Homeಮುಖಪುಟಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ...

ಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ ಬಂಧನ

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಯೋಧ್ಯೆಯ ರಾಮ ಮಂದಿರಕ್ಕೆ ಮುಸ್ಲಿಮರ ಹೆಸರಿನಲ್ಲಿ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಬುಧವಾರ ಬಂಧಿಸಿದೆ.

ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಭ್ ಯಶ್ ಮತ್ತು ದೇವೇಂದ್ರ ತಿವಾರಿ ಎಂಬ ವ್ಯಕ್ತಿಗೂ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ವಿಶೇಷ ಕಾರ್ಯಪಡೆ, ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಎಂಬ ಇಬ್ಬರನ್ನು ಬಂಧಿಸಿದೆ.

ಇಬ್ಬರು ಆರೋಪಿಗಳು @iDevendraOffice ಎಂಬ ಎಕ್ಸ್‌ ಹ್ಯಾಂಡಲ್ ಬಳಸಿ ಸಿಎಂ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಅಯೋಧ್ಯೆಯ ರಾಮಮಂದಿರಕ್ಕೆ ಬೆದರಿಕೆ ಹಾಕಿದ್ದರು.

ಅಲ್ಲದೆ, ಬೆದರಿಕೆ ಸಂದೇಶಗಳನ್ನು ಕಳುಹಿಸಲು ಆರೋಪಿಗಳು ‘[email protected]’ಮತ್ತು ‘[email protected]’ಎಂಬ ಮುಸ್ಲಿಂ ಹೆಸರಿನ ಎರಡು ಇ-ಮೇಲ್ ಐಡಿಗಳನ್ನು ಬಳಸಿದ್ದರು ಎಂದು ತನಿಖೆಯ ಆರಂಭದಲ್ಲಿ ತಿಳಿದು ಬಂದಿತ್ತು.

ತಾಂತ್ರಿಕ ವಿಶ್ಲೇಷಣೆ ಮೂಲಕ ಇ-ಮೇಲ್ ಜಾಡು ಹಿಡಿದು ಹೊರಟ ವಿಶೇಷ ಕಾರ್ಯಪಡೆ ಆರೋಪಿಗಳನ್ನು ಪತ್ತೆ ಹಚ್ಚಿದೆ. ಆರೋಪಿಗಳು VivoT-2 ಮತ್ತು Samsung GalaxyA-3 ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು ಇ-ಮೇಲ್ ಐಡಿ ರಚಿಸಿದ್ದರು. ಆರೋಪಿಗಳು ಇ-ಮೇಲ್‌ಗಳನ್ನು ಕಳುಹಿಸಿದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳು, ವೈ-ಫೈ ರೂಟರ್ ಮತ್ತು ಡಿವಿಆರ್ (ಡಿಜಿಟಲ್ ವಿಡಿಯೋ ರೆಕಾರ್ಡರ್) ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಎಸ್‌ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದೆ.

ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೋ ಸೇವಾ ಪರಿಷತ್ ಎಂಬ ಹೆಸರಿನಲ್ಲಿ ಎನ್‌ಜಿಒಗಳನ್ನು ನಡೆಸುತ್ತಿರುವ ದೇವೇಂದ್ರ ತಿವಾರಿ ಎಂಬಾತನ ಸೂಚನೆಯಂತೆ ತಾವು ಕಾರ್ಯ ನಿರ್ವಹಿಸಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪ್ರಮೇಶ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.

ಆರೋಪಿಗಳ ಪೈಕಿ ತಹರ್ ಸಿಂಗ್ ಸಾಮಾಜಿಕ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದ. ಮತ್ತೋರ್ವ ಓ ಪ್ರಕಾಶ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ನಲ್ಲಿ ಡಿಪ್ಲೋಮಾ ಅಧ್ಯಯನ ಮಾಡುತ್ತಿದ್ದ. ಇದೇ ಕಾಲೇಜಿನಲ್ಲಿ ದೇವೇಂದ್ರ ತಿವಾರಿ ಉದ್ಯೋಗಿಯಾಗಿದ್ದ.

ನಕಲಿ ಇ-ಮೇಲ್ ಐಡಿಗಳನ್ನು ಸೃಷ್ಟಿಸಲು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಲು ತಿವಾರಿ ಇಬ್ಬರು ಬಂಧಿತರಿಗೆ ಸೂಚನೆ ನೀಡಿದ್ದ ಎಂದು ಹೇಳಲಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶದ ಕಳುಹಿಸಿದ ನಂತರ ಮಾಧ್ಯಮಗಳು ಮತ್ತು ರಾಜಕೀಯದ ಗಮನ ಸೆಳೆಯಲು ಎಕ್ಸ್ ಖಾತೆಯ ಮೂಲಕ ಬೆದರಿಕೆಯ ಸಂದೇಶವನ್ನು ಪ್ರಚಾರ ಮಾಡಿದ್ದರು ಎಂದು ವರದಿಗಳು ಹೇಳಿವೆ.

ಇ-ಮೇಲ್‌ಗಳನ್ನು ಕಳುಹಿಸಲು ಬಳಸಿದ್ದ ಮೊಬೈಲ್ ಫೋನ್‌ಗಳನ್ನು ತಿವಾರಿ ಆದೇಶದ ಮೇರೆಗೆ ನಾಶಪಡಿಸಲಾಗಿದೆ. ಕೃತ್ಯದ ಸಮಯದಲ್ಲಿ ಇಂಟರ್ನೆಟ್‌ಗಾಗಿ ಆರೋಪಿಗಳು ಕಚೇರಿಯ ವೈ-ಫೈ ಬಳಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...