Homeಕರ್ನಾಟಕಐದು ದಿನ ಬೆಂಗಳೂರಿನಲ್ಲಿ ವಿದ್ಯುತ್ ಕಟ್‌‌: ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಐದು ದಿನ ಬೆಂಗಳೂರಿನಲ್ಲಿ ವಿದ್ಯುತ್ ಕಟ್‌‌: ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಪ್ರತಿದಿನ ಆರು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

- Advertisement -
- Advertisement -

ಕೆಪಿಟಿಸಿಎಲ್ (ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್) ಕೈಗೊಂಡಿರುವ ಕಾಮಗಾರಿಗಳಿಂದ ಮುಂದಿನ ಐದು ದಿನಗಳಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತಗೊಳಿಸುವುದಾಗಿ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 18 ರಿಂದ 22 ರವರೆಗೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ಕಡಿತ ಮಾಡಲಾಗುತ್ತದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಕ್ಟೋಬರ್ 18 ರಂದು ಕನಕಪುರ, ರಾಮನಗರ ಮತ್ತು ತಿಪಟೂರು ಬೆಸ್ಕಾಂ ವಿಭಾಗಗಳು, ಅಕ್ಟೋಬರ್ 19 ರಂದು ಕೆಂಗೇರಿ ವಿಭಾಗ ಮತ್ತು ಅಕ್ಟೋಬರ್ 20 ರಿಂದ 22 ರ ವರೆಗೆ ರಾಮನಗರ ವಿಭಾಗದಲ್ಲಿ ಈ ವಿದ್ಯುತ್‌‌ ವ್ಯತ್ಯಯ ಉಂಟಾಗಲಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಮುಂದಿನ ಐದು ದಿನಗಳಲ್ಲಿ ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು ಹೀಗಿವೆ:

ಅಕ್ಟೋಬರ್ 18

ಕನಕಪುರ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳು, ಇಗ್ಗಲೂರು ಮತ್ತು ಸುತ್ತಮುತ್ತಲಿನ ಗ್ರಾಮಗಳು, ಬೆಂಕಿಕೆರೆ, ಮಾದಾಪುರ, ಹೊನ್ನೆಬಾಗಿ, ಬೆನಕನಹಳ್ಳಿ, ಹೆಬ್ಬಲಗೆರೆ, ಎನ್‌ಎಸ್‌ಟಿ ಕವಲು ಮುಂತಾದ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಮಲ್ಲಾಡಿಹಳ್ಳಿ ಮತ್ತು ಹೊಸದುರ್ಗ ಸುತ್ತಮುತ್ತಲಿನ ಪ್ರದೇಶ, ಬಿದರಗದ್ದೆ, ಹೊಳೆಮಾದಾಪುರ, ಕಮ್ಮರಗಟ್ಟೆ, ಗೋವಿನಕೋವಿ, ಆವರಗೆರೆ, ಮಲ್ಲೇಕಟ್ಟೆ, ಕಾಡಜ್ಜಿ, ಆನಗೋಡು, ಅತ್ತಿಗೆರೆ, ಮಾಯಕೊಂಡ, ಸರಸ್ವತಿ ಲೇಔಟ್, ಮಲೆಬೆನ್ನೂರು ಹೋಬಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಅಕ್ಟೋಬರ್‌ 18 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇಷ್ಟೆ ಅಲ್ಲದೆ, ಹಿರಿಯೂರು, ಆದಿವಾಳದ ನಗರ ಮತ್ತು ಗ್ರಾಮೀಣ ಪ್ರದೇಶಗಳು, ಲಕ್ಕವನಹಳ್ಳಿ, ತೋಟಗಾರಿಕಾ ಕಾಲೇಜು, ಹಬೀಬ್ ಮತ್ತು ನಂದಾ ಫೀಡ್ಸ್ ಕಾರ್ಖಾನೆ ಪ್ರದೇಶಗಳಲ್ಲಿ ಕೂಡಾ ಈ ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

