Homeಕರ್ನಾಟಕಐದು ದಿನ ಬೆಂಗಳೂರಿನಲ್ಲಿ ವಿದ್ಯುತ್ ಕಟ್‌‌: ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಐದು ದಿನ ಬೆಂಗಳೂರಿನಲ್ಲಿ ವಿದ್ಯುತ್ ಕಟ್‌‌: ವ್ಯತ್ಯಯಗೊಳ್ಳುವ ಪ್ರದೇಶಗಳ ಸಂಪೂರ್ಣ ಪಟ್ಟಿ ಹೀಗಿದೆ

ಪ್ರತಿದಿನ ಆರು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

- Advertisement -
- Advertisement -

ಕೆಪಿಟಿಸಿಎಲ್ (ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್) ಕೈಗೊಂಡಿರುವ ಕಾಮಗಾರಿಗಳಿಂದ ಮುಂದಿನ ಐದು ದಿನಗಳಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತಗೊಳಿಸುವುದಾಗಿ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (ಬೆಸ್ಕಾಂ) ಘೋಷಿಸಿದೆ.

ಅಕ್ಟೋಬರ್ 18 ರಿಂದ 22 ರವರೆಗೆ ನಗರದ ಕೆಲವು ಭಾಗಗಳಲ್ಲಿ ಯೋಜಿತ ವಿದ್ಯುತ್ ಕಡಿತ ಮಾಡಲಾಗುತ್ತದೆ. ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಆರು ಗಂಟೆಗಳ ಕಾಲ ವಿದ್ಯುತ್ ಕಡಿತವನ್ನು ನಿಗದಿಪಡಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಕ್ಟೋಬರ್ 18 ರಂದು ಕನಕಪುರ, ರಾಮನಗರ ಮತ್ತು ತಿಪಟೂರು ಬೆಸ್ಕಾಂ ವಿಭಾಗಗಳು, ಅಕ್ಟೋಬರ್ 19 ರಂದು ಕೆಂಗೇರಿ ವಿಭಾಗ ಮತ್ತು ಅಕ್ಟೋಬರ್ 20 ರಿಂದ 22 ರ ವರೆಗೆ ರಾಮನಗರ ವಿಭಾಗದಲ್ಲಿ ಈ ವಿದ್ಯುತ್‌‌ ವ್ಯತ್ಯಯ ಉಂಟಾಗಲಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಮುಂದಿನ ಐದು ದಿನಗಳಲ್ಲಿ ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು ಹೀಗಿವೆ:

ಅಕ್ಟೋಬರ್ 18

ಕನಕಪುರ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳು, ಇಗ್ಗಲೂರು ಮತ್ತು ಸುತ್ತಮುತ್ತಲಿನ ಗ್ರಾಮಗಳು, ಬೆಂಕಿಕೆರೆ, ಮಾದಾಪುರ, ಹೊನ್ನೆಬಾಗಿ, ಬೆನಕನಹಳ್ಳಿ, ಹೆಬ್ಬಲಗೆರೆ, ಎನ್‌ಎಸ್‌ಟಿ ಕವಲು ಮುಂತಾದ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಮಲ್ಲಾಡಿಹಳ್ಳಿ ಮತ್ತು ಹೊಸದುರ್ಗ ಸುತ್ತಮುತ್ತಲಿನ ಪ್ರದೇಶ, ಬಿದರಗದ್ದೆ, ಹೊಳೆಮಾದಾಪುರ, ಕಮ್ಮರಗಟ್ಟೆ, ಗೋವಿನಕೋವಿ, ಆವರಗೆರೆ, ಮಲ್ಲೇಕಟ್ಟೆ, ಕಾಡಜ್ಜಿ, ಆನಗೋಡು, ಅತ್ತಿಗೆರೆ, ಮಾಯಕೊಂಡ, ಸರಸ್ವತಿ ಲೇಔಟ್, ಮಲೆಬೆನ್ನೂರು ಹೋಬಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಡಾ ಅಕ್ಟೋಬರ್‌ 18 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇಷ್ಟೆ ಅಲ್ಲದೆ, ಹಿರಿಯೂರು, ಆದಿವಾಳದ ನಗರ ಮತ್ತು ಗ್ರಾಮೀಣ ಪ್ರದೇಶಗಳು, ಲಕ್ಕವನಹಳ್ಳಿ, ತೋಟಗಾರಿಕಾ ಕಾಲೇಜು, ಹಬೀಬ್ ಮತ್ತು ನಂದಾ ಫೀಡ್ಸ್ ಕಾರ್ಖಾನೆ ಪ್ರದೇಶಗಳಲ್ಲಿ ಕೂಡಾ ಈ ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಓಲಾ-ಉಬರ್‌‌ ನಿಷೇಧಕ್ಕೆ ಮಧ್ಯಂತರ ತಡೆ; ಸರ್ಕಾರದ ಆದೇಶಕ್ಕೆ ಹಿನ್ನಡೆ

