರ ಆರೋಗ್ಯ ಮತ್ತು ತೂಕವನ್ನು ಮರಳಿ ಪಡೆಯಲು ಒಂದು ತಿಂಗಳ ಕಾಲ ಮಧ್ಯಂತರ ಜಾಮೀನು ನೀಡಬೇಕು ಎಂದು ಕೇಳಿದ್ದರು.

“ಕೋರ್ಟ್ ಹೇರುವ ಯಾವುದೇ ಷರತ್ತನ್ನು ನಾನು ಪಾಲಿಸುತ್ತೇನೆ. ಕನಿಷ್ಠ 1 ತಿಂಗಳ ಕಾಲ ಮಧ್ಯಂತರ ಜಾಮೀನು ನೀಡಬೇಕು” ಎಂದು ವಿಕಾಸ್ ಸಿಂಗ್ ಒತ್ತಿ ಹೇಳಿದ್ದರು.

ಸಿಖ್‌ ಗಲಭೆ ಸಂತ್ರಸ್ತರನ್ನು ಪ್ರತಿನಿಧಿಸುತ್ತಿದ್ದ ವಕೀಲರು ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದರು. ಅವರಿಗೆ ಜೈಲಿನಲ್ಲಿ ಉತ್ತಮ ಆರೈಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌‌ನ ಮಾರ್ಚ್ 11 ರ ವರದಿಯನ್ನು ಗಮನಿಸಿದ ನ್ಯಾಯಾಲಯ, ಸಜ್ಜನ್ ಅವರ ತೂಕವು ವಾಸ್ತವವಾಗಿ ಅವರು ಮಾಡಿದ ಪ್ರತಿಪಾದನೆಗೆ ವಿರುದ್ಧವಾಗಿದ್ದು, ಹೆಚ್ಚಾಗಿದೆ ಎಂದು ಹೇಳಿದೆ.


ಇದನ್ನೂ ಓದಿ: ಮೋದಿ ಸರ್ವಾಧಿಕಾರ ಇಂದಿರಾಗಾಂಧಿ ಸರ್ವಾಧಿಕಾರ ಒಂದೇನಾ?..: ಪ್ರಭಾತ್ ಪಟ್ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...