Homeಮುಖಪುಟ1987ರ ಹಾಶಿಂಪುರ ಹತ್ಯಾಕಾಂಡ ಪ್ರಕರಣ | 8 ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು

1987ರ ಹಾಶಿಂಪುರ ಹತ್ಯಾಕಾಂಡ ಪ್ರಕರಣ | 8 ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು

- Advertisement -
- Advertisement -

1987ರಲ್ಲಿ ಉತ್ತರ ಪ್ರದೇಶದ ಹಾಶಿಂಪುರದಲ್ಲಿ 42 ಮುಸ್ಲಿರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಎಂಟು ಅಪರಾಧಿಗಳಿಗೆ ಜಾಮೀನು ನೀಡಿದೆ ಎಂದು ಪಿಟಿಐ ವರದಿ ಮಾಡಿದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು ಅಪರಾಧಿಗಳು 2018 ರಿಂದ ಜೈಲಿನಲ್ಲಿದ್ದಾರೆ ಎಂದು ಹೇಳಿದೆ. ಈ ಹಿಂದೆ ದೆಹಲಿ ಹೈಕೋರ್ಟ್ ಅವರ ಖುಲಾಸೆಯನ್ನು ರದ್ದುಗೊಳಿಸಿತ್ತು. 1987ರ ಹಾಶಿಂಪುರ ಹತ್ಯಾಕಾಂಡ

1987ರ ಮೇ 22ರಂದು ನಡೆದ ಈ ಅಪರಾಧದಲ್ಲಿ ಉತ್ತರ ಪ್ರದೇಶ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿ ಪೊಲೀಸರು ರಾಜ್ಯದ ಮೀರತ್ ಜಿಲ್ಲೆಯ ಹಾಶಿಂಪುರದಿಂದ 42 ಮುಸ್ಲಿರನ್ನು ಬಂಧಿಸಿ, ಲಾರಿಯಲ್ಲಿ ಕೂರಿಸಿ, ಹತ್ತಿರದ ಕಾಲುವೆಗೆ ಓಡಿಸಿ, ಅವರೆಲ್ಲರನ್ನೂ ಗುಂಡಿಕ್ಕಿ ನಂತರ ಶವಗಳನ್ನು ನೀರಿಗೆ ಎಸೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದು ನಡೆದು ಒಂದು ದಿನದ ನಂತರ, ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬ್ಯುಲರಿಯ ಸದಸ್ಯರೊಂದಿಗೆ ಗುಂಪೊಂದು ಮೀರತ್‌ನ ಮಲಿಯಾನಾ ಗ್ರಾಮವನ್ನು ಎಲ್ಲಾ ಕಡೆಯಿಂದ ಸುತ್ತುವರೆದು ಮುಸ್ಲಿಂ ಮಹಿಳೆಯ ಮತ್ತು ಮಕ್ಕಳು ಸೇರಿದಂತೆ ಎಲ್ಲರ ಮೇಲೆ ಗುಂಡು ಹಾರಿಸಿತ್ತು. 1987ರ ಹಾಶಿಂಪುರ ಹತ್ಯಾಕಾಂಡ

ಘಟನೆಯ ವಿಚಾರಣೆ ನಡೆಸಿದ್ದ 2015 ರ ವಿಚಾರಣಾ ನ್ಯಾಯಾಲಯವು ಪ್ರಾಂತೀಯ ಸಶಸ್ತ್ರ ಕಾನ್ಸ್ಟಾಬ್ಯುಲರಿಯ 16 ಸಿಬ್ಬಂದಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿತು. ಆದರೆ ಅಕ್ಟೋಬರ್ 31, 2018 ರಂದು, ನ್ಯಾಯಮೂರ್ತಿಗಳಾದ ಎಸ್ ಮುರಳೀಧರ್ ಮತ್ತು ವಿನೋದ್ ಗೋಯೆಲ್ ಅವರನ್ನೊಳಗೊಂಡ ದೆಹಲಿ ಹೈಕೋರ್ಟ್ ಪೀಠವು ಈ ತೀರ್ಪನ್ನು ತಳ್ಳಿಹಾಕಿತ್ತು.

ಶುಕ್ರವಾರ ನಾಲ್ವರು ಅಪರಾಧಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ಆನಂದ್ ತಿವಾರಿ ಅವರು, 2018 ರಲ್ಲಿ ಹೈಕೋರ್ಟ್‌ನ ತೀರ್ಪು ತಪ್ಪಾದ ಆಧಾರದ ಮೇಲೆ ಇದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದಾರೆ. ಮೇಲ್ಮನವಿ ಪ್ರಕ್ರಿಯೆಯಲ್ಲಿ ಅಪರಾಧಿಗಳ ವರ್ತನೆಯು ಅನುಕರಣೀಯವಾಗಿದೆ ಎಂದು ತಿವಾರಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಸುಪ್ರೀಂಕೋರ್ಟ್ ಅವರ ವಾದಗಳನ್ನು ಅಂಗೀಕರಿಸಿ ಎಂಟು ಅಪರಾಧಿಗಳ ಜಾಮೀನು ಅರ್ಜಿಯನ್ನು ಅಂಗೀಕರಿಸಿದೆ.

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...