Homeಕರ್ನಾಟಕಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

- Advertisement -
- Advertisement -

ಸರಕಾರದ ನಡೆಗೆ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಖಂಡನೆ

ಸುವರ್ಣ ವಿಧಾನಸೌಧ (ಬೆಳಗಾವಿ): ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ 2.23 ಲಕ್ಷ  ಬಗರ್ ಹುಕುಂ ಅರ್ಜಿಗಳನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಮೂನೆ–50, ನಮೂನೆ–53 ಮತ್ತು ನಮೂನೆ–57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 20 ಮಾನದಂಡಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತಿದೆ. ಅನರ್ಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸಲ್ಲಿಕೆಯಾಗಿದ್ದ 42,350 ಅರ್ಜಿಗಳ ಪೈಕಿ, 33,499 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.

ಬಗರ್ ಹುಕುಂ ಯೋಜನೆಯ ಅಡಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದವರ ಪೈಕಿ 5 ರಿಂದ 6 ಲಕ್ಷ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗಿದೆ. ಕಾನೂನು ರೀತ್ಯಾ ಅರ್ಜಿ ಸಲ್ಲಿಸಬೇಕಾದ ದಿನಕ್ಕೆ 18 ವರ್ಷ ತುಂಬದ 26,051 ಜನ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ಈಗಾಗಲೇ 4.38 ಎಕರೆ ಜಮೀನು ಹೊಂದಿರುವ 26,922 ಅರ್ಜಿಗಳು, ಕೆರೆ ರಸ್ತೆ ಸೇರಿ ಬಿ-ಖರಾಬು ಪ್ರದೇಶಗಳ ಮಂಜೂರಾತಿಗೆ ಕೋರಿ 40,799 ಅರ್ಜಿಗಳು, ಅರಣ್ಯ ಪ್ರದೇಶಗಳ ಮಂಜೂರಾತಿಗೆ 1,68,119 ಅರ್ಜಿಗಳು, ನಗರ ಪರಿಮಿತಿಯೊಳಗೆ ಮಂಜೂರಾತಿ ಕೋರಿ 68,561 ಅರ್ಜಿಗಳು, ತಾಲೂಕಿನಲ್ಲೇ ವಾಸ ಇಲ್ಲದ 8,665 ಅರ್ಜಿಗಳು ಹಾಗೂ ಕೃಷಿಕರಲ್ಲದ 1,00,400 ಜನ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

18 ವರ್ಷ ಕೆಳಗಿನನವರು ಸಲ್ಲಿಸಿರುವ 7,000ಕ್ಕೂ ಹೆಚ್ಚುಅರ್ಜಿಗಳನ್ನು ತಿರಸ್ಕರಿಸಲಾಗಿದೆ.  ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಸಲ್ಲಿಸಿದ್ದ 27,452 ಅರ್ಜಿಗಳು, ನಗರಗಳ ಬಫರ್ ವಲಯದ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವುದಾಗಿ ಸಲ್ಲಿಸಿದ್ದ 33,000 ಅರ್ಜಿಗಳು, ಅರಣ್ಯಕ್ಕೆ ಸಂಬಂಧಿಸಿದ 12,000 ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದು ಹೇಳಿದರು.

ಅನರ್ಹ ಅರ್ಜಿಗಳನ್ನು ಅಧಿಕಾರಿಗಳ ಮಟ್ಟದಲ್ಲೇ ಪರಿಶೀಲನೆ ವೇಳೆ ವಿಲೇವಾರಿ ಮಾಡಬೇಕು. ಇಂತಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಪರಿಶೀಲನೆಯೇ ಅಂತಿಮವಲ್ಲ. ಒಂದು ವೇಳೆ ಅಧಿಕಾರಿಗಳ ತಪ್ಪಿನಿಂದ ಅರ್ಹ ಅರ್ಜಿಯನ್ನು ವಿಸರ್ಜಿಸಲಾಗಿದ್ದರೆ ಅಂತಹ ಅರ್ಜಿಗಳನ್ನು ಮತ್ತೆ ಮರುಪರಿಶೀಲನೆ ಒಳಪಡಿಸಲಾಗುವುದು ಎಂದೂ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕೃಷಿಕರೇ ಅಲ್ಲದವರು, ಅರ್ಜಿಯಲ್ಲಿ ಉಲ್ಲೇಖಿಸಿದ ಜಮೀನುಗಳಲ್ಲಿ ಸಾಗುವಳಿಯನ್ನೇ ಮಾಡದವರು, ಕುಟುಂಬದಲ್ಲಿ 5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು ಸಲ್ಲಿಸಿರುವ ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದರು.

ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು, ‘ಬಗರ್ ಹುಕುಂ ಸಾಗುವಳಿ ಸಮಿತಿಗಳ ನಿರ್ಣಯದಂತೆ ಭೂ ಮಂಜೂರಾತಿಯಾಗಿರುವ 10,651 ಪ್ರಕರಣಗಳಲ್ಲಿ ಈವರೆಗೂ ರೈತರ ಹೆಸರಿಗೆ ಖಾತೆ ಮಾಡದಿರುವುದು ಕಂಡುಬಂದಿದೆ’ ಎಂದು ವಿಧಾನಸಭೆಗೆ ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 2,749, ಹಾಸನ ಜಿಲ್ಲೆಯಲ್ಲಿ 2,679, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1,527 ಮತ್ತು ರಾಮನಗರ ಜಿಲ್ಲೆಯಲ್ಲಿ 1,144 ಪ್ರಕರಣಗಳಲ್ಲಿ ಇನ್ನೂ ಖಾತೆಯಾಗಿಲ್ಲ ಎಂದು ಮಾಹಿತಿ ನೀಡಿದರು.

ಬಿಜೆಪಿಯ ಆರಗ ಜ್ಞಾನೇಂದ್ರ ಮಾತನಾಡಿ, ‘ರಾಜ್ಯದಲ್ಲಿ ಈಗ ರೂಪಿಸಿರುವ ಬಗರ್ ಹುಕುಂ ಭೂ ಮಂಜೂರಾತಿ ನಿಯಮಗಳು ಜಟಿಲವಾಗಿವೆ. ಅಧಿಕಾರಿಗಳೇ ಎಲ್ಲ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ. ಕಂದಾಯ– ಅರಣ್ಯ ಜಮೀನು ಜಂಟಿಯಾಗಿರುವ ಸರ್ವೆ ನಂಬರ್‌ಗಳಲ್ಲಿ ಜಂಟಿ ಸರ್ವೆ ಪೂರ್ಣಗೊಳ್ಳದಿದ್ದರೂ ಅರಣ್ಯದ ನೆಪದಲ್ಲಿ ಅರ್ಜಿ ತಿರಸ್ಕರಿಸಲಾಗುತ್ತಿದೆ’ ಎಂದು ದೂರಿದರು.

‘ಕಂದಾಯ– ಅರಣ್ಯ ಜಮೀನುಗಳು ಒಂದೇ ಸರ್ವೆ ನಂಬರ್‌ಗಳಲ್ಲಿ ಇದ್ದು, ಜಂಟಿ ಸರ್ವೆ ನಡೆಸಿ ಗಡಿ ಗುರುತಿಸದ ಪ್ರಕರಣಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಜಂಟಿ ಸರ್ವೆ ನಡೆಸಲು ಕ್ರಮ ಕೈಗೊಳ್ಳುವೆ’ ಎಂದು ಭರವಸೆ ನೀಡಿದರು.

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ (ಬಗರ್ ಹುಕುಂ) ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಸಾಕಷ್ಟು ಅರ್ಜಿಗಳನ್ನು ಸರಕಾರ ತಿರಸ್ಕರಿಸಿದ್ದು,  ಸರಕಾರದ ಈ ನಡೆ ಅತ್ಯಂತ ಖಂಡನೀಯ.  ಫಾರಂ ನಂಬರ್ 50, 53, 57ರಲ್ಲಿ ಭೂ ಹಕ್ಕು ಪತ್ರಕ್ಕಾಗಿ ಸಲ್ಲಿಕೆಯಾದ ರೈತರ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವುದು ಮಾತ್ರ ಸರಕಾರದ ಸಾಧನೆಯಲ್ಲ. ಕಾನೂನು ನಿಯಮಗಳನ್ನು ಅದಷ್ಟು ಸಡಿಕೆ ಮಾಡಿ ರೈತರಿಗೆ ಭೂ ಮಂಜೂರಾತಿ ಮಾಡುವ ಇಚ್ಛಾಶಕ್ತಿ ಸರಕಾರಕ್ಕೆ ಇರಬೇಕಾಗಿದೆ. ಇದು ಅತ್ಯಂತ ಮುಖ್ಯವಾಗಿದೆ. ದೇಶದಲ್ಲಿ ಉದ್ಯಮಿಗಳಿಗೆ ಕೋಟ್ಯಂತರ ರೂ.ಗಳ ಮಾಫಿ ಮಾಡುವ, ಇತರ ಕಾನೂನು ಸಡಿಲಿಕೆ ಮಾಡಿ ಅವರ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಭೂಮಿಯನ್ನು ಸರಕಾರ ಒದಗಿಸುತ್ತಿರುವಾಗ ಬಡ ರೈತರಿಗಾಗಿ ಕೆಲ ಕಾನೂನು ಮಾರ್ಪಾಟು ಯಾಕೆ ಸಾಧ್ಯವಾಗುತ್ತಿಲ್ಲ. ರೈತರಿಗೆ ನ್ಯಾಯ ಒದಗಿಸುವಲ್ಲಿ ಸರಕಾರ ವಿಫಲವಾದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದ್ದಾರೆ.

ಇದನ್ನೂ ಓದಿ….ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...