Homeಮುಖಪುಟಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ...

ಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ ಬಂಧನ

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಯೋಧ್ಯೆಯ ರಾಮ ಮಂದಿರಕ್ಕೆ ಮುಸ್ಲಿಮರ ಹೆಸರಿನಲ್ಲಿ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಬುಧವಾರ ಬಂಧಿಸಿದೆ.

ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಭ್ ಯಶ್ ಮತ್ತು ದೇವೇಂದ್ರ ತಿವಾರಿ ಎಂಬ ವ್ಯಕ್ತಿಗೂ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ವಿಶೇಷ ಕಾರ್ಯಪಡೆ, ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಎಂಬ ಇಬ್ಬರನ್ನು ಬಂಧಿಸಿದೆ.

ಇಬ್ಬರು ಆರೋಪಿಗಳು @iDevendraOffice ಎಂಬ ಎಕ್ಸ್‌ ಹ್ಯಾಂಡಲ್ ಬಳಸಿ ಸಿಎಂ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಅಯೋಧ್ಯೆಯ ರಾಮಮಂದಿರಕ್ಕೆ ಬೆದರಿಕೆ ಹಾಕಿದ್ದರು.

ಅಲ್ಲದೆ, ಬೆದರಿಕೆ ಸಂದೇಶಗಳನ್ನು ಕಳುಹಿಸಲು ಆರೋಪಿಗಳು ‘[email protected]’ಮತ್ತು ‘[email protected]’ಎಂಬ ಮುಸ್ಲಿಂ ಹೆಸರಿನ ಎರಡು ಇ-ಮೇಲ್ ಐಡಿಗಳನ್ನು ಬಳಸಿದ್ದರು ಎಂದು ತನಿಖೆಯ ಆರಂಭದಲ್ಲಿ ತಿಳಿದು ಬಂದಿತ್ತು.

ತಾಂತ್ರಿಕ ವಿಶ್ಲೇಷಣೆ ಮೂಲಕ ಇ-ಮೇಲ್ ಜಾಡು ಹಿಡಿದು ಹೊರಟ ವಿಶೇಷ ಕಾರ್ಯಪಡೆ ಆರೋಪಿಗಳನ್ನು ಪತ್ತೆ ಹಚ್ಚಿದೆ. ಆರೋಪಿಗಳು VivoT-2 ಮತ್ತು Samsung GalaxyA-3 ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು ಇ-ಮೇಲ್ ಐಡಿ ರಚಿಸಿದ್ದರು. ಆರೋಪಿಗಳು ಇ-ಮೇಲ್‌ಗಳನ್ನು ಕಳುಹಿಸಿದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳು, ವೈ-ಫೈ ರೂಟರ್ ಮತ್ತು ಡಿವಿಆರ್ (ಡಿಜಿಟಲ್ ವಿಡಿಯೋ ರೆಕಾರ್ಡರ್) ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಎಸ್‌ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದೆ.

ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೋ ಸೇವಾ ಪರಿಷತ್ ಎಂಬ ಹೆಸರಿನಲ್ಲಿ ಎನ್‌ಜಿಒಗಳನ್ನು ನಡೆಸುತ್ತಿರುವ ದೇವೇಂದ್ರ ತಿವಾರಿ ಎಂಬಾತನ ಸೂಚನೆಯಂತೆ ತಾವು ಕಾರ್ಯ ನಿರ್ವಹಿಸಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪ್ರಮೇಶ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.

ಆರೋಪಿಗಳ ಪೈಕಿ ತಹರ್ ಸಿಂಗ್ ಸಾಮಾಜಿಕ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದ. ಮತ್ತೋರ್ವ ಓ ಪ್ರಕಾಶ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ನಲ್ಲಿ ಡಿಪ್ಲೋಮಾ ಅಧ್ಯಯನ ಮಾಡುತ್ತಿದ್ದ. ಇದೇ ಕಾಲೇಜಿನಲ್ಲಿ ದೇವೇಂದ್ರ ತಿವಾರಿ ಉದ್ಯೋಗಿಯಾಗಿದ್ದ.

ನಕಲಿ ಇ-ಮೇಲ್ ಐಡಿಗಳನ್ನು ಸೃಷ್ಟಿಸಲು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಲು ತಿವಾರಿ ಇಬ್ಬರು ಬಂಧಿತರಿಗೆ ಸೂಚನೆ ನೀಡಿದ್ದ ಎಂದು ಹೇಳಲಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶದ ಕಳುಹಿಸಿದ ನಂತರ ಮಾಧ್ಯಮಗಳು ಮತ್ತು ರಾಜಕೀಯದ ಗಮನ ಸೆಳೆಯಲು ಎಕ್ಸ್ ಖಾತೆಯ ಮೂಲಕ ಬೆದರಿಕೆಯ ಸಂದೇಶವನ್ನು ಪ್ರಚಾರ ಮಾಡಿದ್ದರು ಎಂದು ವರದಿಗಳು ಹೇಳಿವೆ.

ಇ-ಮೇಲ್‌ಗಳನ್ನು ಕಳುಹಿಸಲು ಬಳಸಿದ್ದ ಮೊಬೈಲ್ ಫೋನ್‌ಗಳನ್ನು ತಿವಾರಿ ಆದೇಶದ ಮೇರೆಗೆ ನಾಶಪಡಿಸಲಾಗಿದೆ. ಕೃತ್ಯದ ಸಮಯದಲ್ಲಿ ಇಂಟರ್ನೆಟ್‌ಗಾಗಿ ಆರೋಪಿಗಳು ಕಚೇರಿಯ ವೈ-ಫೈ ಬಳಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...