Homeಮುಖಪುಟವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಶ್ವಾನಗಳಿಗೆ ದಯಾಮರಣ ವಿಧಿಸುವ ತೀರ್ಮಾನ

- Advertisement -
- Advertisement -

ನಾಯಿ ಮನುಷ್ಯನ ಆದಿ ಕಾಲದ ಸಂಗಾತಿ. ಜಗತ್ತಿನಲ್ಲಿ ನಾಯಿಗಳನ್ನು ಸಾಕದ ದೇಶಗಳು, ಜನರು ಅತ್ಯಂತ ವಿರಳ. ನಾಗರಿಕ ಸಮಾಜದಲ್ಲಿ ಅವಕ್ಕೊಂದು ವಿಶೇಷ ಸ್ಥಾನಮಾನ ಇದೆ. ಸಾಕು ನಾಯಿಗಳೆಂದರೆ ಎಲ್ಲರಿಗೂ ಇ‍‍‍‍‍‍ಷ್ಟ. ಮನೆಯ ಮಕ್ಕಳಿಗಿಂತಲೂ ಹೆಚ್ಚಿನ ಪ್ರೀತಿಯನ್ನು, ಕಾಳಜಿಯನ್ನು ಅನೇಕರು ತಮ್ಮ ಮುದ್ದಿನ ನಾಯಿಗಳಿಗೆ ತೋರಿಸುತ್ತಾರೆ. ತಿಂಗಳಿಗೆ ಸಾವಿರಾರು ರೂಪಾಯಿಗಳನ್ನು ಅವುಗಳ ಪೋಷಣೆ, ಆರೈಕೆಗೆ ವೆಚ್ಚ ಮಾಡುತ್ತಾರೆ. ದುಬಾರಿ ಬೆಲೆಯ ನಾಯಿ ಸಾಕುವುದು ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿ  ಮಾರ್ಪಟ್ಟಿದೆ. ‍‍‍‍‍‍‍‍

ಕೆಲವೊಮ್ಮೆ ಸಾಕು ನಾಯಿಗಳು ಮನುಷ್ಯನ ಮೇಲೆ ದಾಳಿ ಮಾಡಿದ ಘಟನೆಗಳು ನಡೆದಿವೆ. ಹೆಚ್ಚಾಗಿ ತನ್ನ ಒಡೆಯನ ಸುತ್ತ ಮುತ್ತ ಓಡಾಡುವ ಇವು ಅಪರೂಪಕ್ಕೆ ಮನುಷ್ಯನ ಮೇಲೆ ಎರಗುತ್ತವೆ. ಎರಡು ನಾಯಿಗಳು ಹಿರಿಯ ವಕೀಲರಿಗೆ ಕಚ್ಚಿ ತಮ್ಮ ಮಾಲಿಕನನ್ನು ಪೇಚಿಗೆ ಸಿಲುಕಿಸಿದ ಘಟನೆ ನಡೆದಿದೆ. ನಾಯಿ ಕಚ್ಚಿದ್ದಕ್ಕೆ ವಕೀಲರು ಸುಮ್ಮನೆ ಬಿಡಲಿಲ್ಲ ಮಾಲೀಕರನ್ನು ನ್ಯಾಯಾಲಯಕ್ಕೆ ಎಳೆದಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ಘಟನೆ ಇದು. ವಾಕಿಂಗ್ ವೇಳೆ ಹಿರಿಯ ವಕೀಲರ ಮೇಲೆ ಶ್ವಾನಗಳು ದಾಳಿ ಮಾಡಿದ್ದ ಈ ಘಟನೆ ಈಗ ಶ್ವಾನಗಳ `ಮರಣ ದಂಡನೆ’ ಶಿಕ್ಷೆಯ ತನಕ ಮುಟ್ಟಿದೆ. ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಇಂತಹದ್ದೊಂದು ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ: ಪಂಜಾಬ್‌: ನಾಯಿಯನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದ ಮಹಿಳೆ – ಪ್ರಕರಣ ದಾಖಲು

 ಕಳೆದ ತಿಂಗಳು ನಡೆದ ಘಟನೆ ಇದು. ಕರಾಚಿಯ ಡಿಫೆನ್ಸ್‌ ಹೌಸಿಂಗ್ ಅಥಾರಿಟಿ ಪ್ರದೇಶದಲ್ಲಿ ಬೆಳಗ್ಗಿನ ತನ್ನ ದೈನಂದಿನ ವಾಕ್‌ ವೇಳೆ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಅವರ ಮೇಲೆ ಅದೇ ಪ್ರದೇಶದ ನಿವಾಸಿ ಹುಮಾಯುನ್ ಖಾನ್ ಅವರ ಎರಡು ಶ್ವಾನಗಳು ದಾಳಿ ಮಾಡಿದ್ದವು. ಅಖ್ತರ್ ಅಲಿ ಅವರ ಮೇಲೆ ದಾಳಿ ಮಾಡಿದ್ದ ಶ್ವಾನಗಳು ಬಳಿಕ ಇವರನ್ನು ನೆಲಕ್ಕುರುಳಿಸಿದ್ದವು. ಇದರಿಂದ ಇವರಿಗೆ ತೀವ್ರ ಗಾಯಗಳಾಗಿತ್ತು.

