Homeಕರ್ನಾಟಕಐದು ದಿನ ಬೆಂಗಳೂರಿನಲ್ಲಿ ವಿದ್ಯುತ್ ಕಟ್‌‌: ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಐದು ದಿನ ಬೆಂಗಳೂರಿನಲ್ಲಿ ವಿದ್ಯುತ್ ಕಟ್‌‌: ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಪ್ರತಿದಿನ ಆರು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

- Advertisement -
- Advertisement -

ಕೆಪಿಟಿಸಿಎಲ್ (ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್) ಕೈಗೊಂಡಿರುವ ಕಾಮಗಾರಿಗಳಿಂದ ಮುಂದಿನ ಐದು ದಿನಗಳಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತಗೊಳಿಸುವುದಾಗಿ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 18 ರಿಂದ 22 ರವರೆಗೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ಕಡಿತ ಮಾಡಲಾಗುತ್ತದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಕ್ಟೋಬರ್ 18 ರಂದು ಕನಕಪುರ, ರಾಮನಗರ ಮತ್ತು ತಿಪಟೂರು ಬೆಸ್ಕಾಂ ವಿಭಾಗಗಳು, ಅಕ್ಟೋಬರ್ 19 ರಂದು ಕೆಂಗೇರಿ ವಿಭಾಗ ಮತ್ತು ಅಕ್ಟೋಬರ್ 20 ರಿಂದ 22 ರ ವರೆಗೆ ರಾಮನಗರ ವಿಭಾಗದಲ್ಲಿ ಈ ವಿದ್ಯುತ್‌‌ ವ್ಯತ್ಯಯ ಉಂಟಾಗಲಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಮುಂದಿನ ಐದು ದಿನಗಳಲ್ಲಿ ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು ಹೀಗಿವೆ:

ಅಕ್ಟೋಬರ್ 18

ಕನಕಪುರ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳು, ಇಗ್ಗಲೂರು ಮತ್ತು ಸುತ್ತಮುತ್ತಲಿನ ಗ್ರಾಮಗಳು, ಬೆಂಕಿಕೆರೆ, ಮಾದಾಪುರ, ಹೊನ್ನೆಬಾಗಿ, ಬೆನಕನಹಳ್ಳಿ, ಹೆಬ್ಬಲಗೆರೆ, ಎನ್‌ಎಸ್‌ಟಿ ಕವಲು ಮುಂತಾದ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಮಲ್ಲಾಡಿಹಳ್ಳಿ ಮತ್ತು ಹೊಸದುರ್ಗ ಸುತ್ತಮುತ್ತಲಿನ ಪ್ರದೇಶ, ಬಿದರಗದ್ದೆ, ಹೊಳೆಮಾದಾಪುರ, ಕಮ್ಮರಗಟ್ಟೆ, ಗೋವಿನಕೋವಿ, ಆವರಗೆರೆ, ಮಲ್ಲೇಕಟ್ಟೆ, ಕಾಡಜ್ಜಿ, ಆನಗೋಡು, ಅತ್ತಿಗೆರೆ, ಮಾಯಕೊಂಡ, ಸರಸ್ವತಿ ಲೇಔಟ್, ಮಲೆಬೆನ್ನೂರು ಹೋಬಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಅಕ್ಟೋಬರ್‌ 18 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇಷ್ಟೆ ಅಲ್ಲದೆ, ಹಿರಿಯೂರು, ಆದಿವಾಳದ ನಗರ ಮತ್ತು ಗ್ರಾಮೀಣ ಪ್ರದೇಶಗಳು, ಲಕ್ಕವನಹಳ್ಳಿ, ತೋಟಗಾರಿಕಾ ಕಾಲೇಜು, ಹಬೀಬ್ ಮತ್ತು ನಂದಾ ಫೀಡ್ಸ್ ಕಾರ್ಖಾನೆ ಪ್ರದೇಶಗಳಲ್ಲಿ ಕೂಡಾ ಈ ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

