Homeಮುಖಪುಟಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ...

ಅಯೋಧ್ಯೆ ರಾಮ ಮಂದಿರ ಸ್ಪೋಟಿಸುವುದಾಗಿ ಮುಸ್ಲಿಮರ ಹೆಸರಿನಲ್ಲಿ ಬೆದರಿಕೆ: ಆರೋಪಿಗಳಾದ ತಹರ್‌ ಸಿಂಗ್‌, ಓಂಪ್ರಕಾಶ್‌ ಮಿಶ್ರಾ ಬಂಧನ

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಯೋಧ್ಯೆಯ ರಾಮ ಮಂದಿರಕ್ಕೆ ಮುಸ್ಲಿಮರ ಹೆಸರಿನಲ್ಲಿ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಬುಧವಾರ ಬಂಧಿಸಿದೆ.

ಎಸ್‌ಟಿಎಫ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಅಮಿತಾಭ್ ಯಶ್ ಮತ್ತು ದೇವೇಂದ್ರ ತಿವಾರಿ ಎಂಬ ವ್ಯಕ್ತಿಗೂ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ವಿಶೇಷ ಕಾರ್ಯಪಡೆ, ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಎಂಬ ಇಬ್ಬರನ್ನು ಬಂಧಿಸಿದೆ.

ಇಬ್ಬರು ಆರೋಪಿಗಳು @iDevendraOffice ಎಂಬ ಎಕ್ಸ್‌ ಹ್ಯಾಂಡಲ್ ಬಳಸಿ ಸಿಎಂ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಅಯೋಧ್ಯೆಯ ರಾಮಮಂದಿರಕ್ಕೆ ಬೆದರಿಕೆ ಹಾಕಿದ್ದರು.

ಅಲ್ಲದೆ, ಬೆದರಿಕೆ ಸಂದೇಶಗಳನ್ನು ಕಳುಹಿಸಲು ಆರೋಪಿಗಳು ‘[email protected]’ಮತ್ತು ‘[email protected]’ಎಂಬ ಮುಸ್ಲಿಂ ಹೆಸರಿನ ಎರಡು ಇ-ಮೇಲ್ ಐಡಿಗಳನ್ನು ಬಳಸಿದ್ದರು ಎಂದು ತನಿಖೆಯ ಆರಂಭದಲ್ಲಿ ತಿಳಿದು ಬಂದಿತ್ತು.

ತಾಂತ್ರಿಕ ವಿಶ್ಲೇಷಣೆ ಮೂಲಕ ಇ-ಮೇಲ್ ಜಾಡು ಹಿಡಿದು ಹೊರಟ ವಿಶೇಷ ಕಾರ್ಯಪಡೆ ಆರೋಪಿಗಳನ್ನು ಪತ್ತೆ ಹಚ್ಚಿದೆ. ಆರೋಪಿಗಳು VivoT-2 ಮತ್ತು Samsung GalaxyA-3 ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು ಇ-ಮೇಲ್ ಐಡಿ ರಚಿಸಿದ್ದರು. ಆರೋಪಿಗಳು ಇ-ಮೇಲ್‌ಗಳನ್ನು ಕಳುಹಿಸಿದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳು, ವೈ-ಫೈ ರೂಟರ್ ಮತ್ತು ಡಿವಿಆರ್ (ಡಿಜಿಟಲ್ ವಿಡಿಯೋ ರೆಕಾರ್ಡರ್) ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಎಸ್‌ಟಿಎಫ್ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಶ್ ಕುಮಾರ್ ಶುಕ್ಲಾ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದೆ.

ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೋ ಸೇವಾ ಪರಿಷತ್ ಎಂಬ ಹೆಸರಿನಲ್ಲಿ ಎನ್‌ಜಿಒಗಳನ್ನು ನಡೆಸುತ್ತಿರುವ ದೇವೇಂದ್ರ ತಿವಾರಿ ಎಂಬಾತನ ಸೂಚನೆಯಂತೆ ತಾವು ಕಾರ್ಯ ನಿರ್ವಹಿಸಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪ್ರಮೇಶ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.

ಆರೋಪಿಗಳ ಪೈಕಿ ತಹರ್ ಸಿಂಗ್ ಸಾಮಾಜಿಕ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದ. ಮತ್ತೋರ್ವ ಓ ಪ್ರಕಾಶ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್‌ನಲ್ಲಿ ಡಿಪ್ಲೋಮಾ ಅಧ್ಯಯನ ಮಾಡುತ್ತಿದ್ದ. ಇದೇ ಕಾಲೇಜಿನಲ್ಲಿ ದೇವೇಂದ್ರ ತಿವಾರಿ ಉದ್ಯೋಗಿಯಾಗಿದ್ದ.

ನಕಲಿ ಇ-ಮೇಲ್ ಐಡಿಗಳನ್ನು ಸೃಷ್ಟಿಸಲು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಲು ತಿವಾರಿ ಇಬ್ಬರು ಬಂಧಿತರಿಗೆ ಸೂಚನೆ ನೀಡಿದ್ದ ಎಂದು ಹೇಳಲಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶದ ಕಳುಹಿಸಿದ ನಂತರ ಮಾಧ್ಯಮಗಳು ಮತ್ತು ರಾಜಕೀಯದ ಗಮನ ಸೆಳೆಯಲು ಎಕ್ಸ್ ಖಾತೆಯ ಮೂಲಕ ಬೆದರಿಕೆಯ ಸಂದೇಶವನ್ನು ಪ್ರಚಾರ ಮಾಡಿದ್ದರು ಎಂದು ವರದಿಗಳು ಹೇಳಿವೆ.

ಇ-ಮೇಲ್‌ಗಳನ್ನು ಕಳುಹಿಸಲು ಬಳಸಿದ್ದ ಮೊಬೈಲ್ ಫೋನ್‌ಗಳನ್ನು ತಿವಾರಿ ಆದೇಶದ ಮೇರೆಗೆ ನಾಶಪಡಿಸಲಾಗಿದೆ. ಕೃತ್ಯದ ಸಮಯದಲ್ಲಿ ಇಂಟರ್ನೆಟ್‌ಗಾಗಿ ಆರೋಪಿಗಳು ಕಚೇರಿಯ ವೈ-ಫೈ ಬಳಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಇಡಿಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ: ಆತಂಕ ವ್ಯಕ್ತಪಡಿಸಿದ ಎಎಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...