Homeಮುಖಪುಟವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಶ್ವಾನಗಳಿಗೆ ದಯಾಮರಣ ವಿಧಿಸುವ ತೀರ್ಮಾನ

- Advertisement -
- Advertisement -

ನಾಯಿ ಮನುಷ್ಯನ ಆದಿ ಕಾಲದ ಸಂಗಾತಿ. ಜಗತ್ತಿನಲ್ಲಿ ನಾಯಿಗಳನ್ನು ಸಾಕದ ದೇಶಗಳು, ಜನರು ಅತ್ಯಂತ ವಿರಳ. ನಾಗರಿಕ ಸಮಾಜದಲ್ಲಿ ಅವಕ್ಕೊಂದು ವಿಶೇಷ ಸ್ಥಾನಮಾನ ಇದೆ. ಸಾಕು ನಾಯಿಗಳೆಂದರೆ ಎಲ್ಲರಿಗೂ ಇ‍‍‍‍‍‍ಷ್ಟ. ಮನೆಯ ಮಕ್ಕಳಿಗಿಂತಲೂ ಹೆಚ್ಚಿನ ಪ್ರೀತಿಯನ್ನು, ಕಾಳಜಿಯನ್ನು ಅನೇಕರು ತಮ್ಮ ಮುದ್ದಿನ ನಾಯಿಗಳಿಗೆ ತೋರಿಸುತ್ತಾರೆ. ತಿಂಗಳಿಗೆ ಸಾವಿರಾರು ರೂಪಾಯಿಗಳನ್ನು ಅವುಗಳ ಪೋಷಣೆ, ಆರೈಕೆಗೆ ವೆಚ್ಚ ಮಾಡುತ್ತಾರೆ. ದುಬಾರಿ ಬೆಲೆಯ ನಾಯಿ ಸಾಕುವುದು ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿ  ಮಾರ್ಪಟ್ಟಿದೆ. ‍‍‍‍‍‍‍‍

ಕೆಲವೊಮ್ಮೆ ಸಾಕು ನಾಯಿಗಳು ಮನುಷ್ಯನ ಮೇಲೆ ದಾಳಿ ಮಾಡಿದ ಘಟನೆಗಳು ನಡೆದಿವೆ. ಹೆಚ್ಚಾಗಿ ತನ್ನ ಒಡೆಯನ ಸುತ್ತ ಮುತ್ತ ಓಡಾಡುವ ಇವು ಅಪರೂಪಕ್ಕೆ ಮನುಷ್ಯನ ಮೇಲೆ ಎರಗುತ್ತವೆ. ಎರಡು ನಾಯಿಗಳು ಹಿರಿಯ ವಕೀಲರಿಗೆ ಕಚ್ಚಿ ತಮ್ಮ ಮಾಲಿಕನನ್ನು ಪೇಚಿಗೆ ಸಿಲುಕಿಸಿದ ಘಟನೆ ನಡೆದಿದೆ. ನಾಯಿ ಕಚ್ಚಿದ್ದಕ್ಕೆ ವಕೀಲರು ಸುಮ್ಮನೆ ಬಿಡಲಿಲ್ಲ ಮಾಲೀಕರನ್ನು ನ್ಯಾಯಾಲಯಕ್ಕೆ ಎಳೆದಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ಘಟನೆ ಇದು. ವಾಕಿಂಗ್ ವೇಳೆ ಹಿರಿಯ ವಕೀಲರ ಮೇಲೆ ಶ್ವಾನಗಳು ದಾಳಿ ಮಾಡಿದ್ದ ಈ ಘಟನೆ ಈಗ ಶ್ವಾನಗಳ `ಮರಣ ದಂಡನೆ’ ಶಿಕ್ಷೆಯ ತನಕ ಮುಟ್ಟಿದೆ. ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಇಂತಹದ್ದೊಂದು ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ: ಪಂಜಾಬ್‌: ನಾಯಿಯನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದ ಮಹಿಳೆ – ಪ್ರಕರಣ ದಾಖಲು

 ಕಳೆದ ತಿಂಗಳು ನಡೆದ ಘಟನೆ ಇದು. ಕರಾಚಿಯ ಡಿಫೆನ್ಸ್‌ ಹೌಸಿಂಗ್ ಅಥಾರಿಟಿ ಪ್ರದೇಶದಲ್ಲಿ ಬೆಳಗ್ಗಿನ ತನ್ನ ದೈನಂದಿನ ವಾಕ್‌ ವೇಳೆ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಅವರ ಮೇಲೆ ಅದೇ ಪ್ರದೇಶದ ನಿವಾಸಿ ಹುಮಾಯುನ್ ಖಾನ್ ಅವರ ಎರಡು ಶ್ವಾನಗಳು ದಾಳಿ ಮಾಡಿದ್ದವು. ಅಖ್ತರ್ ಅಲಿ ಅವರ ಮೇಲೆ ದಾಳಿ ಮಾಡಿದ್ದ ಶ್ವಾನಗಳು ಬಳಿಕ ಇವರನ್ನು ನೆಲಕ್ಕುರುಳಿಸಿದ್ದವು. ಇದರಿಂದ ಇವರಿಗೆ ತೀವ್ರ ಗಾಯಗಳಾಗಿತ್ತು.

