Homeಕರ್ನಾಟಕಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

- Advertisement -
- Advertisement -

ಸರಕಾರದ ನಡೆಗೆ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಖಂಡನೆ

ಸುವರ್ಣ ವಿಧಾನಸೌಧ (ಬೆಳಗಾವಿ): ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ 2.23 ಲಕ್ಷ  ಬಗರ್ ಹುಕುಂ ಅರ್ಜಿಗಳನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಮೂನೆ–50, ನಮೂನೆ–53 ಮತ್ತು ನಮೂನೆ–57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 20 ಮಾನದಂಡಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತಿದೆ. ಅನರ್ಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸಲ್ಲಿಕೆಯಾಗಿದ್ದ 42,350 ಅರ್ಜಿಗಳ ಪೈಕಿ, 33,499 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.

ಬಗರ್ ಹುಕುಂ ಯೋಜನೆಯ ಅಡಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದವರ ಪೈಕಿ 5 ರಿಂದ 6 ಲಕ್ಷ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗಿದೆ. ಕಾನೂನು ರೀತ್ಯಾ ಅರ್ಜಿ ಸಲ್ಲಿಸಬೇಕಾದ ದಿನಕ್ಕೆ 18 ವರ್ಷ ತುಂಬದ 26,051 ಜನ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ಈಗಾಗಲೇ 4.38 ಎಕರೆ ಜಮೀನು ಹೊಂದಿರುವ 26,922 ಅರ್ಜಿಗಳು, ಕೆರೆ ರಸ್ತೆ ಸೇರಿ ಬಿ-ಖರಾಬು ಪ್ರದೇಶಗಳ ಮಂಜೂರಾತಿಗೆ ಕೋರಿ 40,799 ಅರ್ಜಿಗಳು, ಅರಣ್ಯ ಪ್ರದೇಶಗಳ ಮಂಜೂರಾತಿಗೆ 1,68,119 ಅರ್ಜಿಗಳು, ನಗರ ಪರಿಮಿತಿಯೊಳಗೆ ಮಂಜೂರಾತಿ ಕೋರಿ 68,561 ಅರ್ಜಿಗಳು, ತಾಲೂಕಿನಲ್ಲೇ ವಾಸ ಇಲ್ಲದ 8,665 ಅರ್ಜಿಗಳು ಹಾಗೂ ಕೃಷಿಕರಲ್ಲದ 1,00,400 ಜನ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

18 ವರ್ಷ ಕೆಳಗಿನನವರು ಸಲ್ಲಿಸಿರುವ 7,000ಕ್ಕೂ ಹೆಚ್ಚುಅರ್ಜಿಗಳನ್ನು ತಿರಸ್ಕರಿಸಲಾಗಿದೆ.  ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಸಲ್ಲಿಸಿದ್ದ 27,452 ಅರ್ಜಿಗಳು, ನಗರಗಳ ಬಫರ್ ವಲಯದ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವುದಾಗಿ ಸಲ್ಲಿಸಿದ್ದ 33,000 ಅರ್ಜಿಗಳು, ಅರಣ್ಯಕ್ಕೆ ಸಂಬಂಧಿಸಿದ 12,000 ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದು ಹೇಳಿದರು.

ಅನರ್ಹ ಅರ್ಜಿಗಳನ್ನು ಅಧಿಕಾರಿಗಳ ಮಟ್ಟದಲ್ಲೇ ಪರಿಶೀಲನೆ ವೇಳೆ ವಿಲೇವಾರಿ ಮಾಡಬೇಕು. ಇಂತಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಪರಿಶೀಲನೆಯೇ ಅಂತಿಮವಲ್ಲ. ಒಂದು ವೇಳೆ ಅಧಿಕಾರಿಗಳ ತಪ್ಪಿನಿಂದ ಅರ್ಹ ಅರ್ಜಿಯನ್ನು ವಿಸರ್ಜಿಸಲಾಗಿದ್ದರೆ ಅಂತಹ ಅರ್ಜಿಗಳನ್ನು ಮತ್ತೆ ಮರುಪರಿಶೀಲನೆ ಒಳಪಡಿಸಲಾಗುವುದು ಎಂದೂ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕೃಷಿಕರೇ ಅಲ್ಲದವರು, ಅರ್ಜಿಯಲ್ಲಿ ಉಲ್ಲೇಖಿಸಿದ ಜಮೀನುಗಳಲ್ಲಿ ಸಾಗುವಳಿಯನ್ನೇ ಮಾಡದವರು, ಕುಟುಂಬದಲ್ಲಿ 5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು ಸಲ್ಲಿಸಿರುವ ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದರು.

ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು, ‘ಬಗರ್ ಹುಕುಂ ಸಾಗುವಳಿ ಸಮಿತಿಗಳ ನಿರ್ಣಯದಂತೆ ಭೂ ಮಂಜೂರಾತಿಯಾಗಿರುವ 10,651 ಪ್ರಕರಣಗಳಲ್ಲಿ ಈವರೆಗೂ ರೈತರ ಹೆಸರಿಗೆ ಖಾತೆ ಮಾಡದಿರುವುದು ಕಂಡುಬಂದಿದೆ’ ಎಂದು ವಿಧಾನಸಭೆಗೆ ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 2,749, ಹಾಸನ ಜಿಲ್ಲೆಯಲ್ಲಿ 2,679, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1,527 ಮತ್ತು ರಾಮನಗರ ಜಿಲ್ಲೆಯಲ್ಲಿ 1,144 ಪ್ರಕರಣಗಳಲ್ಲಿ ಇನ್ನೂ ಖಾತೆಯಾಗಿಲ್ಲ ಎಂದು ಮಾಹಿತಿ ನೀಡಿದರು.

ಬಿಜೆಪಿಯ ಆರಗ ಜ್ಞಾನೇಂದ್ರ ಮಾತನಾಡಿ, ‘ರಾಜ್ಯದಲ್ಲಿ ಈಗ ರೂಪಿಸಿರುವ ಬಗರ್ ಹುಕುಂ ಭೂ ಮಂಜೂರಾತಿ ನಿಯಮಗಳು ಜಟಿಲವಾಗಿವೆ. ಅಧಿಕಾರಿಗಳೇ ಎಲ್ಲ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ. ಕಂದಾಯ– ಅರಣ್ಯ ಜಮೀನು ಜಂಟಿಯಾಗಿರುವ ಸರ್ವೆ ನಂಬರ್‌ಗಳಲ್ಲಿ ಜಂಟಿ ಸರ್ವೆ ಪೂರ್ಣಗೊಳ್ಳದಿದ್ದರೂ ಅರಣ್ಯದ ನೆಪದಲ್ಲಿ ಅರ್ಜಿ ತಿರಸ್ಕರಿಸಲಾಗುತ್ತಿದೆ’ ಎಂದು ದೂರಿದರು.

‘ಕಂದಾಯ– ಅರಣ್ಯ ಜಮೀನುಗಳು ಒಂದೇ ಸರ್ವೆ ನಂಬರ್‌ಗಳಲ್ಲಿ ಇದ್ದು, ಜಂಟಿ ಸರ್ವೆ ನಡೆಸಿ ಗಡಿ ಗುರುತಿಸದ ಪ್ರಕರಣಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಜಂಟಿ ಸರ್ವೆ ನಡೆಸಲು ಕ್ರಮ ಕೈಗೊಳ್ಳುವೆ’ ಎಂದು ಭರವಸೆ ನೀಡಿದರು.

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ (ಬಗರ್ ಹುಕುಂ) ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಸಾಕಷ್ಟು ಅರ್ಜಿಗಳನ್ನು ಸರಕಾರ ತಿರಸ್ಕರಿಸಿದ್ದು,  ಸರಕಾರದ ಈ ನಡೆ ಅತ್ಯಂತ ಖಂಡನೀಯ.  ಫಾರಂ ನಂಬರ್ 50, 53, 57ರಲ್ಲಿ ಭೂ ಹಕ್ಕು ಪತ್ರಕ್ಕಾಗಿ ಸಲ್ಲಿಕೆಯಾದ ರೈತರ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವುದು ಮಾತ್ರ ಸರಕಾರದ ಸಾಧನೆಯಲ್ಲ. ಕಾನೂನು ನಿಯಮಗಳನ್ನು ಅದಷ್ಟು ಸಡಿಕೆ ಮಾಡಿ ರೈತರಿಗೆ ಭೂ ಮಂಜೂರಾತಿ ಮಾಡುವ ಇಚ್ಛಾಶಕ್ತಿ ಸರಕಾರಕ್ಕೆ ಇರಬೇಕಾಗಿದೆ. ಇದು ಅತ್ಯಂತ ಮುಖ್ಯವಾಗಿದೆ. ದೇಶದಲ್ಲಿ ಉದ್ಯಮಿಗಳಿಗೆ ಕೋಟ್ಯಂತರ ರೂ.ಗಳ ಮಾಫಿ ಮಾಡುವ, ಇತರ ಕಾನೂನು ಸಡಿಲಿಕೆ ಮಾಡಿ ಅವರ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಭೂಮಿಯನ್ನು ಸರಕಾರ ಒದಗಿಸುತ್ತಿರುವಾಗ ಬಡ ರೈತರಿಗಾಗಿ ಕೆಲ ಕಾನೂನು ಮಾರ್ಪಾಟು ಯಾಕೆ ಸಾಧ್ಯವಾಗುತ್ತಿಲ್ಲ. ರೈತರಿಗೆ ನ್ಯಾಯ ಒದಗಿಸುವಲ್ಲಿ ಸರಕಾರ ವಿಫಲವಾದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದ್ದಾರೆ.

ಇದನ್ನೂ ಓದಿ….ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...