Homeಕರೋನಾ ತಲ್ಲಣಲಸಿಕೆ, ಮೂಲಸೌಕರ್ಯ ಇಲ್ಲದಿದ್ದರೆ 2021 ವೇಳೆಗೆ ದಿನಕ್ಕೆ 2.87 ಲಕ್ಷ ಕೊರೊನಾ ಪ್ರಕರಣ ಸಾಧ್ಯತೆ: ಅಧ್ಯಯನ

ಲಸಿಕೆ, ಮೂಲಸೌಕರ್ಯ ಇಲ್ಲದಿದ್ದರೆ 2021 ವೇಳೆಗೆ ದಿನಕ್ಕೆ 2.87 ಲಕ್ಷ ಕೊರೊನಾ ಪ್ರಕರಣ ಸಾಧ್ಯತೆ: ಅಧ್ಯಯನ

ಜೂನ್ 18 ರ ವೇಳೆಗೆ ಕೊರೊನಾ ಪ್ರಕರಣ ಹಾಗೂ ಸಾವುಗಳು ಕ್ರಮವಾಗಿ 11.8 ಮತ್ತು 1.48 ಪಟ್ಟು ಹೆಚ್ಚಾಗಿದೆ ಎಂದು ಅಧ್ಯಯನವೂ ಅಂದಾಜಿಸಿದೆ.

- Advertisement -
- Advertisement -

ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಯ ವಿಜ್ಞಾನಿಗಳು ಮತ್ತು ಸಂಶೋಧಕರು ನಡೆಸಿದ ಅಧ್ಯಯನದ ಪ್ರಕಾರ, ಪರಿಣಾಮಕಾರಿ ಲಸಿಕೆ ಮತ್ತು ಸುಧಾರಿತ ಆರೋಗ್ಯ ಮೂಲಸೌಕರ್ಯಗಳು ಇರದೆ ಇದ್ದಲ್ಲಿ, ಭಾರತವು 2021 ರ ಚಳಿಗಾಲದ ಅಂತ್ಯದ ವೇಳೆಗೆ ದಿನಕ್ಕೆ ಸುಮಾರು 2.87 ಲಕ್ಷ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಬಹುದು ಎಂದು ಹೇಳಿದೆ.

ಎಂಐಟಿ ಪ್ರಾಧ್ಯಾಪಕರಾದ ಹಜಿರ್ ರಹಮಾಂದಾದ್, ಜಾನ್ ಸ್ಟರ್ಮನ್ ಮತ್ತು ಪಿಎಚ್‌ಡಿ ಅಭ್ಯರ್ಥಿ ತ್ಸೆ ಯಾಂಗ್ ಲಿಮ್, 2021 ರ ಚಳಿಗಾಲದ ಕೊನೆಯಲ್ಲಿ ದೈನಂದಿನ ಸೋಂಕಿನ ನಿರೀಕ್ಷಿತ ಪ್ರಮಾಣವನ್ನು ಯೋಜಿಸುವ ಅಧ್ಯಯನ ಮೂಲಕ ಮೊದಲ ಹತ್ತು ರಾಷ್ಟ್ರಗಳಲ್ಲಿ ಭಾರತದಲ್ಲಿ ದಿನಕ್ಕೆ 2.87 ಲಕ್ಷ ಸೋಂಕುಗಳು ವರದಿಯಾಗುತ್ತದೆ ಎಂದು ಸಂಶೋಧನೆಯೂ ಹೇಳಿದೆ. ನಂತರದಲ್ಲಿ ಯುನೈಟೆಡ್ ಸ್ಟೇಟ್ಸ್, ದಕ್ಷಿಣ ಆಫ್ರಿಕಾ, ಇರಾನ್, ಇಂಡೋನೇಷ್ಯಾ, ಯುಕೆ, ನೈಜೀರಿಯಾ, ಟರ್ಕಿ, ಫ್ರಾನ್ಸ್ ಮತ್ತು ಜರ್ಮನಿ ಸೇರಿದೆ.

ಅಂದಾಜು 4.75 ಶತಕೋಟಿ ಜನರಿರುವ ಸುಮಾರು 84 ದೇಶಗಳ ಮಾಹಿತಿಯನ್ನು ಅಧ್ಯಯನವು ಬಳಸಿದೆ. ಜಾಗತಿಕ ದತ್ತಾಂಶದ ಸಹಾಯದಿಂದ, ಸಂಶೋಧಕರು ಯೋಜಿತ ಕೊರೊನಾ ವೈರಸ್ ಸೋಂಕುಗಳಿಗೆ ಕ್ರಿಯಾತ್ಮಕ ಸಾಂಕ್ರಾಮಿಕ ರೋಗಶಾಸ್ತ್ರೀಯ ಮಾದರಿಯನ್ನು ಅಭಿವೃದ್ಧಿಪಡಿಸಿದ್ದಾರೆ.

ಸಂಶೋಧಕರು ನೀಡಿದ ಎಚ್ಚರಿಕೆ ಟಿಪ್ಪಣಿಗಳಲ್ಲಿ ರೋಗದ ಹರಡುವಿಕೆಯ ಪ್ರಕ್ಷೇಪ ಮಾದರಿಗಳು, ನಡವಳಿಕೆ ಮತ್ತು ನೀತಿ ಪ್ರತಿಕ್ರಿಯೆಗಳ ಪರೀಕ್ಷೆ ಬಹಳ ಸೂಕ್ಷ್ಮವಾಗಿವೆ ಎಂದಿದ್ದಾರೆ. ತಮ್ಮ ಸಂಶೋಧನೆಯನ್ನು ಸಂಭಾವ್ಯ ಅಪಾಯದ ಸೂಚಕಗಳಾಗಿ ವ್ಯಾಖ್ಯಾನಿಸಬೇಕೇ ಹೊರತು ಇವು ಭವಿಷ್ಯದ ನಿಖರವಾದ ಮುನ್ಸೂಚನೆಯಲ್ಲ ಎಂದು ಹೇಳಿದ್ದಾರೆ.

ಜೂನ್ 18 ರ ವೇಳೆಗೆ ಕೊರೊನಾ ಪ್ರಕರಣ ಹಾಗೂ ಸಾವುಗಳು ಕ್ರಮವಾಗಿ 11.8 ಮತ್ತು 1.48 ಪಟ್ಟು ಹೆಚ್ಚಾಗಿದೆ ಎಂದು ಅವರು ಅಂದಾಜಿಸಿದ್ದಾರೆ.

“ಅಧಿಕೃತ ಕೊರೊನಾ ವೈರಸ್ ಪ್ರಕರಣಗಳು ಅಧಿಕೃತ ವರದಿಗಳು ಸೂಚಿಸುವುದಕ್ಕಿಂತ ಹೆಚ್ಚಾಗಿವೆ, ಹೆಚ್ಚಿನ ಜನರು ಸೋಂಕಿಗೆ ಒಳಗಾಗುತ್ತಾರೆ. ಸಾಮೂಹಿಕ ರೋಗನಿರೋಧಕ ಶಕ್ತಿಗಾಗಿ ಕಾಯುವುದು ಪ್ರಸ್ತುತ ಸಾಂಕ್ರಾಮಿಕ ರೋಗದಿಂದ ಹೊರಬರುವ ಕಾರ್ಯಸಾಧ್ಯವಾದ ಮಾರ್ಗವಲ್ಲ” ಎಂದು ರಹಮಂದಾದ್ ಎಚ್ಚರಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭಾರತವು 22,752 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟು ಕೊರೊನಾ ಪ್ರಕರಣಗಳು 7.42 ಲಕ್ಷಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.


ಓದಿ: ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...