Homeಮುಖಪುಟದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? - ಸುಪ್ರೀಂ ಪ್ರಶ್ನೆ

ದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? – ಸುಪ್ರೀಂ ಪ್ರಶ್ನೆ

ರೈತರಿಂದಲೇ ಮಾಲಿನ್ಯವಾಗಿದೆ ಎಂದು ಏಕೆ ಬಿಂಬಿಸುತ್ತಿದ್ದೀರಿ? ರೈತರನ್ನು ದೂಷಿಸುವುದು ಎಲ್ಲರಿಗೂ ಫ್ಯಾಶನ್ ಆಗಿದೆ ಎಂದು ಕೋರ್ಟ್ ಕೇಂದ್ರದ ವಿರುದ್ಧ ಕಿಡಿಕಾರಿದೆ.

- Advertisement -
- Advertisement -

ಕಳೆದೊಂದು ವಾರದಿಂದ ದೆಹಲಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಹೊಗೆ ತುಂಬಿಕೊಂಡಿದ್ದು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಗಾಳಿಯ ಗುಣಮಟ್ಟ ಸೂಚ್ಯಂಕವು ತೀರಾ ಕೆಳಕ್ಕಿಳಿದಿರುವುದರಿಂದ ಇದನ್ನು ಸರಿಪಡಿಸಲು ಏನು ಕ್ರಮ ಕೈಗೊಂಡಿರುವಿರಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಯಾವ ತುರ್ತು ಯೋಜನೆಗಳನ್ನು – ಕ್ರಮಗಳನ್ನು ಕೈಗೊಂಡಿರುವಿರಿ ತಿಳಿಸಿ. 2 ದಿನ ಲಾಕ್‌ಡೌನ್ ಮಾಡುವಿರಾ? ಗಾಳಿಯ ಗುಣಮಟ್ಟವನ್ನು ಉತ್ತಮಗೊಳಿಸಲು ನಿಮ್ಮ ಯೋಜನೆಯೇನು ಎಂದು ಸಿಜೆಐ ರಮಣ ಪ್ರಶ್ನಿಸಿದ್ದಾರೆ.

ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂಬುದು ನಿಮಗೆ ತಿಳಿದಿದೆಯೇ? ನಾವು ಮನೆಯಲ್ಲಿಯೂ ಮಾಸ್ಕ್ ಧರಿಸಬೇಕಾಗ ಪರಿಸ್ಥಿತಿ ಬಂದಿದೆ. ಇದು ರಾಜ್ಯಗಳ ಜವಾಬ್ದಾರಿ, ಇಲ್ಲ ಕೇಂದ್ರ ಜವಾಬ್ದಾರಿ ಎಂದು ನುಣಚಿಕೊಳ್ಳುವ ಸಂದರ್ಭದ ಇದ್ಲ. ಕೂಡಲೇ ಪಂಜಾಬ್ ಹರಿಯಾಣ ರಾಜ್ಯಗಳೊಂದಿಗೆ ತುರ್ತು ಸಭೆ ನಡೆಸಿ. ಮುಂದಿನ ಎರಡು ಮೂರು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಿ ಎಂದು ನಮಗೆ ಅನ್ನಿಸುವ ರೀತಿ ಕ್ರಮ ಕೈಗೊಳ್ಳಿ ಎಂದು ರಮಣ ಸೂಚಿಸಿದ್ದಾರೆ.

ಶುಕ್ರವಾರದ ದೆಹಲಿಯ ಪರಿಸ್ಥಿತಿ ಈ ಅವಧಿಯಲ್ಲಿಯೇ ಅತಿ ಕೆಟ್ಟ ಪರಿಸ್ಥಿತಿ ತಲುಪಿತ್ತು. ಪರಿಸ್ಥಿತಿ ಗಂಭೀರತೆ ನಮಗೆ ಅರ್ಥವಾಗಿದೆ. ದೆಹಲಿಯ ಗಾಳಿಯನ್ನು ಉಸಿರಾಡುವುದು ದಿನಕ್ಕೆ 20 ಸಿಗರೇಟ್ ಸೇದುವಂತೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಕವು ಜನರು ಮನೆಯಲ್ಲಿಯೇ ಇರುವಂತೆ ಸೂಚಿಸಿದೆ.

