Homeಮುಖಪುಟದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? - ಸುಪ್ರೀಂ ಪ್ರಶ್ನೆ

ದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? – ಸುಪ್ರೀಂ ಪ್ರಶ್ನೆ

ರೈತರಿಂದಲೇ ಮಾಲಿನ್ಯವಾಗಿದೆ ಎಂದು ಏಕೆ ಬಿಂಬಿಸುತ್ತಿದ್ದೀರಿ? ರೈತರನ್ನು ದೂಷಿಸುವುದು ಎಲ್ಲರಿಗೂ ಫ್ಯಾಶನ್ ಆಗಿದೆ ಎಂದು ಕೋರ್ಟ್ ಕೇಂದ್ರದ ವಿರುದ್ಧ ಕಿಡಿಕಾರಿದೆ.

- Advertisement -
- Advertisement -

ಕಳೆದೊಂದು ವಾರದಿಂದ ದೆಹಲಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಹೊಗೆ ತುಂಬಿಕೊಂಡಿದ್ದು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಗಾಳಿಯ ಗುಣಮಟ್ಟ ಸೂಚ್ಯಂಕವು ತೀರಾ ಕೆಳಕ್ಕಿಳಿದಿರುವುದರಿಂದ ಇದನ್ನು ಸರಿಪಡಿಸಲು ಏನು ಕ್ರಮ ಕೈಗೊಂಡಿರುವಿರಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಯಾವ ತುರ್ತು ಯೋಜನೆಗಳನ್ನು – ಕ್ರಮಗಳನ್ನು ಕೈಗೊಂಡಿರುವಿರಿ ತಿಳಿಸಿ. 2 ದಿನ ಲಾಕ್‌ಡೌನ್ ಮಾಡುವಿರಾ? ಗಾಳಿಯ ಗುಣಮಟ್ಟವನ್ನು ಉತ್ತಮಗೊಳಿಸಲು ನಿಮ್ಮ ಯೋಜನೆಯೇನು ಎಂದು ಸಿಜೆಐ ರಮಣ ಪ್ರಶ್ನಿಸಿದ್ದಾರೆ.

ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂಬುದು ನಿಮಗೆ ತಿಳಿದಿದೆಯೇ? ನಾವು ಮನೆಯಲ್ಲಿಯೂ ಮಾಸ್ಕ್ ಧರಿಸಬೇಕಾಗ ಪರಿಸ್ಥಿತಿ ಬಂದಿದೆ. ಇದು ರಾಜ್ಯಗಳ ಜವಾಬ್ದಾರಿ, ಇಲ್ಲ ಕೇಂದ್ರ ಜವಾಬ್ದಾರಿ ಎಂದು ನುಣಚಿಕೊಳ್ಳುವ ಸಂದರ್ಭದ ಇದ್ಲ. ಕೂಡಲೇ ಪಂಜಾಬ್ ಹರಿಯಾಣ ರಾಜ್ಯಗಳೊಂದಿಗೆ ತುರ್ತು ಸಭೆ ನಡೆಸಿ. ಮುಂದಿನ ಎರಡು ಮೂರು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಿ ಎಂದು ನಮಗೆ ಅನ್ನಿಸುವ ರೀತಿ ಕ್ರಮ ಕೈಗೊಳ್ಳಿ ಎಂದು ರಮಣ ಸೂಚಿಸಿದ್ದಾರೆ.

ಶುಕ್ರವಾರದ ದೆಹಲಿಯ ಪರಿಸ್ಥಿತಿ ಈ ಅವಧಿಯಲ್ಲಿಯೇ ಅತಿ ಕೆಟ್ಟ ಪರಿಸ್ಥಿತಿ ತಲುಪಿತ್ತು. ಪರಿಸ್ಥಿತಿ ಗಂಭೀರತೆ ನಮಗೆ ಅರ್ಥವಾಗಿದೆ. ದೆಹಲಿಯ ಗಾಳಿಯನ್ನು ಉಸಿರಾಡುವುದು ದಿನಕ್ಕೆ 20 ಸಿಗರೇಟ್ ಸೇದುವಂತೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಕವು ಜನರು ಮನೆಯಲ್ಲಿಯೇ ಇರುವಂತೆ ಸೂಚಿಸಿದೆ.

