Homeಮುಖಪುಟಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ...

ಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ ಬಂಧನ

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಯೋಧ್ಯೆಯ ರಾಮ ಮಂದಿರಕ್ಕೆ ಮುಸ್ಲಿಮರ ಹೆಸರಿನಲ್ಲಿ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಬುಧವಾರ ಬಂಧಿಸಿದೆ.

ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಭ್ ಯಶ್ ಮತ್ತು ದೇವೇಂದ್ರ ತಿವಾರಿ ಎಂಬ ವ್ಯಕ್ತಿಗೂ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ವಿಶೇಷ ಕಾರ್ಯಪಡೆ, ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಎಂಬ ಇಬ್ಬರನ್ನು ಬಂಧಿಸಿದೆ.

ಇಬ್ಬರು ಆರೋಪಿಗಳು @iDevendraOffice ಎಂಬ ಎಕ್ಸ್‌ ಹ್ಯಾಂಡಲ್ ಬಳಸಿ ಸಿಎಂ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಅಯೋಧ್ಯೆಯ ರಾಮಮಂದಿರಕ್ಕೆ ಬೆದರಿಕೆ ಹಾಕಿದ್ದರು.

ಅಲ್ಲದೆ, ಬೆದರಿಕೆ ಸಂದೇಶಗಳನ್ನು ಕಳುಹಿಸಲು ಆರೋಪಿಗಳು ‘[email protected]’ಮತ್ತು ‘[email protected]’ಎಂಬ ಮುಸ್ಲಿಂ ಹೆಸರಿನ ಎರಡು ಇ-ಮೇಲ್ ಐಡಿಗಳನ್ನು ಬಳಸಿದ್ದರು ಎಂದು ತನಿಖೆಯ ಆರಂಭದಲ್ಲಿ ತಿಳಿದು ಬಂದಿತ್ತು.

ತಾಂತ್ರಿಕ ವಿಶ್ಲೇಷಣೆ ಮೂಲಕ ಇ-ಮೇಲ್ ಜಾಡು ಹಿಡಿದು ಹೊರಟ ವಿಶೇಷ ಕಾರ್ಯಪಡೆ ಆರೋಪಿಗಳನ್ನು ಪತ್ತೆ ಹಚ್ಚಿದೆ. ಆರೋಪಿಗಳು VivoT-2 ಮತ್ತು Samsung GalaxyA-3 ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು ಇ-ಮೇಲ್ ಐಡಿ ರಚಿಸಿದ್ದರು. ಆರೋಪಿಗಳು ಇ-ಮೇಲ್‌ಗಳನ್ನು ಕಳುಹಿಸಿದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳು, ವೈ-ಫೈ ರೂಟರ್ ಮತ್ತು ಡಿವಿಆರ್ (ಡಿಜಿಟಲ್ ವಿಡಿಯೋ ರೆಕಾರ್ಡರ್) ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಎಸ್‌ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದೆ.

ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೋ ಸೇವಾ ಪರಿಷತ್ ಎಂಬ ಹೆಸರಿನಲ್ಲಿ ಎನ್‌ಜಿಒಗಳನ್ನು ನಡೆಸುತ್ತಿರುವ ದೇವೇಂದ್ರ ತಿವಾರಿ ಎಂಬಾತನ ಸೂಚನೆಯಂತೆ ತಾವು ಕಾರ್ಯ ನಿರ್ವಹಿಸಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪ್ರಮೇಶ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.

ಆರೋಪಿಗಳ ಪೈಕಿ ತಹರ್ ಸಿಂಗ್ ಸಾಮಾಜಿಕ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದ. ಮತ್ತೋರ್ವ ಓ ಪ್ರಕಾಶ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ನಲ್ಲಿ ಡಿಪ್ಲೋಮಾ ಅಧ್ಯಯನ ಮಾಡುತ್ತಿದ್ದ. ಇದೇ ಕಾಲೇಜಿನಲ್ಲಿ ದೇವೇಂದ್ರ ತಿವಾರಿ ಉದ್ಯೋಗಿಯಾಗಿದ್ದ.

ನಕಲಿ ಇ-ಮೇಲ್ ಐಡಿಗಳನ್ನು ಸೃಷ್ಟಿಸಲು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಲು ತಿವಾರಿ ಇಬ್ಬರು ಬಂಧಿತರಿಗೆ ಸೂಚನೆ ನೀಡಿದ್ದ ಎಂದು ಹೇಳಲಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶದ ಕಳುಹಿಸಿದ ನಂತರ ಮಾಧ್ಯಮಗಳು ಮತ್ತು ರಾಜಕೀಯದ ಗಮನ ಸೆಳೆಯಲು ಎಕ್ಸ್ ಖಾತೆಯ ಮೂಲಕ ಬೆದರಿಕೆಯ ಸಂದೇಶವನ್ನು ಪ್ರಚಾರ ಮಾಡಿದ್ದರು ಎಂದು ವರದಿಗಳು ಹೇಳಿವೆ.

ಇ-ಮೇಲ್‌ಗಳನ್ನು ಕಳುಹಿಸಲು ಬಳಸಿದ್ದ ಮೊಬೈಲ್ ಫೋನ್‌ಗಳನ್ನು ತಿವಾರಿ ಆದೇಶದ ಮೇರೆಗೆ ನಾಶಪಡಿಸಲಾಗಿದೆ. ಕೃತ್ಯದ ಸಮಯದಲ್ಲಿ ಇಂಟರ್ನೆಟ್‌ಗಾಗಿ ಆರೋಪಿಗಳು ಕಚೇರಿಯ ವೈ-ಫೈ ಬಳಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...