ಈ ದೃಶ್ಯ ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಜೊತೆಗೆ, ಇದು ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿಯೂ ಹರಿದಾಡಿತ್ತು. ಅಲ್ಲದೆ, ಇದು ಬಹುತೇಕ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷ ತಳಿಗಳ ಶ್ವಾನಗಳನ್ನು ಯಾವುದೇ ಸೂಕ್ತ ತರಬೇತಿ ಇಲ್ಲದೆ ಜನವಸತಿ ಪ್ರದೇಶಗಳಲ್ಲಿ ಇಟ್ಟುಕೊಳ್ಳುವ ಮಾಲಿಕರ ಅಭ್ಯಾಸವನ್ನು ಹಲವರು ಟೀಕಿಸಿದ್ದರು.

ಶ್ವಾನಗಳ ದಾಳಿಯಿಂದ ಮಿರ್ಜಾ ಅಖ್ತರ್ ಅವರು ಸಾಕಷ್ಟು ಗಾಯಗೊಳಗಾಗಿದ್ದರು. ಜೊತೆಗೆ ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುವ ನಿರ್ಧಾರಕ್ಕೂ ಇವರು ಬಂದಿದ್ದರು. ಆದರೆ, ಇದಾದ ಬಳಿಕ ಮನಸ್ಸು ಬದಲಾಯಿಸಿದ ಅಖ್ತರ್ ನ್ಯಾಯಾಲಯದ ಆಚೆಗೆ ಸಂಧಾನದ ಮೂಲಕ ಇದನ್ನು ಪರಿಹರಿಸಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದರು. ಜೊತೆಗೆ, ಕೆಲ ಷರತ್ತುಗಳೊಂದಿಗೆ ಶ್ವಾನಗಳ ಮಾಲಿಕ ಹುಮಾಯುನ್‌ರನ್ನು ಕ್ಷಮಿಸುವುದಾಗಿ ಇವರು ಹೇಳಿದ್ದರು.

ಬೇಷರತ್ತಾಗಿ ಕ್ಷಮೆಯಾಚಿಸುವುದು, ಹುಮಾಯುನ್ ಮತ್ತು ಕುಟುಂಬ ಇನ್ನು ಮುಂದೆ ತಮ್ಮ ಮನೆಯಲ್ಲಿ ಯಾವುದೇ ಅಪಾಯಕಾರಿ ಶ್ವಾನಗಳನ್ನು ಇಟ್ಟಕೊಳ್ಳದೇ ಇರುವುದು, ದಾಳಿ ಮಾಡಿದ ಎರಡು ಶ್ವಾನಗಳಿಗೆ ತಕ್ಷಣ ಪಶುವೈದ್ಯರ ಮೂಲಕ ದಯಾಮರಣ ನೀಡುವುದು, ಹುಮಾಯುನ್ ಹೊಂದಿರುವ ಇತರ ಅಪಾಯಕಾರಿ ಶ್ವಾನಗಳನ್ನು ಆಶ್ರಯ ಕೇಂದ್ರಕ್ಕೆ ಬಿಡುವುದು. ಜೊತೆಗೆ, ಇತರ ಯಾವುದೇ ಶ್ವಾನಗಳು ಮನೆಯಲ್ಲಿ ಇದ್ದರೂ ಅವುಗಳನ್ನು ಕ್ಲಿಫ್ಟನ್ ಕಂಟೋನ್ಮೆಂಟ್ ಬೋರ್ಡ್ (ಸಿಬಿಸಿ)ನಲ್ಲಿ ನೋಂದಾಯಿಸಬೇಕು ಎಂಬ ಷರತ್ತಿನೊಂದಿಗೆ ಈ ಪ್ರಕರಣವನ್ನು ಇವರಿಬ್ಬರೇ ಇತ್ಯರ್ಥ ಮಾಡಿಕೊಂಡಿದ್ದಾರೆ.

ವ್ಯಗ್ರವಾದ ನಾಯಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದೆ. ನಿಜಕ್ಕೂ ಮನುಷ್ಯನ ತರಬೇತಿಯಿಂದ ನಾಯಿಗಳು ಸೌಮ್ಯವಾಗಿ ವರ್ತಿಸುತ್ತವೆಯೇ ? ಮೂಲದಲ್ಲಿ ಅವಕ್ಕೆ ಮಾಲಿಕನ ನಿರ್ದೇಶನ ಅರ್ಥ ಮಾಡಿಕೊಂಡು ಪಾಲಿಸುವ ಸಾಮರ್ಥ್ಯ ಇದೆಯೇ ಇಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಭಾರತದಲ್ಲಿ ಶ್ವಾನಗಳು ಮಾಡಿದ ಎಡವಟ್ಟಿಗೆ ಮಾಲಿಕರನ್ನು ಶಿಕ್ಷೆಗೆ ಗುರಿ ಪಡಿಸಿದ ಅನೇಕ ನಿರ್ದಶನಗಳು ಇವೆ. ಕೆಲವೊಮ್ಮೆ ಉಗ್ರ ಸ್ವರೂಪಿ ಶ್ವಾನಗಳನ್ನು ಸಮಾಜದಿಂದ ಬೇರ್ಪಡಿಸಿದ ಮತ್ತು ಸಾಯಿಸಿದ ಉದಾಹರಣೆಗಳು ಇವೆ. ಒಟ್ಟಿನಲ್ಲಿ ಈ ಘಟನೆ ಶ್ವಾನ ಪ್ರಿಯರಿಗೆ ಮತ್ತು ಮಾಲಿಕರಿಗೆ ಒಂದು ಎಚ್ಚರಿಕೆಯಾಗಿದ್ದು ತಮ್ಮ ಸಾಕು ಪ್ರಾಣಿಗಳನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲು ಮಾರ್ಗದರ್ಶನವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...