Homeಮುಖಪುಟಅಸ್ಸಾಂ | ತೆರವು ಕಾರ್ಯಾಚರಣೆ ವೇಳೆ ಘರ್ಷಣೆ : ಪೊಲೀಸರ ಗುಂಡಿಗೆ ಇಬ್ಬರು ಬಲಿ

ಅಸ್ಸಾಂ | ತೆರವು ಕಾರ್ಯಾಚರಣೆ ವೇಳೆ ಘರ್ಷಣೆ : ಪೊಲೀಸರ ಗುಂಡಿಗೆ ಇಬ್ಬರು ಬಲಿ

- Advertisement -
- Advertisement -

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ ಗುರುವಾರ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿ, ಗುಂಡು ಹಾರಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಕಮ್ರೂಪ್ (ಮೆಟ್ರೋಪಾಲಿಟನ್) ಜಿಲ್ಲೆಯಲ್ಲಿ ಆಪಾದಿತ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಈ ಘಟನೆ ಸಂಭವಿಸಿದೆ. ಜಿಲ್ಲೆಯ ಕೊಚುತೊಲಿ ಗ್ರಾಮದಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಂ ಗ್ರಾಮಸ್ಥರನ್ನು ತೆರವುಗೊಳಿಸಲು ಸೋನಾಪುರ ಸರ್ಕಲ್‌ನ ಪೊಲೀಸ್ ತಂಡ ತೆರಳಿತ್ತು. ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ.

ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಅಧಿಕಾರಿಗಳು ಮತ್ತು ಪೊಲೀಸರ ಮೇಲೆ ಹರಿತವಾದ ಆಯುಧಗಳು, ದೊಣ್ಣೆ ಮತ್ತು ಕಲ್ಲುಗಳಿಂದ ದಾಳಿ ನಡೆಸಿದ್ದು, ಪರಿಣಾಮ ಮ್ಯಾಜಿಸ್ಟ್ರೇಟ್ ಮತ್ತು 20ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಘಟನೆಯಲ್ಲಿ ಪೊಲೀಸ್ ವಾಹನಕ್ಕೂ ಹಾನಿಯಾಗಿದೆ ಎಂದು ವರದಿಗಳು ಹೇಳಿವೆ.

ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಉದ್ವಿಗ್ನ ಪರಿಸ್ಥಿತಿ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದಾರೆ.

“ತೆರವು ಕಾರ್ಯಾಚರಣೆ ಶಾಂತಿಯುತವಾಗಿ ನಡೆಯುತ್ತಿತ್ತು. ಕಾಂಗ್ರೆಸ್‌ ಕಾರ್ಯಾಚರಣೆಯನ್ನು ವಿರೋಧಿಸಲು ಆರಂಭಿಸಿದಾಗ ಪರಿಸ್ಥಿತಿ ಹದಗೆಟ್ಟಿದೆ. ಸ್ಥಳಕ್ಕೆ ತೆರಳಿದ ಪೊಲೀಸರು ಹಾಗೂ ಸರ್ಕಾರಿ ಅಧಿಕಾರಿಗಳ ತಂಡದ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ದೊಣ್ಣೆ, ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾರಿಸಿದ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ.

ಮೃತರನ್ನು ಜುಬಾಹಿರ್ ಅಲಿ ಮತ್ತು ಹೈದರ್ ಅಲಿ ಎಂದು ಗುರುತಿಸಲಾಗಿದೆ. ಸೋನಾಪುರ ಸರ್ಕಲ್ ಅಧಿಕಾರಿ ನಿತುಲ್ ಖತಾನಿಯಾರ್, ಉಪ ಪೊಲೀಸ್ ಆಯುಕ್ತ (ಪೂರ್ವ) ಮೃಣಾಲ್ ದೇಕಾ ಮತ್ತು ಸೋನಾಪುರ ಪೊಲೀಸ್ ಠಾಣೆ ಪ್ರಭಾರಿ ಅಧಿಕಾರಿ ಹಿರಾಕ್ ಜ್ಯೋತಿ ಸೈಕಿಯಾ ಗಾಯಗೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಘಟನೆ ಬಳಿಕ ಗ್ರಾಮದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...