Homeಕರ್ನಾಟಕಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

- Advertisement -
- Advertisement -

ಸರಕಾರದ ನಡೆಗೆ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಖಂಡನೆ

ಸುವರ್ಣ ವಿಧಾನಸೌಧ (ಬೆಳಗಾವಿ): ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ 2.23 ಲಕ್ಷ  ಬಗರ್ ಹುಕುಂ ಅರ್ಜಿಗಳನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಮೂನೆ–50, ನಮೂನೆ–53 ಮತ್ತು ನಮೂನೆ–57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 20 ಮಾನದಂಡಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತಿದೆ. ಅನರ್ಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸಲ್ಲಿಕೆಯಾಗಿದ್ದ 42,350 ಅರ್ಜಿಗಳ ಪೈಕಿ, 33,499 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.

ಬಗರ್ ಹುಕುಂ ಯೋಜನೆಯ ಅಡಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದವರ ಪೈಕಿ 5 ರಿಂದ 6 ಲಕ್ಷ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗಿದೆ. ಕಾನೂನು ರೀತ್ಯಾ ಅರ್ಜಿ ಸಲ್ಲಿಸಬೇಕಾದ ದಿನಕ್ಕೆ 18 ವರ್ಷ ತುಂಬದ 26,051 ಜನ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ಈಗಾಗಲೇ 4.38 ಎಕರೆ ಜಮೀನು ಹೊಂದಿರುವ 26,922 ಅರ್ಜಿಗಳು, ಕೆರೆ ರಸ್ತೆ ಸೇರಿ ಬಿ-ಖರಾಬು ಪ್ರದೇಶಗಳ ಮಂಜೂರಾತಿಗೆ ಕೋರಿ 40,799 ಅರ್ಜಿಗಳು, ಅರಣ್ಯ ಪ್ರದೇಶಗಳ ಮಂಜೂರಾತಿಗೆ 1,68,119 ಅರ್ಜಿಗಳು, ನಗರ ಪರಿಮಿತಿಯೊಳಗೆ ಮಂಜೂರಾತಿ ಕೋರಿ 68,561 ಅರ್ಜಿಗಳು, ತಾಲೂಕಿನಲ್ಲೇ ವಾಸ ಇಲ್ಲದ 8,665 ಅರ್ಜಿಗಳು ಹಾಗೂ ಕೃಷಿಕರಲ್ಲದ 1,00,400 ಜನ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

18 ವರ್ಷ ಕೆಳಗಿನನವರು ಸಲ್ಲಿಸಿರುವ 7,000ಕ್ಕೂ ಹೆಚ್ಚುಅರ್ಜಿಗಳನ್ನು ತಿರಸ್ಕರಿಸಲಾಗಿದೆ.  ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಸಲ್ಲಿಸಿದ್ದ 27,452 ಅರ್ಜಿಗಳು, ನಗರಗಳ ಬಫರ್ ವಲಯದ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವುದಾಗಿ ಸಲ್ಲಿಸಿದ್ದ 33,000 ಅರ್ಜಿಗಳು, ಅರಣ್ಯಕ್ಕೆ ಸಂಬಂಧಿಸಿದ 12,000 ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದು ಹೇಳಿದರು.

ಅನರ್ಹ ಅರ್ಜಿಗಳನ್ನು ಅಧಿಕಾರಿಗಳ ಮಟ್ಟದಲ್ಲೇ ಪರಿಶೀಲನೆ ವೇಳೆ ವಿಲೇವಾರಿ ಮಾಡಬೇಕು. ಇಂತಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಪರಿಶೀಲನೆಯೇ ಅಂತಿಮವಲ್ಲ. ಒಂದು ವೇಳೆ ಅಧಿಕಾರಿಗಳ ತಪ್ಪಿನಿಂದ ಅರ್ಹ ಅರ್ಜಿಯನ್ನು ವಿಸರ್ಜಿಸಲಾಗಿದ್ದರೆ ಅಂತಹ ಅರ್ಜಿಗಳನ್ನು ಮತ್ತೆ ಮರುಪರಿಶೀಲನೆ ಒಳಪಡಿಸಲಾಗುವುದು ಎಂದೂ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕೃಷಿಕರೇ ಅಲ್ಲದವರು, ಅರ್ಜಿಯಲ್ಲಿ ಉಲ್ಲೇಖಿಸಿದ ಜಮೀನುಗಳಲ್ಲಿ ಸಾಗುವಳಿಯನ್ನೇ ಮಾಡದವರು, ಕುಟುಂಬದಲ್ಲಿ 5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು ಸಲ್ಲಿಸಿರುವ ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದರು.

ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು, ‘ಬಗರ್ ಹುಕುಂ ಸಾಗುವಳಿ ಸಮಿತಿಗಳ ನಿರ್ಣಯದಂತೆ ಭೂ ಮಂಜೂರಾತಿಯಾಗಿರುವ 10,651 ಪ್ರಕರಣಗಳಲ್ಲಿ ಈವರೆಗೂ ರೈತರ ಹೆಸರಿಗೆ ಖಾತೆ ಮಾಡದಿರುವುದು ಕಂಡುಬಂದಿದೆ’ ಎಂದು ವಿಧಾನಸಭೆಗೆ ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 2,749, ಹಾಸನ ಜಿಲ್ಲೆಯಲ್ಲಿ 2,679, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1,527 ಮತ್ತು ರಾಮನಗರ ಜಿಲ್ಲೆಯಲ್ಲಿ 1,144 ಪ್ರಕರಣಗಳಲ್ಲಿ ಇನ್ನೂ ಖಾತೆಯಾಗಿಲ್ಲ ಎಂದು ಮಾಹಿತಿ ನೀಡಿದರು.

ಬಿಜೆಪಿಯ ಆರಗ ಜ್ಞಾನೇಂದ್ರ ಮಾತನಾಡಿ, ‘ರಾಜ್ಯದಲ್ಲಿ ಈಗ ರೂಪಿಸಿರುವ ಬಗರ್ ಹುಕುಂ ಭೂ ಮಂಜೂರಾತಿ ನಿಯಮಗಳು ಜಟಿಲವಾಗಿವೆ. ಅಧಿಕಾರಿಗಳೇ ಎಲ್ಲ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ. ಕಂದಾಯ– ಅರಣ್ಯ ಜಮೀನು ಜಂಟಿಯಾಗಿರುವ ಸರ್ವೆ ನಂಬರ್‌ಗಳಲ್ಲಿ ಜಂಟಿ ಸರ್ವೆ ಪೂರ್ಣಗೊಳ್ಳದಿದ್ದರೂ ಅರಣ್ಯದ ನೆಪದಲ್ಲಿ ಅರ್ಜಿ ತಿರಸ್ಕರಿಸಲಾಗುತ್ತಿದೆ’ ಎಂದು ದೂರಿದರು.

‘ಕಂದಾಯ– ಅರಣ್ಯ ಜಮೀನುಗಳು ಒಂದೇ ಸರ್ವೆ ನಂಬರ್‌ಗಳಲ್ಲಿ ಇದ್ದು, ಜಂಟಿ ಸರ್ವೆ ನಡೆಸಿ ಗಡಿ ಗುರುತಿಸದ ಪ್ರಕರಣಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಜಂಟಿ ಸರ್ವೆ ನಡೆಸಲು ಕ್ರಮ ಕೈಗೊಳ್ಳುವೆ’ ಎಂದು ಭರವಸೆ ನೀಡಿದರು.

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ (ಬಗರ್ ಹುಕುಂ) ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಸಾಕಷ್ಟು ಅರ್ಜಿಗಳನ್ನು ಸರಕಾರ ತಿರಸ್ಕರಿಸಿದ್ದು,  ಸರಕಾರದ ಈ ನಡೆ ಅತ್ಯಂತ ಖಂಡನೀಯ.  ಫಾರಂ ನಂಬರ್ 50, 53, 57ರಲ್ಲಿ ಭೂ ಹಕ್ಕು ಪತ್ರಕ್ಕಾಗಿ ಸಲ್ಲಿಕೆಯಾದ ರೈತರ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವುದು ಮಾತ್ರ ಸರಕಾರದ ಸಾಧನೆಯಲ್ಲ. ಕಾನೂನು ನಿಯಮಗಳನ್ನು ಅದಷ್ಟು ಸಡಿಕೆ ಮಾಡಿ ರೈತರಿಗೆ ಭೂ ಮಂಜೂರಾತಿ ಮಾಡುವ ಇಚ್ಛಾಶಕ್ತಿ ಸರಕಾರಕ್ಕೆ ಇರಬೇಕಾಗಿದೆ. ಇದು ಅತ್ಯಂತ ಮುಖ್ಯವಾಗಿದೆ. ದೇಶದಲ್ಲಿ ಉದ್ಯಮಿಗಳಿಗೆ ಕೋಟ್ಯಂತರ ರೂ.ಗಳ ಮಾಫಿ ಮಾಡುವ, ಇತರ ಕಾನೂನು ಸಡಿಲಿಕೆ ಮಾಡಿ ಅವರ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಭೂಮಿಯನ್ನು ಸರಕಾರ ಒದಗಿಸುತ್ತಿರುವಾಗ ಬಡ ರೈತರಿಗಾಗಿ ಕೆಲ ಕಾನೂನು ಮಾರ್ಪಾಟು ಯಾಕೆ ಸಾಧ್ಯವಾಗುತ್ತಿಲ್ಲ. ರೈತರಿಗೆ ನ್ಯಾಯ ಒದಗಿಸುವಲ್ಲಿ ಸರಕಾರ ವಿಫಲವಾದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದ್ದಾರೆ.

ಇದನ್ನೂ ಓದಿ….ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...