Homeಕರೋನಾ ತಲ್ಲಣಲಸಿಕೆ, ಮೂಲಸೌಕರ್ಯ ಇಲ್ಲದಿದ್ದರೆ 2021 ವೇಳೆಗೆ ದಿನಕ್ಕೆ 2.87 ಲಕ್ಷ ಕೊರೊನಾ ಪ್ರಕರಣ ಸಾಧ್ಯತೆ: ಅಧ್ಯಯನ

ಲಸಿಕೆ, ಮೂಲಸೌಕರ್ಯ ಇಲ್ಲದಿದ್ದರೆ 2021 ವೇಳೆಗೆ ದಿನಕ್ಕೆ 2.87 ಲಕ್ಷ ಕೊರೊನಾ ಪ್ರಕರಣ ಸಾಧ್ಯತೆ: ಅಧ್ಯಯನ

ಜೂನ್ 18 ರ ವೇಳೆಗೆ ಕೊರೊನಾ ಪ್ರಕರಣ ಹಾಗೂ ಸಾವುಗಳು ಕ್ರಮವಾಗಿ 11.8 ಮತ್ತು 1.48 ಪಟ್ಟು ಹೆಚ್ಚಾಗಿದೆ ಎಂದು ಅಧ್ಯಯನವೂ ಅಂದಾಜಿಸಿದೆ.

- Advertisement -
- Advertisement -

ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಯ ವಿಜ್ಞಾನಿಗಳು ಮತ್ತು ಸಂಶೋಧಕರು ನಡೆಸಿದ ಅಧ್ಯಯನದ ಪ್ರಕಾರ, ಪರಿಣಾಮಕಾರಿ ಲಸಿಕೆ ಮತ್ತು ಸುಧಾರಿತ ಆರೋಗ್ಯ ಮೂಲಸೌಕರ್ಯಗಳು ಇರದೆ ಇದ್ದಲ್ಲಿ, ಭಾರತವು 2021 ರ ಚಳಿಗಾಲದ ಅಂತ್ಯದ ವೇಳೆಗೆ ದಿನಕ್ಕೆ ಸುಮಾರು 2.87 ಲಕ್ಷ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಬಹುದು ಎಂದು ಹೇಳಿದೆ.

ಎಂಐಟಿ ಪ್ರಾಧ್ಯಾಪಕರಾದ ಹಜಿರ್ ರಹಮಾಂದಾದ್, ಜಾನ್ ಸ್ಟರ್ಮನ್ ಮತ್ತು ಪಿಎಚ್‌ಡಿ ಅಭ್ಯರ್ಥಿ ತ್ಸೆ ಯಾಂಗ್ ಲಿಮ್, 2021 ರ ಚಳಿಗಾಲದ ಕೊನೆಯಲ್ಲಿ ದೈನಂದಿನ ಸೋಂಕಿನ ನಿರೀಕ್ಷಿತ ಪ್ರಮಾಣವನ್ನು ಯೋಜಿಸುವ ಅಧ್ಯಯನ ಮೂಲಕ ಮೊದಲ ಹತ್ತು ರಾಷ್ಟ್ರಗಳಲ್ಲಿ ಭಾರತದಲ್ಲಿ ದಿನಕ್ಕೆ 2.87 ಲಕ್ಷ ಸೋಂಕುಗಳು ವರದಿಯಾಗುತ್ತದೆ ಎಂದು ಸಂಶೋಧನೆಯೂ ಹೇಳಿದೆ. ನಂತರದಲ್ಲಿ ಯುನೈಟೆಡ್ ಸ್ಟೇಟ್ಸ್, ದಕ್ಷಿಣ ಆಫ್ರಿಕಾ, ಇರಾನ್, ಇಂಡೋನೇಷ್ಯಾ, ಯುಕೆ, ನೈಜೀರಿಯಾ, ಟರ್ಕಿ, ಫ್ರಾನ್ಸ್ ಮತ್ತು ಜರ್ಮನಿ ಸೇರಿದೆ.

