Homeಕರ್ನಾಟಕಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

- Advertisement -
- Advertisement -

ಸರಕಾರದ ನಡೆಗೆ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಖಂಡನೆ

ಸುವರ್ಣ ವಿಧಾನಸೌಧ (ಬೆಳಗಾವಿ): ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ 2.23 ಲಕ್ಷ  ಬಗರ್ ಹುಕುಂ ಅರ್ಜಿಗಳನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಮೂನೆ–50, ನಮೂನೆ–53 ಮತ್ತು ನಮೂನೆ–57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 20 ಮಾನದಂಡಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತಿದೆ. ಅನರ್ಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸಲ್ಲಿಕೆಯಾಗಿದ್ದ 42,350 ಅರ್ಜಿಗಳ ಪೈಕಿ, 33,499 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.

ಬಗರ್ ಹುಕುಂ ಯೋಜನೆಯ ಅಡಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದವರ ಪೈಕಿ 5 ರಿಂದ 6 ಲಕ್ಷ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗಿದೆ. ಕಾನೂನು ರೀತ್ಯಾ ಅರ್ಜಿ ಸಲ್ಲಿಸಬೇಕಾದ ದಿನಕ್ಕೆ 18 ವರ್ಷ ತುಂಬದ 26,051 ಜನ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ಈಗಾಗಲೇ 4.38 ಎಕರೆ ಜಮೀನು ಹೊಂದಿರುವ 26,922 ಅರ್ಜಿಗಳು, ಕೆರೆ ರಸ್ತೆ ಸೇರಿ ಬಿ-ಖರಾಬು ಪ್ರದೇಶಗಳ ಮಂಜೂರಾತಿಗೆ ಕೋರಿ 40,799 ಅರ್ಜಿಗಳು, ಅರಣ್ಯ ಪ್ರದೇಶಗಳ ಮಂಜೂರಾತಿಗೆ 1,68,119 ಅರ್ಜಿಗಳು, ನಗರ ಪರಿಮಿತಿಯೊಳಗೆ ಮಂಜೂರಾತಿ ಕೋರಿ 68,561 ಅರ್ಜಿಗಳು, ತಾಲೂಕಿನಲ್ಲೇ ವಾಸ ಇಲ್ಲದ 8,665 ಅರ್ಜಿಗಳು ಹಾಗೂ ಕೃಷಿಕರಲ್ಲದ 1,00,400 ಜನ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

18 ವರ್ಷ ಕೆಳಗಿನನವರು ಸಲ್ಲಿಸಿರುವ 7,000ಕ್ಕೂ ಹೆಚ್ಚುಅರ್ಜಿಗಳನ್ನು ತಿರಸ್ಕರಿಸಲಾಗಿದೆ.  ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಸಲ್ಲಿಸಿದ್ದ 27,452 ಅರ್ಜಿಗಳು, ನಗರಗಳ ಬಫರ್ ವಲಯದ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವುದಾಗಿ ಸಲ್ಲಿಸಿದ್ದ 33,000 ಅರ್ಜಿಗಳು, ಅರಣ್ಯಕ್ಕೆ ಸಂಬಂಧಿಸಿದ 12,000 ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದು ಹೇಳಿದರು.

ಅನರ್ಹ ಅರ್ಜಿಗಳನ್ನು ಅಧಿಕಾರಿಗಳ ಮಟ್ಟದಲ್ಲೇ ಪರಿಶೀಲನೆ ವೇಳೆ ವಿಲೇವಾರಿ ಮಾಡಬೇಕು. ಇಂತಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಪರಿಶೀಲನೆಯೇ ಅಂತಿಮವಲ್ಲ. ಒಂದು ವೇಳೆ ಅಧಿಕಾರಿಗಳ ತಪ್ಪಿನಿಂದ ಅರ್ಹ ಅರ್ಜಿಯನ್ನು ವಿಸರ್ಜಿಸಲಾಗಿದ್ದರೆ ಅಂತಹ ಅರ್ಜಿಗಳನ್ನು ಮತ್ತೆ ಮರುಪರಿಶೀಲನೆ ಒಳಪಡಿಸಲಾಗುವುದು ಎಂದೂ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕೃಷಿಕರೇ ಅಲ್ಲದವರು, ಅರ್ಜಿಯಲ್ಲಿ ಉಲ್ಲೇಖಿಸಿದ ಜಮೀನುಗಳಲ್ಲಿ ಸಾಗುವಳಿಯನ್ನೇ ಮಾಡದವರು, ಕುಟುಂಬದಲ್ಲಿ 5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು ಸಲ್ಲಿಸಿರುವ ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದರು.

ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು, ‘ಬಗರ್ ಹುಕುಂ ಸಾಗುವಳಿ ಸಮಿತಿಗಳ ನಿರ್ಣಯದಂತೆ ಭೂ ಮಂಜೂರಾತಿಯಾಗಿರುವ 10,651 ಪ್ರಕರಣಗಳಲ್ಲಿ ಈವರೆಗೂ ರೈತರ ಹೆಸರಿಗೆ ಖಾತೆ ಮಾಡದಿರುವುದು ಕಂಡುಬಂದಿದೆ’ ಎಂದು ವಿಧಾನಸಭೆಗೆ ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 2,749, ಹಾಸನ ಜಿಲ್ಲೆಯಲ್ಲಿ 2,679, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1,527 ಮತ್ತು ರಾಮನಗರ ಜಿಲ್ಲೆಯಲ್ಲಿ 1,144 ಪ್ರಕರಣಗಳಲ್ಲಿ ಇನ್ನೂ ಖಾತೆಯಾಗಿಲ್ಲ ಎಂದು ಮಾಹಿತಿ ನೀಡಿದರು.

ಬಿಜೆಪಿಯ ಆರಗ ಜ್ಞಾನೇಂದ್ರ ಮಾತನಾಡಿ, ‘ರಾಜ್ಯದಲ್ಲಿ ಈಗ ರೂಪಿಸಿರುವ ಬಗರ್ ಹುಕುಂ ಭೂ ಮಂಜೂರಾತಿ ನಿಯಮಗಳು ಜಟಿಲವಾಗಿವೆ. ಅಧಿಕಾರಿಗಳೇ ಎಲ್ಲ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ. ಕಂದಾಯ– ಅರಣ್ಯ ಜಮೀನು ಜಂಟಿಯಾಗಿರುವ ಸರ್ವೆ ನಂಬರ್‌ಗಳಲ್ಲಿ ಜಂಟಿ ಸರ್ವೆ ಪೂರ್ಣಗೊಳ್ಳದಿದ್ದರೂ ಅರಣ್ಯದ ನೆಪದಲ್ಲಿ ಅರ್ಜಿ ತಿರಸ್ಕರಿಸಲಾಗುತ್ತಿದೆ’ ಎಂದು ದೂರಿದರು.

‘ಕಂದಾಯ– ಅರಣ್ಯ ಜಮೀನುಗಳು ಒಂದೇ ಸರ್ವೆ ನಂಬರ್‌ಗಳಲ್ಲಿ ಇದ್ದು, ಜಂಟಿ ಸರ್ವೆ ನಡೆಸಿ ಗಡಿ ಗುರುತಿಸದ ಪ್ರಕರಣಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಜಂಟಿ ಸರ್ವೆ ನಡೆಸಲು ಕ್ರಮ ಕೈಗೊಳ್ಳುವೆ’ ಎಂದು ಭರವಸೆ ನೀಡಿದರು.

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ (ಬಗರ್ ಹುಕುಂ) ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಸಾಕಷ್ಟು ಅರ್ಜಿಗಳನ್ನು ಸರಕಾರ ತಿರಸ್ಕರಿಸಿದ್ದು,  ಸರಕಾರದ ಈ ನಡೆ ಅತ್ಯಂತ ಖಂಡನೀಯ.  ಫಾರಂ ನಂಬರ್ 50, 53, 57ರಲ್ಲಿ ಭೂ ಹಕ್ಕು ಪತ್ರಕ್ಕಾಗಿ ಸಲ್ಲಿಕೆಯಾದ ರೈತರ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವುದು ಮಾತ್ರ ಸರಕಾರದ ಸಾಧನೆಯಲ್ಲ. ಕಾನೂನು ನಿಯಮಗಳನ್ನು ಅದಷ್ಟು ಸಡಿಕೆ ಮಾಡಿ ರೈತರಿಗೆ ಭೂ ಮಂಜೂರಾತಿ ಮಾಡುವ ಇಚ್ಛಾಶಕ್ತಿ ಸರಕಾರಕ್ಕೆ ಇರಬೇಕಾಗಿದೆ. ಇದು ಅತ್ಯಂತ ಮುಖ್ಯವಾಗಿದೆ. ದೇಶದಲ್ಲಿ ಉದ್ಯಮಿಗಳಿಗೆ ಕೋಟ್ಯಂತರ ರೂ.ಗಳ ಮಾಫಿ ಮಾಡುವ, ಇತರ ಕಾನೂನು ಸಡಿಲಿಕೆ ಮಾಡಿ ಅವರ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಭೂಮಿಯನ್ನು ಸರಕಾರ ಒದಗಿಸುತ್ತಿರುವಾಗ ಬಡ ರೈತರಿಗಾಗಿ ಕೆಲ ಕಾನೂನು ಮಾರ್ಪಾಟು ಯಾಕೆ ಸಾಧ್ಯವಾಗುತ್ತಿಲ್ಲ. ರೈತರಿಗೆ ನ್ಯಾಯ ಒದಗಿಸುವಲ್ಲಿ ಸರಕಾರ ವಿಫಲವಾದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದ್ದಾರೆ.

ಇದನ್ನೂ ಓದಿ….ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...