Homeಮುಖಪುಟದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? - ಸುಪ್ರೀಂ ಪ್ರಶ್ನೆ

ದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? – ಸುಪ್ರೀಂ ಪ್ರಶ್ನೆ

ರೈತರಿಂದಲೇ ಮಾಲಿನ್ಯವಾಗಿದೆ ಎಂದು ಏಕೆ ಬಿಂಬಿಸುತ್ತಿದ್ದೀರಿ? ರೈತರನ್ನು ದೂಷಿಸುವುದು ಎಲ್ಲರಿಗೂ ಫ್ಯಾಶನ್ ಆಗಿದೆ ಎಂದು ಕೋರ್ಟ್ ಕೇಂದ್ರದ ವಿರುದ್ಧ ಕಿಡಿಕಾರಿದೆ.

- Advertisement -
- Advertisement -

ಕಳೆದೊಂದು ವಾರದಿಂದ ದೆಹಲಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಹೊಗೆ ತುಂಬಿಕೊಂಡಿದ್ದು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಗಾಳಿಯ ಗುಣಮಟ್ಟ ಸೂಚ್ಯಂಕವು ತೀರಾ ಕೆಳಕ್ಕಿಳಿದಿರುವುದರಿಂದ ಇದನ್ನು ಸರಿಪಡಿಸಲು ಏನು ಕ್ರಮ ಕೈಗೊಂಡಿರುವಿರಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಯಾವ ತುರ್ತು ಯೋಜನೆಗಳನ್ನು – ಕ್ರಮಗಳನ್ನು ಕೈಗೊಂಡಿರುವಿರಿ ತಿಳಿಸಿ. 2 ದಿನ ಲಾಕ್‌ಡೌನ್ ಮಾಡುವಿರಾ? ಗಾಳಿಯ ಗುಣಮಟ್ಟವನ್ನು ಉತ್ತಮಗೊಳಿಸಲು ನಿಮ್ಮ ಯೋಜನೆಯೇನು ಎಂದು ಸಿಜೆಐ ರಮಣ ಪ್ರಶ್ನಿಸಿದ್ದಾರೆ.

ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂಬುದು ನಿಮಗೆ ತಿಳಿದಿದೆಯೇ? ನಾವು ಮನೆಯಲ್ಲಿಯೂ ಮಾಸ್ಕ್ ಧರಿಸಬೇಕಾಗ ಪರಿಸ್ಥಿತಿ ಬಂದಿದೆ. ಇದು ರಾಜ್ಯಗಳ ಜವಾಬ್ದಾರಿ, ಇಲ್ಲ ಕೇಂದ್ರ ಜವಾಬ್ದಾರಿ ಎಂದು ನುಣಚಿಕೊಳ್ಳುವ ಸಂದರ್ಭದ ಇದ್ಲ. ಕೂಡಲೇ ಪಂಜಾಬ್ ಹರಿಯಾಣ ರಾಜ್ಯಗಳೊಂದಿಗೆ ತುರ್ತು ಸಭೆ ನಡೆಸಿ. ಮುಂದಿನ ಎರಡು ಮೂರು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಿ ಎಂದು ನಮಗೆ ಅನ್ನಿಸುವ ರೀತಿ ಕ್ರಮ ಕೈಗೊಳ್ಳಿ ಎಂದು ರಮಣ ಸೂಚಿಸಿದ್ದಾರೆ.

ಶುಕ್ರವಾರದ ದೆಹಲಿಯ ಪರಿಸ್ಥಿತಿ ಈ ಅವಧಿಯಲ್ಲಿಯೇ ಅತಿ ಕೆಟ್ಟ ಪರಿಸ್ಥಿತಿ ತಲುಪಿತ್ತು. ಪರಿಸ್ಥಿತಿ ಗಂಭೀರತೆ ನಮಗೆ ಅರ್ಥವಾಗಿದೆ. ದೆಹಲಿಯ ಗಾಳಿಯನ್ನು ಉಸಿರಾಡುವುದು ದಿನಕ್ಕೆ 20 ಸಿಗರೇಟ್ ಸೇದುವಂತೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಕವು ಜನರು ಮನೆಯಲ್ಲಿಯೇ ಇರುವಂತೆ ಸೂಚಿಸಿದೆ.