ಕೃಷಿ ತ್ಯಾಜ್ಯವನ್ನು ಸುಡದಂತೆ ತಡೆಯುವುದು ಸದ್ಯದ ವಾಯುಮಾಲಿನ್ಯವನ್ನು ತಡೆಯುವ ಪ್ರಮುಖ ಹೆಜ್ಜೆಯಾಗಿದ್ದು ಇದರತ್ತ ಗಮನ ಹರಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನಾವು ಹುಲ್ಲು ಸುಡುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಆದರೆ ಕಳೆದ ಐದಾರು ದಿನಗಳಲ್ಲಿ ಪಂಜಾಬ್‌ನಲ್ಲಿ ಉರಿಯುತ್ತಿರುವ ಕೃಷಿ ತ್ಯಾಜ್ಯದ ಕಾರಣದಿಂದಾಗಿ ಮಾಲಿನ್ಯ ಹೆಚ್ಚಾಗಿದೆ, ಹಾಗಾಗಿ ಪಂಜಾಬ್ ರಾಜ್ಯವು ಅದನ್ನು ತಡೆಯಬೇಕೆಂದು ಕೇಂದ್ರವು ಪಂಜಾಬ್‌ ಮೇಲೆ ಹೊಣೆ ಹೊರಿಸಿದೆ.

ಇದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿಗಳು, “ರೈತರಿಂದಲೇ ಮಾಲಿನ್ಯವಾಗಿದೆ ಎಂದು ಏಕೆ ಬಿಂಬಿಸುತ್ತಿದ್ದೀರಿ? ಅವರಿಂದ ಒಂದಷ್ಟು ಮಾಲಿನ್ಯವಾಗಿದೆ. ಆದರೆ ಉಳಿದ ಮಾಲಿನ್ಯದ ಬಗ್ಗೆ ಏನು ಹೇಳುತ್ತೀರಿ? ದೆಹಲಿಯಲ್ಲಿ ಮಾಲಿನ್ಯವನ್ನು ನಿಯಂತ್ರಿಸಲು ನೀವು ಏನು ಮಾಡುತ್ತಿದ್ದೀರಿ? ನೀವೇ ಹೇಳಿ? ನಿಮ್ಮ ಸರಿಯಾದ ಯೋಜನೆ ಏನು? ಕೇವಲ 2-3 ದಿನಗಳು ವಿಚಾರ ಅಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಪ್ರೋತ್ಸಾಹಧನ ಸಿಗದಿದ್ದರೆ ಅವರು ಹೇಗೆ ತಾನೇ ಬದಲಾಗುತ್ತಾರೆ? ಅವರಿಗೆ ಸಿಗುವ ಒಂದಷ್ಟು ಸಬ್ಸಿಡಿಯ ಹೊರತಾಗಿಯೂ, ಅನೇಕ ರೈತರಿಗೆ ಹುಲ್ಲು ಸುಡುವ ಯಂತ್ರಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. “ರೈತರನ್ನು ದೂಷಿಸುವುದು ಎಲ್ಲರಿಗೂ ಫ್ಯಾಶನ್ ಆಗಿದೆ. ನೀವು ಪಟಾಕಿಯನ್ನು ನಿಷೇಧಿಸಿದ್ದೀರಿ ಆದರೆ ಕಳೆದ 5-6 ದಿನಗಳಿಂದ ಏನಾಗುತ್ತಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಶ್ನಿಸಿದ್ದಾರೆ.

ಕೇಂದ್ರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ನಾವು ರೈತರನ್ನು ಮಾತ್ರ ದೂಷಿಸುತ್ತಿಲ್ಲ, ನಾವು ಅದನ್ನು ಎಂದಿಗೂ ಹೇಳಲಿಲ್ಲ” ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿ: 25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...