Homeಮುಖಪುಟಸರಕಾರಿ ವಸತಿ ನಿಲಯದಲ್ಲಿ ಇಬ್ಬರು ದಲಿತ ಬಾಲಕಿಯರು ಆತ್ಮಹತ್ಯೆ: ತನಿಖೆಗೆ ಕುಟುಂಬಸ್ಥರ ಆಗ್ರಹ

ಸರಕಾರಿ ವಸತಿ ನಿಲಯದಲ್ಲಿ ಇಬ್ಬರು ದಲಿತ ಬಾಲಕಿಯರು ಆತ್ಮಹತ್ಯೆ: ತನಿಖೆಗೆ ಕುಟುಂಬಸ್ಥರ ಆಗ್ರಹ

- Advertisement -
- Advertisement -

ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಹಾಸ್ಟೆಲ್‌ವೊಂದರಲ್ಲಿ ನಡೆದಿದ್ದು, ಘಟನೆಯ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತರ ಕುಟುಂಬಸ್ಥರು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಮೃತ ವಿದ್ಯಾರ್ಥಿಗಳು, ಭೋಂಗಿರ್‌ನಲ್ಲಿರುವ ತಮ್ಮ ಹಾಸ್ಟೆಲ್ ಬಳಿಯ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದರು. ಅವರಿಬ್ಬರ ಕುಟುಂಬಗಳು ನಗರದಲ್ಲಿ ವಾಸವಾಗಿತ್ತು. ಆತ್ಮಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ತೆಲಂಗಾಣ ಸರ್ಕಾರದ ಅಧೀನದ ಪರಿಶಿಷ್ಟ ಜಾತಿಗಳ(ಎಸ್‌ಸಿ) ಹಾಸ್ಟೆಲ್‌ನಲ್ಲಿ ಜೂನಿಯರ್ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕರು ಕ್ರಮವನ್ನು ಕೈಗೊಂಡಿದ್ದರು ಎನ್ನಲಾಗಿದೆ. ಆದರೆ 10ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಪತ್ರವನ್ನು ಬರದಿದ್ದು, ಶಿಕ್ಷಕರೊಬ್ಬರು ತಾವು ಭಾಗಿಯಾಗದ ಪ್ರಕರಣದಲ್ಲಿ ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಕ್ರಮ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮನ್ನು ಯಾರೂ ನಂಬುವುದಿಲ್ಲ, ನಾವು ಮಾಡದ ಕೆಲಸಕ್ಕಾಗಿ ನಮ್ಮ ಮೇಲೆ ಆರೋಪಿಸಲಾಗಿದೆ. ಇದನ್ನು ಸಹಿಸಲು ಸಾಧ್ಯವಾಗದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಅಂತ್ಯಕ್ರಿಯೆಯನ್ನು ಒಟ್ಟಿಗೆ ಮಾಡಿ ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆಯಲಾಗಿದೆ.

ಈ ಬಗ್ಗೆ ಶಿಕ್ಷಣಾಧಿಕಾರಿ ನಾರಾಯಣರೆಡ್ಡಿ ಮಾತನಾಡಿದ್ದು, ಇಬ್ಬರು ಬಾಲಕಿಯರ ವಿರುದ್ಧ ಕಿರಿಯ ತರಗತಿಗಳ ವಿದ್ಯಾರ್ಥಿಗಳು ದೂರು ನೀಡಿರುವುದು ಮೇಲ್ನೋಟಕ್ಕೆ ಕಂಡುಬಂದರೂ ಅದು ಸಣ್ಣಪುಟ್ಟ ಸಮಸ್ಯೆಯಾಗಿತ್ತು. ಬಳಿಕ ಬಾಲಕಿಯರಿಗೆ ಬುದ್ದಿವಾದ ಹೇಳಲಾಗಿದೆ. ಆದರೆ ಈ ಘಟನೆಯಿಂದ ಬಾಲಕಿಯರು ತೀವ್ರವಾಗಿ ವಿಚಲಿತರಾಗಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಹಾಸ್ಟೆಲ್ ವಾರ್ಡನ್ ಶೈಲಜಾ ಅವರ ಹೆಸರನ್ನು ಆತ್ಮಹತ್ಯೆ ಪತ್ರದಲ್ಲಿ ಬಾಲಕಿಯರು ಉಲ್ಲೇಖಿಸಿದ್ದಾರೆ. ನಮ್ಮನ್ನು ಯಾರೂ ನಂಬಿರಲಿಲ್ಲ. ಶೈಲಜಾ ಮೇಡಮ್ (ಹಾಸ್ಟೆಲ್ ವಾರ್ಡನ್) ಮಾತ್ರ ನಮ್ಮನ್ನು ನಂಬಿದ್ದರು. ನಮ್ಮ ಮೇಲೆ ಆರೋಪ ಮಾತ್ರ ಮಾಡಲಾಗಿದೆ, ಆದರೆ ನಾವು ಆ ಕೃತ್ಯವನ್ನು ಮಾಡಿಲ್ಲ. ನಾವು ಮಾಡದ ಕೆಲಸಕ್ಕೆ ನಮ್ಮನ್ನು ಆರೋಪಿಸಿರುವುದರಿಂದ ಅವಮಾನವಾಗಿದೆ ಮತ್ತು ಮುಜುಗರವಾಗಿದೆ, ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಈ ಬಗ್ಗೆ ವಾರ್ಡನ್ ಮತ್ತು ಜಿಲ್ಲಾ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಬ್ಬರು ಹೆಣ್ಣುಮಕ್ಕಳು ಈ ಪತ್ರವನ್ನು ಬರೆದಿರುವುದು ನಮಗೆ ನಂಬಲು ಸಾಧ್ಯವಾಗುತ್ತಿಲ್ಲ, ಬಾಲಕಿಯರ ವಿರುದ್ಧ ದೂರುಗಳು ಬಂದಾಗ ಶಿಕ್ಷಕರು ಮತ್ತು ವಾರ್ಡನ್‌ ಏಕೆ ನಮಗೆ ಕರೆ ಮಾಡಿ ಮಾಹಿತಿ ನೀಡಲಿಲ್ಲ ಎಂದು ನಮಗೆ ಅರ್ಥವಾಗುತ್ತಿಲ್ಲ, ಪೊಲೀಸರು ಈ ಬಗ್ಗೆ ತನಿಖೆ ಮಾಡಬೇಕು ಎಂದು ಮೃತ ಬಾಲಕಿಯರ ಕುಟುಂಬಸ್ಥರು ಆಗ್ರಹಿಸಿದ್ದಾರೆ.

 

 

 

 

 

 

 

 

 

 

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ‘; ಕೋವಿಂದ್‌ ಸಮಿತಿಗೆ ನಿಲುವನ್ನು ತಿಳಿಸಿದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...