Homeಮುಖಪುಟಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ...

ಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ ಬಂಧನ

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಯೋಧ್ಯೆಯ ರಾಮ ಮಂದಿರಕ್ಕೆ ಮುಸ್ಲಿಮರ ಹೆಸರಿನಲ್ಲಿ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಬುಧವಾರ ಬಂಧಿಸಿದೆ.

ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಭ್ ಯಶ್ ಮತ್ತು ದೇವೇಂದ್ರ ತಿವಾರಿ ಎಂಬ ವ್ಯಕ್ತಿಗೂ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ವಿಶೇಷ ಕಾರ್ಯಪಡೆ, ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಎಂಬ ಇಬ್ಬರನ್ನು ಬಂಧಿಸಿದೆ.

ಇಬ್ಬರು ಆರೋಪಿಗಳು @iDevendraOffice ಎಂಬ ಎಕ್ಸ್‌ ಹ್ಯಾಂಡಲ್ ಬಳಸಿ ಸಿಎಂ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಅಯೋಧ್ಯೆಯ ರಾಮಮಂದಿರಕ್ಕೆ ಬೆದರಿಕೆ ಹಾಕಿದ್ದರು.

ಅಲ್ಲದೆ, ಬೆದರಿಕೆ ಸಂದೇಶಗಳನ್ನು ಕಳುಹಿಸಲು ಆರೋಪಿಗಳು ‘[email protected]’ಮತ್ತು ‘[email protected]’ಎಂಬ ಮುಸ್ಲಿಂ ಹೆಸರಿನ ಎರಡು ಇ-ಮೇಲ್ ಐಡಿಗಳನ್ನು ಬಳಸಿದ್ದರು ಎಂದು ತನಿಖೆಯ ಆರಂಭದಲ್ಲಿ ತಿಳಿದು ಬಂದಿತ್ತು.

ತಾಂತ್ರಿಕ ವಿಶ್ಲೇಷಣೆ ಮೂಲಕ ಇ-ಮೇಲ್ ಜಾಡು ಹಿಡಿದು ಹೊರಟ ವಿಶೇಷ ಕಾರ್ಯಪಡೆ ಆರೋಪಿಗಳನ್ನು ಪತ್ತೆ ಹಚ್ಚಿದೆ. ಆರೋಪಿಗಳು VivoT-2 ಮತ್ತು Samsung GalaxyA-3 ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು ಇ-ಮೇಲ್ ಐಡಿ ರಚಿಸಿದ್ದರು. ಆರೋಪಿಗಳು ಇ-ಮೇಲ್‌ಗಳನ್ನು ಕಳುಹಿಸಿದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳು, ವೈ-ಫೈ ರೂಟರ್ ಮತ್ತು ಡಿವಿಆರ್ (ಡಿಜಿಟಲ್ ವಿಡಿಯೋ ರೆಕಾರ್ಡರ್) ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಎಸ್‌ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದೆ.

ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೋ ಸೇವಾ ಪರಿಷತ್ ಎಂಬ ಹೆಸರಿನಲ್ಲಿ ಎನ್‌ಜಿಒಗಳನ್ನು ನಡೆಸುತ್ತಿರುವ ದೇವೇಂದ್ರ ತಿವಾರಿ ಎಂಬಾತನ ಸೂಚನೆಯಂತೆ ತಾವು ಕಾರ್ಯ ನಿರ್ವಹಿಸಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪ್ರಮೇಶ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.

ಆರೋಪಿಗಳ ಪೈಕಿ ತಹರ್ ಸಿಂಗ್ ಸಾಮಾಜಿಕ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದ. ಮತ್ತೋರ್ವ ಓ ಪ್ರಕಾಶ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ನಲ್ಲಿ ಡಿಪ್ಲೋಮಾ ಅಧ್ಯಯನ ಮಾಡುತ್ತಿದ್ದ. ಇದೇ ಕಾಲೇಜಿನಲ್ಲಿ ದೇವೇಂದ್ರ ತಿವಾರಿ ಉದ್ಯೋಗಿಯಾಗಿದ್ದ.

ನಕಲಿ ಇ-ಮೇಲ್ ಐಡಿಗಳನ್ನು ಸೃಷ್ಟಿಸಲು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಲು ತಿವಾರಿ ಇಬ್ಬರು ಬಂಧಿತರಿಗೆ ಸೂಚನೆ ನೀಡಿದ್ದ ಎಂದು ಹೇಳಲಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶದ ಕಳುಹಿಸಿದ ನಂತರ ಮಾಧ್ಯಮಗಳು ಮತ್ತು ರಾಜಕೀಯದ ಗಮನ ಸೆಳೆಯಲು ಎಕ್ಸ್ ಖಾತೆಯ ಮೂಲಕ ಬೆದರಿಕೆಯ ಸಂದೇಶವನ್ನು ಪ್ರಚಾರ ಮಾಡಿದ್ದರು ಎಂದು ವರದಿಗಳು ಹೇಳಿವೆ.

ಇ-ಮೇಲ್‌ಗಳನ್ನು ಕಳುಹಿಸಲು ಬಳಸಿದ್ದ ಮೊಬೈಲ್ ಫೋನ್‌ಗಳನ್ನು ತಿವಾರಿ ಆದೇಶದ ಮೇರೆಗೆ ನಾಶಪಡಿಸಲಾಗಿದೆ. ಕೃತ್ಯದ ಸಮಯದಲ್ಲಿ ಇಂಟರ್ನೆಟ್‌ಗಾಗಿ ಆರೋಪಿಗಳು ಕಚೇರಿಯ ವೈ-ಫೈ ಬಳಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...