ಕೃಷಿ ತ್ಯಾಜ್ಯವನ್ನು ಸುಡದಂತೆ ತಡೆಯುವುದು ಸದ್ಯದ ವಾಯುಮಾಲಿನ್ಯವನ್ನು ತಡೆಯುವ ಪ್ರಮುಖ ಹೆಜ್ಜೆಯಾಗಿದ್ದು ಇದರತ್ತ ಗಮನ ಹರಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನಾವು ಹುಲ್ಲು ಸುಡುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಆದರೆ ಕಳೆದ ಐದಾರು ದಿನಗಳಲ್ಲಿ ಪಂಜಾಬ್‌ನಲ್ಲಿ ಉರಿಯುತ್ತಿರುವ ಕೃಷಿ ತ್ಯಾಜ್ಯದ ಕಾರಣದಿಂದಾಗಿ ಮಾಲಿನ್ಯ ಹೆಚ್ಚಾಗಿದೆ, ಹಾಗಾಗಿ ಪಂಜಾಬ್ ರಾಜ್ಯವು ಅದನ್ನು ತಡೆಯಬೇಕೆಂದು ಕೇಂದ್ರವು ಪಂಜಾಬ್‌ ಮೇಲೆ ಹೊಣೆ ಹೊರಿಸಿದೆ.

ಇದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿಗಳು, “ರೈತರಿಂದಲೇ ಮಾಲಿನ್ಯವಾಗಿದೆ ಎಂದು ಏಕೆ ಬಿಂಬಿಸುತ್ತಿದ್ದೀರಿ? ಅವರಿಂದ ಒಂದಷ್ಟು ಮಾಲಿನ್ಯವಾಗಿದೆ. ಆದರೆ ಉಳಿದ ಮಾಲಿನ್ಯದ ಬಗ್ಗೆ ಏನು ಹೇಳುತ್ತೀರಿ? ದೆಹಲಿಯಲ್ಲಿ ಮಾಲಿನ್ಯವನ್ನು ನಿಯಂತ್ರಿಸಲು ನೀವು ಏನು ಮಾಡುತ್ತಿದ್ದೀರಿ? ನೀವೇ ಹೇಳಿ? ನಿಮ್ಮ ಸರಿಯಾದ ಯೋಜನೆ ಏನು? ಕೇವಲ 2-3 ದಿನಗಳು ವಿಚಾರ ಅಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಪ್ರೋತ್ಸಾಹಧನ ಸಿಗದಿದ್ದರೆ ಅವರು ಹೇಗೆ ತಾನೇ ಬದಲಾಗುತ್ತಾರೆ? ಅವರಿಗೆ ಸಿಗುವ ಒಂದಷ್ಟು ಸಬ್ಸಿಡಿಯ ಹೊರತಾಗಿಯೂ, ಅನೇಕ ರೈತರಿಗೆ ಹುಲ್ಲು ಸುಡುವ ಯಂತ್ರಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. “ರೈತರನ್ನು ದೂಷಿಸುವುದು ಎಲ್ಲರಿಗೂ ಫ್ಯಾಶನ್ ಆಗಿದೆ. ನೀವು ಪಟಾಕಿಯನ್ನು ನಿಷೇಧಿಸಿದ್ದೀರಿ ಆದರೆ ಕಳೆದ 5-6 ದಿನಗಳಿಂದ ಏನಾಗುತ್ತಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಶ್ನಿಸಿದ್ದಾರೆ.

ಕೇಂದ್ರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ನಾವು ರೈತರನ್ನು ಮಾತ್ರ ದೂಷಿಸುತ್ತಿಲ್ಲ, ನಾವು ಅದನ್ನು ಎಂದಿಗೂ ಹೇಳಲಿಲ್ಲ” ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿ: 25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...