ಅಂದಾಜು 4.75 ಶತಕೋಟಿ ಜನರಿರುವ ಸುಮಾರು 84 ದೇಶಗಳ ಮಾಹಿತಿಯನ್ನು ಅಧ್ಯಯನವು ಬಳಸಿದೆ. ಜಾಗತಿಕ ದತ್ತಾಂಶದ ಸಹಾಯದಿಂದ, ಸಂಶೋಧಕರು ಯೋಜಿತ ಕೊರೊನಾ ವೈರಸ್ ಸೋಂಕುಗಳಿಗೆ ಕ್ರಿಯಾತ್ಮಕ ಸಾಂಕ್ರಾಮಿಕ ರೋಗಶಾಸ್ತ್ರೀಯ ಮಾದರಿಯನ್ನು ಅಭಿವೃದ್ಧಿಪಡಿಸಿದ್ದಾರೆ.

ಸಂಶೋಧಕರು ನೀಡಿದ ಎಚ್ಚರಿಕೆ ಟಿಪ್ಪಣಿಗಳಲ್ಲಿ ರೋಗದ ಹರಡುವಿಕೆಯ ಪ್ರಕ್ಷೇಪ ಮಾದರಿಗಳು, ನಡವಳಿಕೆ ಮತ್ತು ನೀತಿ ಪ್ರತಿಕ್ರಿಯೆಗಳ ಪರೀಕ್ಷೆ ಬಹಳ ಸೂಕ್ಷ್ಮವಾಗಿವೆ ಎಂದಿದ್ದಾರೆ. ತಮ್ಮ ಸಂಶೋಧನೆಯನ್ನು ಸಂಭಾವ್ಯ ಅಪಾಯದ ಸೂಚಕಗಳಾಗಿ ವ್ಯಾಖ್ಯಾನಿಸಬೇಕೇ ಹೊರತು ಇವು ಭವಿಷ್ಯದ ನಿಖರವಾದ ಮುನ್ಸೂಚನೆಯಲ್ಲ ಎಂದು ಹೇಳಿದ್ದಾರೆ.

ಜೂನ್ 18 ರ ವೇಳೆಗೆ ಕೊರೊನಾ ಪ್ರಕರಣ ಹಾಗೂ ಸಾವುಗಳು ಕ್ರಮವಾಗಿ 11.8 ಮತ್ತು 1.48 ಪಟ್ಟು ಹೆಚ್ಚಾಗಿದೆ ಎಂದು ಅವರು ಅಂದಾಜಿಸಿದ್ದಾರೆ.

“ಅಧಿಕೃತ ಕೊರೊನಾ ವೈರಸ್ ಪ್ರಕರಣಗಳು ಅಧಿಕೃತ ವರದಿಗಳು ಸೂಚಿಸುವುದಕ್ಕಿಂತ ಹೆಚ್ಚಾಗಿವೆ, ಹೆಚ್ಚಿನ ಜನರು ಸೋಂಕಿಗೆ ಒಳಗಾಗುತ್ತಾರೆ. ಸಾಮೂಹಿಕ ರೋಗನಿರೋಧಕ ಶಕ್ತಿಗಾಗಿ ಕಾಯುವುದು ಪ್ರಸ್ತುತ ಸಾಂಕ್ರಾಮಿಕ ರೋಗದಿಂದ ಹೊರಬರುವ ಕಾರ್ಯಸಾಧ್ಯವಾದ ಮಾರ್ಗವಲ್ಲ” ಎಂದು ರಹಮಂದಾದ್ ಎಚ್ಚರಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭಾರತವು 22,752 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟು ಕೊರೊನಾ ಪ್ರಕರಣಗಳು 7.42 ಲಕ್ಷಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.


ಓದಿ: ಕೊರೊನಾ ರೋಗಿಗಳ ಸಮಸ್ಯೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊ೦ಡ ಕರ್ನಾಟಕ ಹೈಕೋರ್ಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...