ಅಕ್ಟೋಬರ್ 19

ಬಸವಪಟ್ಟಣ, ಹರಳೀಪುರ, ಹೊಸಳ್ಳಿ, ಹೊಸನಗರ, ಸಾಗರಪೇಟೆ, ಚಿರಡೋಣಿ, ಯಲ್ಲೋದಹಳ್ಳಿ, ಮರಬನಹಳ್ಳಿ, ಸಂಗಳ್ಳಿ, ದಾಗಿನಕಟ್ಟೆ, ಸಿದ್ದೇಶ್ವರನಗರ, ಕಂಚುಗಾರನಹಳ್ಳಿ, ನಿಲೋಗಲ್, ಕಟ್ಟಿಗೆ, ಆರುಂಡಿ, ಜೀನಹಳ್ಳಿ, ತೀರ್ಥರಾಮೇಶ್ವರದಲ್ಲಿ ಅಕ್ಟೋಬರ್‌ 19ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಷ್ಟೆ ಅಲ್ಲದೆ, ಕೆಎಚ್‌ಬಿ ಕಾಲೋನಿ, ಹರಿಹರ ಟೌನ್, ಹರಪ್ಪನಹಳ್ಳಿ ಠಾಣೆ, ಜೆಎನ್ ಕೋಟೆ, ಗೊಲ್ಲನಕಟ್ಟೆ, ಪಲ್ಲವಗೆರೆ, ಜೆಸಿ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಚನ್ನಪಟ್ಟಣ, ಆದನೂರು, ಅರೇನಹಳ್ಳಿ, ಅಪರಸನಹಳ್ಳಿ, ಹೊಳಲ್ಕೆರೆ ಟೌನ್, ಮದೇರು, ಬೊಮ್ಮನಕಟ್ಟೆ, ಚಿತ್ರಹಳ್ಳಿ, ಮಲ್ಲಾಡಿಹಳ್ಳಿ, ಗುಂಡಿಮಾದು, ಮಲ್ಲೇನಹಳ್ಳಿ, ಪುನುಜೂರು ಪ್ರದೇಶಗಳಲ್ಲಿ ಕೂಡಾ ವಿದ್ಯುತ್‌ ವ್ಯತ್ಯಯ ಆಗಲಿದೆ.

ಲೋಕದಹಾಳು, ಚೀರನಹಳ್ಳಿ, ರಾಮಗಿರಿ ರಸ್ತೆ, ಎನ್ ಜಿ ಹಳ್ಳಿ, ಗುಂಡೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಶಿವಪುರ, ರಾಮಗಟ್ಟಾ, ಕೆಂಗುಂಟೆ, ಧೂಮಿ, ಕುಣಗಲಿ, ಹೊಳೆಮಳಲಿ, ಅಗ್ರಹಾರ, ಕುಂದಗೂರ, ಕೋಡಿಹಳ್ಳಿ, ಉಪ್ಪಳಗೆರೆ, ಶಿವಪುರ, ಪಿಟ್ಲಹಳ್ಳಿ, ಆಲೂರು, ಲಕ್ಷ್ಮೀಪುರ, ಅರಣಕಟ್ಟೆ, ಪೆರನಕಟ್ಟೆ, ರಾಮಪುರ, ಅರಣಕಟ್ಟೆ ಮತ್ತು ರಾಂಪುರ ನಿಲ್ದಾಣಕ್ಕೆ ಸಂಬಂಧಿಸಿದ ಎಲ್ಲಾ ಪ್ರದೇಶಗಳಲ್ಲಿ ಬುಧವಾರ ವಿದ್ಯುತ್‌ ವ್ಯತ್ಯಯ ಆಗಲಿದೆ.

ಇದನ್ನೂ ಓದಿ: ಬೆಂಗಳೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದ ದಂಪತಿ ರಕ್ಷಿಸಿದ ಅಗ್ನಿಶಾಮಕ ದಳ

ರಾಂಪುರ ನಿಲ್ದಾಣದ ಬಳಿ ಏಳು ಗಂಟೆಗಳ ಪರ್ಯಾಯ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಹೇಳಿದೆ.

ಅಕ್ಟೋಬರ್ 20

ಗೋಮತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಕ್ಟೋಬರ್ 21

ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) 1ನೇ ಹಂತದ ಕೈಗಾರಿಕಾ ಪ್ರದೇಶ, ಬಿಲ್ಲೆಕೆಂಪನಹಳ್ಳಿ, ಮಾರುತಿನಗರ, ಬೀಮೇನಹಳ್ಳಿ, ನಿಂಗಯ್ಯನದೊಡ್ಡಿ, ರಂಗೇಗೌಡನದೊಡ್ಡಿ, ಲಕ್ಷ್ಮೀಸಾಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಇದನ್ನೂ ಓದಿ: ಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸ್

ಅಕ್ಟೋಬರ್ 22

KIADB 1 ನೇ ಹಂತದ ಕೈಗಾರಿಕಾ ಪ್ರದೇಶಗಳಲ್ಲಿ ಅಕ್ಟೋಬರ್ 22ರಂದು ವಿದ್ಯುತ್‌ ವ್ಯತ್ಯಯ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...