Homeಮುಖಪುಟ1 ನೇ ಆರ್ಥಿಕ ತ್ರೈಮಾಸಿಕ ಜಿಡಿಪಿ 23.9% ಇಳಿಕೆ; ಐತಿಹಾಸಿಕ ಇಳಿಕೆ ಕಂಡ ಭಾರತ

1 ನೇ ಆರ್ಥಿಕ ತ್ರೈಮಾಸಿಕ ಜಿಡಿಪಿ 23.9% ಇಳಿಕೆ; ಐತಿಹಾಸಿಕ ಇಳಿಕೆ ಕಂಡ ಭಾರತ

ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಿದ ಹೊರತಾಗಿಯು ಬೇಡಿಕೆ ಮತ್ತು ಉತ್ಪಾದನೆ ಇನ್ನೂ ಚೇತರಿಸಿಕೊಂಡಿಲ್ಲ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ನಿರಂತರ ಲಾಕ್‌‌ಡೌನ್‌ನಿಂದಾಗಿ ಪ್ರಮುಖ ಕೈಗಾರಿಕೆಗಳು ಸ್ಥಗಿತಗೊಂಡ ಪರಿಣಾಮ ಹಾಗೂ ಲಕ್ಷಾಂತರ ಜನರ ನಿರುದ್ಯೋಗಿಗಳು ನಷ್ಟವಾಗಿದ್ದರಿಂದ, ಏಪ್ರಿಲ್-ಜೂನ್ ಅವಧಿಯಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇಕಡಾ 23.9 ರಷ್ಟು ಇಳಿಕೆಯಾಗಿದೆ.

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ. ಅಷ್ಟೇ ಅಲ್ಲದೆ ಏಷ್ಯಾದ ಪ್ರಮುಖ ಆರ್ಥಿಕತೆಯಲ್ಲಿ ಇದು ಅತ್ಯಂತ ಕೆಟ್ಟದಾದ ಆರ್ಥಿಕ ಕುಸಿತವಾಗಿದೆ.

2019–20 ರ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ 5.2 ರಷ್ಟು ಬೆಳವಣಿಗೆ ಕಂಡಿತ್ತು ಎಂದು ಎನ್‌ಎಸ್‌ಒ ಅಂಕಿ ಅಂಶ ಹೇಳಿದೆ.

ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು?

ಬ್ಲೂಂಬರ್ಗ್‌ ಆರ್ಥಿಕ ತಜ್ಞರ ಲೆಕ್ಕಚಾರದ ಪ್ರಕಾರ ಭಾರತದ ಆರ್ಥಿಕತೆ ಶೇ. 15 ರಿಂದ ಶೇ. 25.9 ರ ನಡುವೆ ಕುಸಿಯಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಪ್ರಸ್ತುತ ಆರ್ಥಿಕ ಕುಸಿತವು ಎರಡನೇ ತ್ರೈಮಾಸಿಕದಲ್ಲೂ ಮುಂದುವರಿಯಲಿದೆ ಎಂದು ಅಂದಾಜಿಸಲಾಗಿದೆ.

2019–2020 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 5.2% ದಾಖಲಾಗಿತ್ತು. 2ನೇ ತ್ರೈಮಾಸಿಕದಲ್ಲಿ 4.4 % ದಾಖಲಾದರೆ, 3ನೇ ತ್ರೈಮಾಸಿಕದಲ್ಲಿ 4.1% ದಾಖಲಾಗಿ, 4ನೇ ತ್ರೈಮಾಸಿಕದ ಹೊತ್ತಿದೆ 3.1% ಬೆಳವಣಿಗೆ ದಾಖಲಾಗಿತ್ತು.

ಆದರೆ 2020–21 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲೇ 23.9% ದಷ್ಟು ಇಳಿಯಾಗಿದೆ. ಈ ಇಳಿಕೆ ಎರಡನೆ ತ್ರೈಮಾಸಿಕದಲ್ಲೂ ಮುಂದುವೆರೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಮೋದಿ 2.1: ಆರ್ಥಿಕ ಸಮಸ್ಯೆಗೆ ಪರಿಹಾರ ಕಾಣದ ಕೇಂದ್ರ ಸರ್ಕಾರಕ್ಕೆ ಕೊರೊನಾ ನೆಪ!

ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಿದ ಹೊರತಾಗಿಯು ಬೇಡಿಕೆ ಮತ್ತು ಉತ್ಪಾದನೆ ಇನ್ನೂ ಚೇತರಿಸಿಕೊಂಡಿಲ್ಲ.

ದೇಶದಲ್ಲಿ ಕೊರೊನಾ ಪ್ರಾರಂಭವಾಗುವುದಕ್ಕೆ ಮುಂಚೆ, ಆರ್ಥಿಕತೆಯು ನಿಧಾನಗತಿಯ ಬೆಳವಣಿಗೆ ಮತ್ತು ಕಡಿಮೆ ಬೇಡಿಕೆಯ ಹೊರತಾಗಿಯೂ, ಆರ್ಥಿಕತೆಯನ್ನು ಅಂದಾಜು 2.8 ಟ್ರಿಲಿಯನ್ ಡಾಲರ್‌‌ನಿಂದ 2024 ರವೇಳೆಗೆ 5 ಟ್ರಿಲಿಯನ್‌ ಡಾಲರ್‌ ಪರಿವರ್ತಿಸುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೇಳಿತ್ತು.

ಕಳೆದವಾರ ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮ್, ‘ಕೊರೊನಾ ಸಾಂಕ್ರಾಮಿಕವು ದೇವರ ಕಾರ್ಯ. ಹಾಗಾಗಿಯೇ ಜಿಎಸ್‌ಟಿ ಸಂಗ್ರಹದಲ್ಲಿ ಕುಸಿತವಾಗಿದೆ’ ಎಂದು ಜಿಎಸ್‌ಟಿ ಕುಸಿತದ ಬಗ್ಗೆ ಹೇಳಿದ್ದರು.


ಇದನ್ನೂ ಓದಿ: ದೇವರ ಸಂದೇಶವಾಹಕರೆ, ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು? ಪಿ.ಚಿದಂಬರಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...