ಕೃಷಿ ತ್ಯಾಜ್ಯವನ್ನು ಸುಡದಂತೆ ತಡೆಯುವುದು ಸದ್ಯದ ವಾಯುಮಾಲಿನ್ಯವನ್ನು ತಡೆಯುವ ಪ್ರಮುಖ ಹೆಜ್ಜೆಯಾಗಿದ್ದು ಇದರತ್ತ ಗಮನ ಹರಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನಾವು ಹುಲ್ಲು ಸುಡುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಆದರೆ ಕಳೆದ ಐದಾರು ದಿನಗಳಲ್ಲಿ ಪಂಜಾಬ್‌ನಲ್ಲಿ ಉರಿಯುತ್ತಿರುವ ಕೃಷಿ ತ್ಯಾಜ್ಯದ ಕಾರಣದಿಂದಾಗಿ ಮಾಲಿನ್ಯ ಹೆಚ್ಚಾಗಿದೆ, ಹಾಗಾಗಿ ಪಂಜಾಬ್ ರಾಜ್ಯವು ಅದನ್ನು ತಡೆಯಬೇಕೆಂದು ಕೇಂದ್ರವು ಪಂಜಾಬ್‌ ಮೇಲೆ ಹೊಣೆ ಹೊರಿಸಿದೆ.

ಇದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿಗಳು, “ರೈತರಿಂದಲೇ ಮಾಲಿನ್ಯವಾಗಿದೆ ಎಂದು ಏಕೆ ಬಿಂಬಿಸುತ್ತಿದ್ದೀರಿ? ಅವರಿಂದ ಒಂದಷ್ಟು ಮಾಲಿನ್ಯವಾಗಿದೆ. ಆದರೆ ಉಳಿದ ಮಾಲಿನ್ಯದ ಬಗ್ಗೆ ಏನು ಹೇಳುತ್ತೀರಿ? ದೆಹಲಿಯಲ್ಲಿ ಮಾಲಿನ್ಯವನ್ನು ನಿಯಂತ್ರಿಸಲು ನೀವು ಏನು ಮಾಡುತ್ತಿದ್ದೀರಿ? ನೀವೇ ಹೇಳಿ? ನಿಮ್ಮ ಸರಿಯಾದ ಯೋಜನೆ ಏನು? ಕೇವಲ 2-3 ದಿನಗಳು ವಿಚಾರ ಅಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಪ್ರೋತ್ಸಾಹಧನ ಸಿಗದಿದ್ದರೆ ಅವರು ಹೇಗೆ ತಾನೇ ಬದಲಾಗುತ್ತಾರೆ? ಅವರಿಗೆ ಸಿಗುವ ಒಂದಷ್ಟು ಸಬ್ಸಿಡಿಯ ಹೊರತಾಗಿಯೂ, ಅನೇಕ ರೈತರಿಗೆ ಹುಲ್ಲು ಸುಡುವ ಯಂತ್ರಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. “ರೈತರನ್ನು ದೂಷಿಸುವುದು ಎಲ್ಲರಿಗೂ ಫ್ಯಾಶನ್ ಆಗಿದೆ. ನೀವು ಪಟಾಕಿಯನ್ನು ನಿಷೇಧಿಸಿದ್ದೀರಿ ಆದರೆ ಕಳೆದ 5-6 ದಿನಗಳಿಂದ ಏನಾಗುತ್ತಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಶ್ನಿಸಿದ್ದಾರೆ.

ಕೇಂದ್ರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ನಾವು ರೈತರನ್ನು ಮಾತ್ರ ದೂಷಿಸುತ್ತಿಲ್ಲ, ನಾವು ಅದನ್ನು ಎಂದಿಗೂ ಹೇಳಲಿಲ್ಲ” ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿ: 25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...