ಅಕ್ಟೋಬರ್ 19

ಬಸವಪಟ್ಟಣ, ಹರಳೀಪುರ, ಹೊಸಳ್ಳಿ, ಹೊಸನಗರ, ಸಾಗರಪೇಟೆ, ಚಿರಡೋಣಿ, ಯಲ್ಲೋದಹಳ್ಳಿ, ಮರಬನಹಳ್ಳಿ, ಸಂಗಳ್ಳಿ, ದಾಗಿನಕಟ್ಟೆ, ಸಿದ್ದೇಶ್ವರನಗರ, ಕಂಚುಗಾರನಹಳ್ಳಿ, ನಿಲೋಗಲ್, ಕಟ್ಟಿಗೆ, ಆರುಂಡಿ, ಜೀನಹಳ್ಳಿ, ತೀರ್ಥರಾಮೇಶ್ವರದಲ್ಲಿ ಅಕ್ಟೋಬರ್‌ 19ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಷ್ಟೆ ಅಲ್ಲದೆ, ಕೆಎಚ್‌ಬಿ ಕಾಲೋನಿ, ಹರಿಹರ ಟೌನ್, ಹರಪ್ಪನಹಳ್ಳಿ ಠಾಣೆ, ಜೆಎನ್ ಕೋಟೆ, ಗೊಲ್ಲನಕಟ್ಟೆ, ಪಲ್ಲವಗೆರೆ, ಜೆಸಿ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಚನ್ನಪಟ್ಟಣ, ಆದನೂರು, ಅರೇನಹಳ್ಳಿ, ಅಪರಸನಹಳ್ಳಿ, ಹೊಳಲ್ಕೆರೆ ಟೌನ್, ಮದೇರು, ಬೊಮ್ಮನಕಟ್ಟೆ, ಚಿತ್ರಹಳ್ಳಿ, ಮಲ್ಲಾಡಿಹಳ್ಳಿ, ಗುಂಡಿಮಾದು, ಮಲ್ಲೇನಹಳ್ಳಿ, ಪುನುಜೂರು ಪ್ರದೇಶಗಳಲ್ಲಿ ಕೂಡಾ ವಿದ್ಯುತ್‌ ವ್ಯತ್ಯಯ ಆಗಲಿದೆ.

ಲೋಕದಹಾಳು, ಚೀರನಹಳ್ಳಿ, ರಾಮಗಿರಿ ರಸ್ತೆ, ಎನ್ ಜಿ ಹಳ್ಳಿ, ಗುಂಡೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಶಿವಪುರ, ರಾಮಗಟ್ಟಾ, ಕೆಂಗುಂಟೆ, ಧೂಮಿ, ಕುಣಗಲಿ, ಹೊಳೆಮಳಲಿ, ಅಗ್ರಹಾರ, ಕುಂದಗೂರ, ಕೋಡಿಹಳ್ಳಿ, ಉಪ್ಪಳಗೆರೆ, ಶಿವಪುರ, ಪಿಟ್ಲಹಳ್ಳಿ, ಆಲೂರು, ಲಕ್ಷ್ಮೀಪುರ, ಅರಣಕಟ್ಟೆ, ಪೆರನಕಟ್ಟೆ, ರಾಮಪುರ, ಅರಣಕಟ್ಟೆ ಮತ್ತು ರಾಂಪುರ ನಿಲ್ದಾಣಕ್ಕೆ ಸಂಬಂಧಿಸಿದ ಎಲ್ಲಾ ಪ್ರದೇಶಗಳಲ್ಲಿ ಬುಧವಾರ ವಿದ್ಯುತ್‌ ವ್ಯತ್ಯಯ ಆಗಲಿದೆ.

ಇದನ್ನೂ ಓದಿ: ಬೆಂಗಳೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದ ದಂಪತಿ ರಕ್ಷಿಸಿದ ಅಗ್ನಿಶಾಮಕ ದಳ

ರಾಂಪುರ ನಿಲ್ದಾಣದ ಬಳಿ ಏಳು ಗಂಟೆಗಳ ಪರ್ಯಾಯ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಹೇಳಿದೆ.

ಅಕ್ಟೋಬರ್ 20

ಗೋಮತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಕ್ಟೋಬರ್ 21

ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) 1ನೇ ಹಂತದ ಕೈಗಾರಿಕಾ ಪ್ರದೇಶ, ಬಿಲ್ಲೆಕೆಂಪನಹಳ್ಳಿ, ಮಾರುತಿನಗರ, ಬೀಮೇನಹಳ್ಳಿ, ನಿಂಗಯ್ಯನದೊಡ್ಡಿ, ರಂಗೇಗೌಡನದೊಡ್ಡಿ, ಲಕ್ಷ್ಮೀಸಾಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಇದನ್ನೂ ಓದಿ: ಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸ್

ಅಕ್ಟೋಬರ್ 22

KIADB 1 ನೇ ಹಂತದ ಕೈಗಾರಿಕಾ ಪ್ರದೇಶಗಳಲ್ಲಿ ಅಕ್ಟೋಬರ್ 22ರಂದು ವಿದ್ಯುತ್‌ ವ್ಯತ್ಯಯ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...