Homeಮುಖಪುಟಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ...

ಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ ಬಂಧನ

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಯೋಧ್ಯೆಯ ರಾಮ ಮಂದಿರಕ್ಕೆ ಮುಸ್ಲಿಮರ ಹೆಸರಿನಲ್ಲಿ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಬುಧವಾರ ಬಂಧಿಸಿದೆ.

ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಭ್ ಯಶ್ ಮತ್ತು ದೇವೇಂದ್ರ ತಿವಾರಿ ಎಂಬ ವ್ಯಕ್ತಿಗೂ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ವಿಶೇಷ ಕಾರ್ಯಪಡೆ, ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಎಂಬ ಇಬ್ಬರನ್ನು ಬಂಧಿಸಿದೆ.

ಇಬ್ಬರು ಆರೋಪಿಗಳು @iDevendraOffice ಎಂಬ ಎಕ್ಸ್‌ ಹ್ಯಾಂಡಲ್ ಬಳಸಿ ಸಿಎಂ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಅಯೋಧ್ಯೆಯ ರಾಮಮಂದಿರಕ್ಕೆ ಬೆದರಿಕೆ ಹಾಕಿದ್ದರು.

ಅಲ್ಲದೆ, ಬೆದರಿಕೆ ಸಂದೇಶಗಳನ್ನು ಕಳುಹಿಸಲು ಆರೋಪಿಗಳು ‘[email protected]’ಮತ್ತು ‘[email protected]’ಎಂಬ ಮುಸ್ಲಿಂ ಹೆಸರಿನ ಎರಡು ಇ-ಮೇಲ್ ಐಡಿಗಳನ್ನು ಬಳಸಿದ್ದರು ಎಂದು ತನಿಖೆಯ ಆರಂಭದಲ್ಲಿ ತಿಳಿದು ಬಂದಿತ್ತು.

ತಾಂತ್ರಿಕ ವಿಶ್ಲೇಷಣೆ ಮೂಲಕ ಇ-ಮೇಲ್ ಜಾಡು ಹಿಡಿದು ಹೊರಟ ವಿಶೇಷ ಕಾರ್ಯಪಡೆ ಆರೋಪಿಗಳನ್ನು ಪತ್ತೆ ಹಚ್ಚಿದೆ. ಆರೋಪಿಗಳು VivoT-2 ಮತ್ತು Samsung GalaxyA-3 ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು ಇ-ಮೇಲ್ ಐಡಿ ರಚಿಸಿದ್ದರು. ಆರೋಪಿಗಳು ಇ-ಮೇಲ್‌ಗಳನ್ನು ಕಳುಹಿಸಿದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳು, ವೈ-ಫೈ ರೂಟರ್ ಮತ್ತು ಡಿವಿಆರ್ (ಡಿಜಿಟಲ್ ವಿಡಿಯೋ ರೆಕಾರ್ಡರ್) ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಎಸ್‌ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದೆ.

ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೋ ಸೇವಾ ಪರಿಷತ್ ಎಂಬ ಹೆಸರಿನಲ್ಲಿ ಎನ್‌ಜಿಒಗಳನ್ನು ನಡೆಸುತ್ತಿರುವ ದೇವೇಂದ್ರ ತಿವಾರಿ ಎಂಬಾತನ ಸೂಚನೆಯಂತೆ ತಾವು ಕಾರ್ಯ ನಿರ್ವಹಿಸಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪ್ರಮೇಶ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.

ಆರೋಪಿಗಳ ಪೈಕಿ ತಹರ್ ಸಿಂಗ್ ಸಾಮಾಜಿಕ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದ. ಮತ್ತೋರ್ವ ಓ ಪ್ರಕಾಶ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ನಲ್ಲಿ ಡಿಪ್ಲೋಮಾ ಅಧ್ಯಯನ ಮಾಡುತ್ತಿದ್ದ. ಇದೇ ಕಾಲೇಜಿನಲ್ಲಿ ದೇವೇಂದ್ರ ತಿವಾರಿ ಉದ್ಯೋಗಿಯಾಗಿದ್ದ.

ನಕಲಿ ಇ-ಮೇಲ್ ಐಡಿಗಳನ್ನು ಸೃಷ್ಟಿಸಲು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಲು ತಿವಾರಿ ಇಬ್ಬರು ಬಂಧಿತರಿಗೆ ಸೂಚನೆ ನೀಡಿದ್ದ ಎಂದು ಹೇಳಲಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶದ ಕಳುಹಿಸಿದ ನಂತರ ಮಾಧ್ಯಮಗಳು ಮತ್ತು ರಾಜಕೀಯದ ಗಮನ ಸೆಳೆಯಲು ಎಕ್ಸ್ ಖಾತೆಯ ಮೂಲಕ ಬೆದರಿಕೆಯ ಸಂದೇಶವನ್ನು ಪ್ರಚಾರ ಮಾಡಿದ್ದರು ಎಂದು ವರದಿಗಳು ಹೇಳಿವೆ.

ಇ-ಮೇಲ್‌ಗಳನ್ನು ಕಳುಹಿಸಲು ಬಳಸಿದ್ದ ಮೊಬೈಲ್ ಫೋನ್‌ಗಳನ್ನು ತಿವಾರಿ ಆದೇಶದ ಮೇರೆಗೆ ನಾಶಪಡಿಸಲಾಗಿದೆ. ಕೃತ್ಯದ ಸಮಯದಲ್ಲಿ ಇಂಟರ್ನೆಟ್‌ಗಾಗಿ ಆರೋಪಿಗಳು ಕಚೇರಿಯ ವೈ-ಫೈ ಬಳಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...

ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ...

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...