Homeಕರ್ನಾಟಕಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

- Advertisement -
- Advertisement -

ಸರಕಾರದ ನಡೆಗೆ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಖಂಡನೆ

ಸುವರ್ಣ ವಿಧಾನಸೌಧ (ಬೆಳಗಾವಿ): ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ 2.23 ಲಕ್ಷ  ಬಗರ್ ಹುಕುಂ ಅರ್ಜಿಗಳನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಮೂನೆ–50, ನಮೂನೆ–53 ಮತ್ತು ನಮೂನೆ–57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 20 ಮಾನದಂಡಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತಿದೆ. ಅನರ್ಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸಲ್ಲಿಕೆಯಾಗಿದ್ದ 42,350 ಅರ್ಜಿಗಳ ಪೈಕಿ, 33,499 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.

ಬಗರ್ ಹುಕುಂ ಯೋಜನೆಯ ಅಡಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದವರ ಪೈಕಿ 5 ರಿಂದ 6 ಲಕ್ಷ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗಿದೆ. ಕಾನೂನು ರೀತ್ಯಾ ಅರ್ಜಿ ಸಲ್ಲಿಸಬೇಕಾದ ದಿನಕ್ಕೆ 18 ವರ್ಷ ತುಂಬದ 26,051 ಜನ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ಈಗಾಗಲೇ 4.38 ಎಕರೆ ಜಮೀನು ಹೊಂದಿರುವ 26,922 ಅರ್ಜಿಗಳು, ಕೆರೆ ರಸ್ತೆ ಸೇರಿ ಬಿ-ಖರಾಬು ಪ್ರದೇಶಗಳ ಮಂಜೂರಾತಿಗೆ ಕೋರಿ 40,799 ಅರ್ಜಿಗಳು, ಅರಣ್ಯ ಪ್ರದೇಶಗಳ ಮಂಜೂರಾತಿಗೆ 1,68,119 ಅರ್ಜಿಗಳು, ನಗರ ಪರಿಮಿತಿಯೊಳಗೆ ಮಂಜೂರಾತಿ ಕೋರಿ 68,561 ಅರ್ಜಿಗಳು, ತಾಲೂಕಿನಲ್ಲೇ ವಾಸ ಇಲ್ಲದ 8,665 ಅರ್ಜಿಗಳು ಹಾಗೂ ಕೃಷಿಕರಲ್ಲದ 1,00,400 ಜನ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

18 ವರ್ಷ ಕೆಳಗಿನನವರು ಸಲ್ಲಿಸಿರುವ 7,000ಕ್ಕೂ ಹೆಚ್ಚುಅರ್ಜಿಗಳನ್ನು ತಿರಸ್ಕರಿಸಲಾಗಿದೆ.  ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಸಲ್ಲಿಸಿದ್ದ 27,452 ಅರ್ಜಿಗಳು, ನಗರಗಳ ಬಫರ್ ವಲಯದ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವುದಾಗಿ ಸಲ್ಲಿಸಿದ್ದ 33,000 ಅರ್ಜಿಗಳು, ಅರಣ್ಯಕ್ಕೆ ಸಂಬಂಧಿಸಿದ 12,000 ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದು ಹೇಳಿದರು.

ಅನರ್ಹ ಅರ್ಜಿಗಳನ್ನು ಅಧಿಕಾರಿಗಳ ಮಟ್ಟದಲ್ಲೇ ಪರಿಶೀಲನೆ ವೇಳೆ ವಿಲೇವಾರಿ ಮಾಡಬೇಕು. ಇಂತಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಪರಿಶೀಲನೆಯೇ ಅಂತಿಮವಲ್ಲ. ಒಂದು ವೇಳೆ ಅಧಿಕಾರಿಗಳ ತಪ್ಪಿನಿಂದ ಅರ್ಹ ಅರ್ಜಿಯನ್ನು ವಿಸರ್ಜಿಸಲಾಗಿದ್ದರೆ ಅಂತಹ ಅರ್ಜಿಗಳನ್ನು ಮತ್ತೆ ಮರುಪರಿಶೀಲನೆ ಒಳಪಡಿಸಲಾಗುವುದು ಎಂದೂ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕೃಷಿಕರೇ ಅಲ್ಲದವರು, ಅರ್ಜಿಯಲ್ಲಿ ಉಲ್ಲೇಖಿಸಿದ ಜಮೀನುಗಳಲ್ಲಿ ಸಾಗುವಳಿಯನ್ನೇ ಮಾಡದವರು, ಕುಟುಂಬದಲ್ಲಿ 5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು ಸಲ್ಲಿಸಿರುವ ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದರು.

ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು, ‘ಬಗರ್ ಹುಕುಂ ಸಾಗುವಳಿ ಸಮಿತಿಗಳ ನಿರ್ಣಯದಂತೆ ಭೂ ಮಂಜೂರಾತಿಯಾಗಿರುವ 10,651 ಪ್ರಕರಣಗಳಲ್ಲಿ ಈವರೆಗೂ ರೈತರ ಹೆಸರಿಗೆ ಖಾತೆ ಮಾಡದಿರುವುದು ಕಂಡುಬಂದಿದೆ’ ಎಂದು ವಿಧಾನಸಭೆಗೆ ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 2,749, ಹಾಸನ ಜಿಲ್ಲೆಯಲ್ಲಿ 2,679, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1,527 ಮತ್ತು ರಾಮನಗರ ಜಿಲ್ಲೆಯಲ್ಲಿ 1,144 ಪ್ರಕರಣಗಳಲ್ಲಿ ಇನ್ನೂ ಖಾತೆಯಾಗಿಲ್ಲ ಎಂದು ಮಾಹಿತಿ ನೀಡಿದರು.

ಬಿಜೆಪಿಯ ಆರಗ ಜ್ಞಾನೇಂದ್ರ ಮಾತನಾಡಿ, ‘ರಾಜ್ಯದಲ್ಲಿ ಈಗ ರೂಪಿಸಿರುವ ಬಗರ್ ಹುಕುಂ ಭೂ ಮಂಜೂರಾತಿ ನಿಯಮಗಳು ಜಟಿಲವಾಗಿವೆ. ಅಧಿಕಾರಿಗಳೇ ಎಲ್ಲ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ. ಕಂದಾಯ– ಅರಣ್ಯ ಜಮೀನು ಜಂಟಿಯಾಗಿರುವ ಸರ್ವೆ ನಂಬರ್‌ಗಳಲ್ಲಿ ಜಂಟಿ ಸರ್ವೆ ಪೂರ್ಣಗೊಳ್ಳದಿದ್ದರೂ ಅರಣ್ಯದ ನೆಪದಲ್ಲಿ ಅರ್ಜಿ ತಿರಸ್ಕರಿಸಲಾಗುತ್ತಿದೆ’ ಎಂದು ದೂರಿದರು.

‘ಕಂದಾಯ– ಅರಣ್ಯ ಜಮೀನುಗಳು ಒಂದೇ ಸರ್ವೆ ನಂಬರ್‌ಗಳಲ್ಲಿ ಇದ್ದು, ಜಂಟಿ ಸರ್ವೆ ನಡೆಸಿ ಗಡಿ ಗುರುತಿಸದ ಪ್ರಕರಣಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಜಂಟಿ ಸರ್ವೆ ನಡೆಸಲು ಕ್ರಮ ಕೈಗೊಳ್ಳುವೆ’ ಎಂದು ಭರವಸೆ ನೀಡಿದರು.

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ (ಬಗರ್ ಹುಕುಂ) ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಸಾಕಷ್ಟು ಅರ್ಜಿಗಳನ್ನು ಸರಕಾರ ತಿರಸ್ಕರಿಸಿದ್ದು,  ಸರಕಾರದ ಈ ನಡೆ ಅತ್ಯಂತ ಖಂಡನೀಯ.  ಫಾರಂ ನಂಬರ್ 50, 53, 57ರಲ್ಲಿ ಭೂ ಹಕ್ಕು ಪತ್ರಕ್ಕಾಗಿ ಸಲ್ಲಿಕೆಯಾದ ರೈತರ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವುದು ಮಾತ್ರ ಸರಕಾರದ ಸಾಧನೆಯಲ್ಲ. ಕಾನೂನು ನಿಯಮಗಳನ್ನು ಅದಷ್ಟು ಸಡಿಕೆ ಮಾಡಿ ರೈತರಿಗೆ ಭೂ ಮಂಜೂರಾತಿ ಮಾಡುವ ಇಚ್ಛಾಶಕ್ತಿ ಸರಕಾರಕ್ಕೆ ಇರಬೇಕಾಗಿದೆ. ಇದು ಅತ್ಯಂತ ಮುಖ್ಯವಾಗಿದೆ. ದೇಶದಲ್ಲಿ ಉದ್ಯಮಿಗಳಿಗೆ ಕೋಟ್ಯಂತರ ರೂ.ಗಳ ಮಾಫಿ ಮಾಡುವ, ಇತರ ಕಾನೂನು ಸಡಿಲಿಕೆ ಮಾಡಿ ಅವರ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಭೂಮಿಯನ್ನು ಸರಕಾರ ಒದಗಿಸುತ್ತಿರುವಾಗ ಬಡ ರೈತರಿಗಾಗಿ ಕೆಲ ಕಾನೂನು ಮಾರ್ಪಾಟು ಯಾಕೆ ಸಾಧ್ಯವಾಗುತ್ತಿಲ್ಲ. ರೈತರಿಗೆ ನ್ಯಾಯ ಒದಗಿಸುವಲ್ಲಿ ಸರಕಾರ ವಿಫಲವಾದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದ್ದಾರೆ.

ಇದನ್ನೂ ಓದಿ….ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...