ಅಕ್ಟೋಬರ್ 19

ಬಸವಪಟ್ಟಣ, ಹರಳೀಪುರ, ಹೊಸಳ್ಳಿ, ಹೊಸನಗರ, ಸಾಗರಪೇಟೆ, ಚಿರಡೋಣಿ, ಯಲ್ಲೋದಹಳ್ಳಿ, ಮರಬನಹಳ್ಳಿ, ಸಂಗಳ್ಳಿ, ದಾಗಿನಕಟ್ಟೆ, ಸಿದ್ದೇಶ್ವರನಗರ, ಕಂಚುಗಾರನಹಳ್ಳಿ, ನಿಲೋಗಲ್, ಕಟ್ಟಿಗೆ, ಆರುಂಡಿ, ಜೀನಹಳ್ಳಿ, ತೀರ್ಥರಾಮೇಶ್ವರದಲ್ಲಿ ಅಕ್ಟೋಬರ್‌ 19ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಷ್ಟೆ ಅಲ್ಲದೆ, ಕೆಎಚ್‌ಬಿ ಕಾಲೋನಿ, ಹರಿಹರ ಟೌನ್, ಹರಪ್ಪನಹಳ್ಳಿ ಠಾಣೆ, ಜೆಎನ್ ಕೋಟೆ, ಗೊಲ್ಲನಕಟ್ಟೆ, ಪಲ್ಲವಗೆರೆ, ಜೆಸಿ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಚನ್ನಪಟ್ಟಣ, ಆದನೂರು, ಅರೇನಹಳ್ಳಿ, ಅಪರಸನಹಳ್ಳಿ, ಹೊಳಲ್ಕೆರೆ ಟೌನ್, ಮದೇರು, ಬೊಮ್ಮನಕಟ್ಟೆ, ಚಿತ್ರಹಳ್ಳಿ, ಮಲ್ಲಾಡಿಹಳ್ಳಿ, ಗುಂಡಿಮಾದು, ಮಲ್ಲೇನಹಳ್ಳಿ, ಪುನುಜೂರು ಪ್ರದೇಶಗಳಲ್ಲಿ ಕೂಡಾ ವಿದ್ಯುತ್‌ ವ್ಯತ್ಯಯ ಆಗಲಿದೆ.

ಲೋಕದಹಾಳು, ಚೀರನಹಳ್ಳಿ, ರಾಮಗಿರಿ ರಸ್ತೆ, ಎನ್ ಜಿ ಹಳ್ಳಿ, ಗುಂಡೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಶಿವಪುರ, ರಾಮಗಟ್ಟಾ, ಕೆಂಗುಂಟೆ, ಧೂಮಿ, ಕುಣಗಲಿ, ಹೊಳೆಮಳಲಿ, ಅಗ್ರಹಾರ, ಕುಂದಗೂರ, ಕೋಡಿಹಳ್ಳಿ, ಉಪ್ಪಳಗೆರೆ, ಶಿವಪುರ, ಪಿಟ್ಲಹಳ್ಳಿ, ಆಲೂರು, ಲಕ್ಷ್ಮೀಪುರ, ಅರಣಕಟ್ಟೆ, ಪೆರನಕಟ್ಟೆ, ರಾಮಪುರ, ಅರಣಕಟ್ಟೆ ಮತ್ತು ರಾಂಪುರ ನಿಲ್ದಾಣಕ್ಕೆ ಸಂಬಂಧಿಸಿದ ಎಲ್ಲಾ ಪ್ರದೇಶಗಳಲ್ಲಿ ಬುಧವಾರ ವಿದ್ಯುತ್‌ ವ್ಯತ್ಯಯ ಆಗಲಿದೆ.

ಇದನ್ನೂ ಓದಿ: ಬೆಂಗಳೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದ ದಂಪತಿ ರಕ್ಷಿಸಿದ ಅಗ್ನಿಶಾಮಕ ದಳ

ರಾಂಪುರ ನಿಲ್ದಾಣದ ಬಳಿ ಏಳು ಗಂಟೆಗಳ ಪರ್ಯಾಯ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಹೇಳಿದೆ.

ಅಕ್ಟೋಬರ್ 20

ಗೋಮತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಕ್ಟೋಬರ್ 21

ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) 1ನೇ ಹಂತದ ಕೈಗಾರಿಕಾ ಪ್ರದೇಶ, ಬಿಲ್ಲೆಕೆಂಪನಹಳ್ಳಿ, ಮಾರುತಿನಗರ, ಬೀಮೇನಹಳ್ಳಿ, ನಿಂಗಯ್ಯನದೊಡ್ಡಿ, ರಂಗೇಗೌಡನದೊಡ್ಡಿ, ಲಕ್ಷ್ಮೀಸಾಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಇದನ್ನೂ ಓದಿ: ಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸ್

ಅಕ್ಟೋಬರ್ 22

KIADB 1 ನೇ ಹಂತದ ಕೈಗಾರಿಕಾ ಪ್ರದೇಶಗಳಲ್ಲಿ ಅಕ್ಟೋಬರ್ 22ರಂದು ವಿದ್ಯುತ್‌ ವ್ಯತ್ಯಯ ಆಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...