Homeಕರ್ನಾಟಕಐದು ದಿನ ಬೆಂಗಳೂರಿನಲ್ಲಿ ವಿದ್ಯುತ್ ಕಟ್‌‌: ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಐದು ದಿನ ಬೆಂಗಳೂರಿನಲ್ಲಿ ವಿದ್ಯುತ್ ಕಟ್‌‌: ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಪ್ರತಿದಿನ ಆರು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

- Advertisement -
- Advertisement -

ಕೆಪಿಟಿಸಿಎಲ್ (ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್) ಕೈಗೊಂಡಿರುವ ಕಾಮಗಾರಿಗಳಿಂದ ಮುಂದಿನ ಐದು ದಿನಗಳಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತಗೊಳಿಸುವುದಾಗಿ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 18 ರಿಂದ 22 ರವರೆಗೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ಕಡಿತ ಮಾಡಲಾಗುತ್ತದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಕ್ಟೋಬರ್ 18 ರಂದು ಕನಕಪುರ, ರಾಮನಗರ ಮತ್ತು ತಿಪಟೂರು ಬೆಸ್ಕಾಂ ವಿಭಾಗಗಳು, ಅಕ್ಟೋಬರ್ 19 ರಂದು ಕೆಂಗೇರಿ ವಿಭಾಗ ಮತ್ತು ಅಕ್ಟೋಬರ್ 20 ರಿಂದ 22 ರ ವರೆಗೆ ರಾಮನಗರ ವಿಭಾಗದಲ್ಲಿ ಈ ವಿದ್ಯುತ್‌‌ ವ್ಯತ್ಯಯ ಉಂಟಾಗಲಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಮುಂದಿನ ಐದು ದಿನಗಳಲ್ಲಿ ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು ಹೀಗಿವೆ:

ಅಕ್ಟೋಬರ್ 18

ಕನಕಪುರ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳು, ಇಗ್ಗಲೂರು ಮತ್ತು ಸುತ್ತಮುತ್ತಲಿನ ಗ್ರಾಮಗಳು, ಬೆಂಕಿಕೆರೆ, ಮಾದಾಪುರ, ಹೊನ್ನೆಬಾಗಿ, ಬೆನಕನಹಳ್ಳಿ, ಹೆಬ್ಬಲಗೆರೆ, ಎನ್‌ಎಸ್‌ಟಿ ಕವಲು ಮುಂತಾದ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಮಲ್ಲಾಡಿಹಳ್ಳಿ ಮತ್ತು ಹೊಸದುರ್ಗ ಸುತ್ತಮುತ್ತಲಿನ ಪ್ರದೇಶ, ಬಿದರಗದ್ದೆ, ಹೊಳೆಮಾದಾಪುರ, ಕಮ್ಮರಗಟ್ಟೆ, ಗೋವಿನಕೋವಿ, ಆವರಗೆರೆ, ಮಲ್ಲೇಕಟ್ಟೆ, ಕಾಡಜ್ಜಿ, ಆನಗೋಡು, ಅತ್ತಿಗೆರೆ, ಮಾಯಕೊಂಡ, ಸರಸ್ವತಿ ಲೇಔಟ್, ಮಲೆಬೆನ್ನೂರು ಹೋಬಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಅಕ್ಟೋಬರ್‌ 18 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇಷ್ಟೆ ಅಲ್ಲದೆ, ಹಿರಿಯೂರು, ಆದಿವಾಳದ ನಗರ ಮತ್ತು ಗ್ರಾಮೀಣ ಪ್ರದೇಶಗಳು, ಲಕ್ಕವನಹಳ್ಳಿ, ತೋಟಗಾರಿಕಾ ಕಾಲೇಜು, ಹಬೀಬ್ ಮತ್ತು ನಂದಾ ಫೀಡ್ಸ್ ಕಾರ್ಖಾನೆ ಪ್ರದೇಶಗಳಲ್ಲಿ ಕೂಡಾ ಈ ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

