Homeಕರೋನಾ ತಲ್ಲಣಲಸಿಕೆ, ಮೂಲಸೌಕರ್ಯ ಇಲ್ಲದಿದ್ದರೆ 2021 ವೇಳೆಗೆ ದಿನಕ್ಕೆ 2.87 ಲಕ್ಷ ಕೊರೊನಾ ಪ್ರಕರಣ ಸಾಧ್ಯತೆ: ಅಧ್ಯಯನ

ಲಸಿಕೆ, ಮೂಲಸೌಕರ್ಯ ಇಲ್ಲದಿದ್ದರೆ 2021 ವೇಳೆಗೆ ದಿನಕ್ಕೆ 2.87 ಲಕ್ಷ ಕೊರೊನಾ ಪ್ರಕರಣ ಸಾಧ್ಯತೆ: ಅಧ್ಯಯನ

ಜೂನ್ 18 ರ ವೇಳೆಗೆ ಕೊರೊನಾ ಪ್ರಕರಣ ಹಾಗೂ ಸಾವುಗಳು ಕ್ರಮವಾಗಿ 11.8 ಮತ್ತು 1.48 ಪಟ್ಟು ಹೆಚ್ಚಾಗಿದೆ ಎಂದು ಅಧ್ಯಯನವೂ ಅಂದಾಜಿಸಿದೆ.

- Advertisement -
- Advertisement -

ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಯ ವಿಜ್ಞಾನಿಗಳು ಮತ್ತು ಸಂಶೋಧಕರು ನಡೆಸಿದ ಅಧ್ಯಯನದ ಪ್ರಕಾರ, ಪರಿಣಾಮಕಾರಿ ಲಸಿಕೆ ಮತ್ತು ಸುಧಾರಿತ ಆರೋಗ್ಯ ಮೂಲಸೌಕರ್ಯಗಳು ಇರದೆ ಇದ್ದಲ್ಲಿ, ಭಾರತವು 2021 ರ ಚಳಿಗಾಲದ ಅಂತ್ಯದ ವೇಳೆಗೆ ದಿನಕ್ಕೆ ಸುಮಾರು 2.87 ಲಕ್ಷ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಬಹುದು ಎಂದು ಹೇಳಿದೆ.

ಎಂಐಟಿ ಪ್ರಾಧ್ಯಾಪಕರಾದ ಹಜಿರ್ ರಹಮಾಂದಾದ್, ಜಾನ್ ಸ್ಟರ್ಮನ್ ಮತ್ತು ಪಿಎಚ್‌ಡಿ ಅಭ್ಯರ್ಥಿ ತ್ಸೆ ಯಾಂಗ್ ಲಿಮ್, 2021 ರ ಚಳಿಗಾಲದ ಕೊನೆಯಲ್ಲಿ ದೈನಂದಿನ ಸೋಂಕಿನ ನಿರೀಕ್ಷಿತ ಪ್ರಮಾಣವನ್ನು ಯೋಜಿಸುವ ಅಧ್ಯಯನ ಮೂಲಕ ಮೊದಲ ಹತ್ತು ರಾಷ್ಟ್ರಗಳಲ್ಲಿ ಭಾರತದಲ್ಲಿ ದಿನಕ್ಕೆ 2.87 ಲಕ್ಷ ಸೋಂಕುಗಳು ವರದಿಯಾಗುತ್ತದೆ ಎಂದು ಸಂಶೋಧನೆಯೂ ಹೇಳಿದೆ. ನಂತರದಲ್ಲಿ ಯುನೈಟೆಡ್ ಸ್ಟೇಟ್ಸ್, ದಕ್ಷಿಣ ಆಫ್ರಿಕಾ, ಇರಾನ್, ಇಂಡೋನೇಷ್ಯಾ, ಯುಕೆ, ನೈಜೀರಿಯಾ, ಟರ್ಕಿ, ಫ್ರಾನ್ಸ್ ಮತ್ತು ಜರ್ಮನಿ ಸೇರಿದೆ.

ಅಂದಾಜು 4.75 ಶತಕೋಟಿ ಜನರಿರುವ ಸುಮಾರು 84 ದೇಶಗಳ ಮಾಹಿತಿಯನ್ನು ಅಧ್ಯಯನವು ಬಳಸಿದೆ. ಜಾಗತಿಕ ದತ್ತಾಂಶದ ಸಹಾಯದಿಂದ, ಸಂಶೋಧಕರು ಯೋಜಿತ ಕೊರೊನಾ ವೈರಸ್ ಸೋಂಕುಗಳಿಗೆ ಕ್ರಿಯಾತ್ಮಕ ಸಾಂಕ್ರಾಮಿಕ ರೋಗಶಾಸ್ತ್ರೀಯ ಮಾದರಿಯನ್ನು ಅಭಿವೃದ್ಧಿಪಡಿಸಿದ್ದಾರೆ.

ಸಂಶೋಧಕರು ನೀಡಿದ ಎಚ್ಚರಿಕೆ ಟಿಪ್ಪಣಿಗಳಲ್ಲಿ ರೋಗದ ಹರಡುವಿಕೆಯ ಪ್ರಕ್ಷೇಪ ಮಾದರಿಗಳು, ನಡವಳಿಕೆ ಮತ್ತು ನೀತಿ ಪ್ರತಿಕ್ರಿಯೆಗಳ ಪರೀಕ್ಷೆ ಬಹಳ ಸೂಕ್ಷ್ಮವಾಗಿವೆ ಎಂದಿದ್ದಾರೆ. ತಮ್ಮ ಸಂಶೋಧನೆಯನ್ನು ಸಂಭಾವ್ಯ ಅಪಾಯದ ಸೂಚಕಗಳಾಗಿ ವ್ಯಾಖ್ಯಾನಿಸಬೇಕೇ ಹೊರತು ಇವು ಭವಿಷ್ಯದ ನಿಖರವಾದ ಮುನ್ಸೂಚನೆಯಲ್ಲ ಎಂದು ಹೇಳಿದ್ದಾರೆ.

ಜೂನ್ 18 ರ ವೇಳೆಗೆ ಕೊರೊನಾ ಪ್ರಕರಣ ಹಾಗೂ ಸಾವುಗಳು ಕ್ರಮವಾಗಿ 11.8 ಮತ್ತು 1.48 ಪಟ್ಟು ಹೆಚ್ಚಾಗಿದೆ ಎಂದು ಅವರು ಅಂದಾಜಿಸಿದ್ದಾರೆ.

“ಅಧಿಕೃತ ಕೊರೊನಾ ವೈರಸ್ ಪ್ರಕರಣಗಳು ಅಧಿಕೃತ ವರದಿಗಳು ಸೂಚಿಸುವುದಕ್ಕಿಂತ ಹೆಚ್ಚಾಗಿವೆ, ಹೆಚ್ಚಿನ ಜನರು ಸೋಂಕಿಗೆ ಒಳಗಾಗುತ್ತಾರೆ. ಸಾಮೂಹಿಕ ರೋಗನಿರೋಧಕ ಶಕ್ತಿಗಾಗಿ ಕಾಯುವುದು ಪ್ರಸ್ತುತ ಸಾಂಕ್ರಾಮಿಕ ರೋಗದಿಂದ ಹೊರಬರುವ ಕಾರ್ಯಸಾಧ್ಯವಾದ ಮಾರ್ಗವಲ್ಲ” ಎಂದು ರಹಮಂದಾದ್ ಎಚ್ಚರಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭಾರತವು 22,752 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟು ಕೊರೊನಾ ಪ್ರಕರಣಗಳು 7.42 ಲಕ್ಷಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.


ಓದಿ: ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...