ಈ ದೃಶ್ಯ ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಜೊತೆಗೆ, ಇದು ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿಯೂ ಹರಿದಾಡಿತ್ತು. ಅಲ್ಲದೆ, ಇದು ಬಹುತೇಕ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷ ತಳಿಗಳ ಶ್ವಾನಗಳನ್ನು ಯಾವುದೇ ಸೂಕ್ತ ತರಬೇತಿ ಇಲ್ಲದೆ ಜನವಸತಿ ಪ್ರದೇಶಗಳಲ್ಲಿ ಇಟ್ಟುಕೊಳ್ಳುವ ಮಾಲಿಕರ ಅಭ್ಯಾಸವನ್ನು ಹಲವರು ಟೀಕಿಸಿದ್ದರು.

ಶ್ವಾನಗಳ ದಾಳಿಯಿಂದ ಮಿರ್ಜಾ ಅಖ್ತರ್ ಅವರು ಸಾಕಷ್ಟು ಗಾಯಗೊಳಗಾಗಿದ್ದರು. ಜೊತೆಗೆ ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುವ ನಿರ್ಧಾರಕ್ಕೂ ಇವರು ಬಂದಿದ್ದರು. ಆದರೆ, ಇದಾದ ಬಳಿಕ ಮನಸ್ಸು ಬದಲಾಯಿಸಿದ ಅಖ್ತರ್ ನ್ಯಾಯಾಲಯದ ಆಚೆಗೆ ಸಂಧಾನದ ಮೂಲಕ ಇದನ್ನು ಪರಿಹರಿಸಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದರು. ಜೊತೆಗೆ, ಕೆಲ ಷರತ್ತುಗಳೊಂದಿಗೆ ಶ್ವಾನಗಳ ಮಾಲಿಕ ಹುಮಾಯುನ್‌ರನ್ನು ಕ್ಷಮಿಸುವುದಾಗಿ ಇವರು ಹೇಳಿದ್ದರು.

ಬೇಷರತ್ತಾಗಿ ಕ್ಷಮೆಯಾಚಿಸುವುದು, ಹುಮಾಯುನ್ ಮತ್ತು ಕುಟುಂಬ ಇನ್ನು ಮುಂದೆ ತಮ್ಮ ಮನೆಯಲ್ಲಿ ಯಾವುದೇ ಅಪಾಯಕಾರಿ ಶ್ವಾನಗಳನ್ನು ಇಟ್ಟಕೊಳ್ಳದೇ ಇರುವುದು, ದಾಳಿ ಮಾಡಿದ ಎರಡು ಶ್ವಾನಗಳಿಗೆ ತಕ್ಷಣ ಪಶುವೈದ್ಯರ ಮೂಲಕ ದಯಾಮರಣ ನೀಡುವುದು, ಹುಮಾಯುನ್ ಹೊಂದಿರುವ ಇತರ ಅಪಾಯಕಾರಿ ಶ್ವಾನಗಳನ್ನು ಆಶ್ರಯ ಕೇಂದ್ರಕ್ಕೆ ಬಿಡುವುದು. ಜೊತೆಗೆ, ಇತರ ಯಾವುದೇ ಶ್ವಾನಗಳು ಮನೆಯಲ್ಲಿ ಇದ್ದರೂ ಅವುಗಳನ್ನು ಕ್ಲಿಫ್ಟನ್ ಕಂಟೋನ್ಮೆಂಟ್ ಬೋರ್ಡ್ (ಸಿಬಿಸಿ)ನಲ್ಲಿ ನೋಂದಾಯಿಸಬೇಕು ಎಂಬ ಷರತ್ತಿನೊಂದಿಗೆ ಈ ಪ್ರಕರಣವನ್ನು ಇವರಿಬ್ಬರೇ ಇತ್ಯರ್ಥ ಮಾಡಿಕೊಂಡಿದ್ದಾರೆ.

ವ್ಯಗ್ರವಾದ ನಾಯಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದೆ. ನಿಜಕ್ಕೂ ಮನುಷ್ಯನ ತರಬೇತಿಯಿಂದ ನಾಯಿಗಳು ಸೌಮ್ಯವಾಗಿ ವರ್ತಿಸುತ್ತವೆಯೇ ? ಮೂಲದಲ್ಲಿ ಅವಕ್ಕೆ ಮಾಲಿಕನ ನಿರ್ದೇಶನ ಅರ್ಥ ಮಾಡಿಕೊಂಡು ಪಾಲಿಸುವ ಸಾಮರ್ಥ್ಯ ಇದೆಯೇ ಇಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಭಾರತದಲ್ಲಿ ಶ್ವಾನಗಳು ಮಾಡಿದ ಎಡವಟ್ಟಿಗೆ ಮಾಲಿಕರನ್ನು ಶಿಕ್ಷೆಗೆ ಗುರಿ ಪಡಿಸಿದ ಅನೇಕ ನಿರ್ದಶನಗಳು ಇವೆ. ಕೆಲವೊಮ್ಮೆ ಉಗ್ರ ಸ್ವರೂಪಿ ಶ್ವಾನಗಳನ್ನು ಸಮಾಜದಿಂದ ಬೇರ್ಪಡಿಸಿದ ಮತ್ತು ಸಾಯಿಸಿದ ಉದಾಹರಣೆಗಳು ಇವೆ. ಒಟ್ಟಿನಲ್ಲಿ ಈ ಘಟನೆ ಶ್ವಾನ ಪ್ರಿಯರಿಗೆ ಮತ್ತು ಮಾಲಿಕರಿಗೆ ಒಂದು ಎಚ್ಚರಿಕೆಯಾಗಿದ್ದು ತಮ್ಮ ಸಾಕು ಪ್ರಾಣಿಗಳನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲು ಮಾರ್ಗದರ್ಶನವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...