ಅಕ್ಟೋಬರ್ 19

ಬಸವಪಟ್ಟಣ, ಹರಳೀಪುರ, ಹೊಸಳ್ಳಿ, ಹೊಸನಗರ, ಸಾಗರಪೇಟೆ, ಚಿರಡೋಣಿ, ಯಲ್ಲೋದಹಳ್ಳಿ, ಮರಬನಹಳ್ಳಿ, ಸಂಗಳ್ಳಿ, ದಾಗಿನಕಟ್ಟೆ, ಸಿದ್ದೇಶ್ವರನಗರ, ಕಂಚುಗಾರನಹಳ್ಳಿ, ನಿಲೋಗಲ್, ಕಟ್ಟಿಗೆ, ಆರುಂಡಿ, ಜೀನಹಳ್ಳಿ, ತೀರ್ಥರಾಮೇಶ್ವರದಲ್ಲಿ ಅಕ್ಟೋಬರ್‌ 19ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಷ್ಟೆ ಅಲ್ಲದೆ, ಕೆಎಚ್‌ಬಿ ಕಾಲೋನಿ, ಹರಿಹರ ಟೌನ್, ಹರಪ್ಪನಹಳ್ಳಿ ಠಾಣೆ, ಜೆಎನ್ ಕೋಟೆ, ಗೊಲ್ಲನಕಟ್ಟೆ, ಪಲ್ಲವಗೆರೆ, ಜೆಸಿ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಚನ್ನಪಟ್ಟಣ, ಆದನೂರು, ಅರೇನಹಳ್ಳಿ, ಅಪರಸನಹಳ್ಳಿ, ಹೊಳಲ್ಕೆರೆ ಟೌನ್, ಮದೇರು, ಬೊಮ್ಮನಕಟ್ಟೆ, ಚಿತ್ರಹಳ್ಳಿ, ಮಲ್ಲಾಡಿಹಳ್ಳಿ, ಗುಂಡಿಮಾದು, ಮಲ್ಲೇನಹಳ್ಳಿ, ಪುನುಜೂರು ಪ್ರದೇಶಗಳಲ್ಲಿ ಕೂಡಾ ವಿದ್ಯುತ್‌ ವ್ಯತ್ಯಯ ಆಗಲಿದೆ.

ಲೋಕದಹಾಳು, ಚೀರನಹಳ್ಳಿ, ರಾಮಗಿರಿ ರಸ್ತೆ, ಎನ್ ಜಿ ಹಳ್ಳಿ, ಗುಂಡೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಶಿವಪುರ, ರಾಮಗಟ್ಟಾ, ಕೆಂಗುಂಟೆ, ಧೂಮಿ, ಕುಣಗಲಿ, ಹೊಳೆಮಳಲಿ, ಅಗ್ರಹಾರ, ಕುಂದಗೂರ, ಕೋಡಿಹಳ್ಳಿ, ಉಪ್ಪಳಗೆರೆ, ಶಿವಪುರ, ಪಿಟ್ಲಹಳ್ಳಿ, ಆಲೂರು, ಲಕ್ಷ್ಮೀಪುರ, ಅರಣಕಟ್ಟೆ, ಪೆರನಕಟ್ಟೆ, ರಾಮಪುರ, ಅರಣಕಟ್ಟೆ ಮತ್ತು ರಾಂಪುರ ನಿಲ್ದಾಣಕ್ಕೆ ಸಂಬಂಧಿಸಿದ ಎಲ್ಲಾ ಪ್ರದೇಶಗಳಲ್ಲಿ ಬುಧವಾರ ವಿದ್ಯುತ್‌ ವ್ಯತ್ಯಯ ಆಗಲಿದೆ.

ಇದನ್ನೂ ಓದಿ: ಬೆಂಗಳೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದ ದಂಪತಿ ರಕ್ಷಿಸಿದ ಅಗ್ನಿಶಾಮಕ ದಳ

ರಾಂಪುರ ನಿಲ್ದಾಣದ ಬಳಿ ಏಳು ಗಂಟೆಗಳ ಪರ್ಯಾಯ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಹೇಳಿದೆ.

ಅಕ್ಟೋಬರ್ 20

ಗೋಮತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಕ್ಟೋಬರ್ 21

ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) 1ನೇ ಹಂತದ ಕೈಗಾರಿಕಾ ಪ್ರದೇಶ, ಬಿಲ್ಲೆಕೆಂಪನಹಳ್ಳಿ, ಮಾರುತಿನಗರ, ಬೀಮೇನಹಳ್ಳಿ, ನಿಂಗಯ್ಯನದೊಡ್ಡಿ, ರಂಗೇಗೌಡನದೊಡ್ಡಿ, ಲಕ್ಷ್ಮೀಸಾಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಇದನ್ನೂ ಓದಿ: ಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸ್

ಅಕ್ಟೋಬರ್ 22

KIADB 1 ನೇ ಹಂತದ ಕೈಗಾರಿಕಾ ಪ್ರದೇಶಗಳಲ್ಲಿ ಅಕ್ಟೋಬರ್ 22ರಂದು ವಿದ್ಯುತ್‌ ವ್ಯತ್ಯಯ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...