Homeಮುಖಪುಟಜೆಎನ್‌ಯುನಲ್ಲಿ ಹಿಂಸಾಚಾರದ ಬೆದರಿಕೆ: ಇಬ್ಬರ ಬಂಧನ

ಜೆಎನ್‌ಯುನಲ್ಲಿ ಹಿಂಸಾಚಾರದ ಬೆದರಿಕೆ: ಇಬ್ಬರ ಬಂಧನ

- Advertisement -
- Advertisement -

ಸ್ವಾತಂತ್ರ್ಯ ದಿನದಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಹಿಂಸಾಚಾರ ನಡೆಸುವ ಬೆದರಿಕೆ ಹಾಕಿದ ಇಬ್ಬರು ಆರೋಪಿಗಳನ್ನು ಜೆಎನ್‌ಯು ವಿದ್ಯಾರ್ಥಿ ಸಂಘದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಮಹಾಕಾಲ್ ಯೂತ್ ಬ್ರಿಗೇಡ್‌ನ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಸದಸ್ಯರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು), 505 ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫೇಸ್‌ಬುಕ್‌ ವಿಡಿಯೋದಲ್ಲಿ ಹಿಂಸೆಗೆ ಕರೆ ನೀಡಿದ ಉತ್ತಮ್ ನಗರ ನಿವಾಸಿ ವಿಕಾಸ್ ಸೆಹ್ರಾವತ್ (30) ಮತ್ತು ವಿಡಿಯೊ ಅಪ್ಲೋಡ್ ಮಾಡಲು ಬಳಸಿದ ಫೋನಿನ ಮಾಲೀಕ ರಾಜ ಕುಮಾರ್ (19) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಜೆಎನ್‌ಯು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದ ಒಕ್ಕೂಟ ಸರ್ಕಾರ

“ಆಗಸ್ಟ್ 9 ಮತ್ತು 14 ರಂದು ಮಹಾಕಾಲ್ ಯೂತ್ ಬ್ರಿಗೇಡ್‌ನ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾದ ಎರಡು ವಿಡಿಯೊಗಳಲ್ಲಿ ಆಗಸ್ಟ್ 15 ರಂದು ಮಧ್ಯಾಹ್ನ 2 ರಿಂದ 6 ಗಂಟೆಯ ನಡುವೆ ಜೆಎನ್‌ಯು ಕ್ಯಾಂಪಸ್‌ನಲ್ಲಿ ಕೇಸರಿ ಧ್ವಜವನ್ನು ಹಾರಿಸಲು  ಮತ್ತು ಮೆರವಣಿಗೆಗೆ ನಡೆಸಲಿ ಕರೆ ನೀಡಲಾಗಿದೆ. ಎರಡೂ ವಿಡಿಯೊಗಳಲ್ಲಿ, ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗಳನ್ನು ಮಾಡಲಾಗಿದೆ. ಜೊತೆಗೆ ಇದನ್ನು ತಡೆಯಲು ಎದುರಾಗುವ ಯಾವುದೇ ವಿದ್ಯಾರ್ಥಿಗಳ ವಿರುದ್ಧ ಹಿಂಸೆಗೆ ಮುಕ್ತ ಕರೆ ನೀಡಲಾಗಿದೆ” ಎಂದು ಜೆಎನ್‌ಯು ವಿದ್ಯಾರ್ಥಿ ಸಂಘ ತಮ್ಮ ಪೊಲೀಸ್ ದೂರಿನಲ್ಲಿ ತಿಳಿಸಿದೆ.

ಕಳೆದ ಜನವರಿ 5, 2020 ರಂದು, ಸುಮಾರು 50 ಮಂದಿ ಮುಖವಾಡ ಧರಿಸಿದ ಯುವಕರು ಮತ್ತು ಮಹಿಳೆಯರು, ಕಬ್ಬಿಣದ ರಾಡ್‌ಗಳು ಮತ್ತು ಸುತ್ತಿಗೆಗಗಳನ್ನು ಹಿಡಿದು ಶಸ್ತ್ರಸಜ್ಜಿತರಾಗಿ, ಜೆಎನ್‌ಯು ಕ್ಯಾಂಪಸ್‌ನಲ್ಲಿ ನುಗ್ಗಿದ್ದರು. ವಿದ್ಯಾರ್ಥಿಗಳು ಎಚ್ಚರಗೊಳ್ಳುವ ಮೊದಲೇ ಹಾಸ್ಟೆಲ್‌ಗಳು ಮತ್ತು ಇತರ ಕಟ್ಟಡಗಳಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದರು.

ಆದರೆ, 2020 ರ ಜೆಎನ್‌ಯು ಕ್ಯಾಂಪಸ್ ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ (MHA) ಲೋಕಸಭೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...