Homeಮುಖಪುಟವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಶ್ವಾನಗಳಿಗೆ ದಯಾಮರಣ ವಿಧಿಸುವ ತೀರ್ಮಾನ

- Advertisement -
- Advertisement -

ನಾಯಿ ಮನುಷ್ಯನ ಆದಿ ಕಾಲದ ಸಂಗಾತಿ. ಜಗತ್ತಿನಲ್ಲಿ ನಾಯಿಗಳನ್ನು ಸಾಕದ ದೇಶಗಳು, ಜನರು ಅತ್ಯಂತ ವಿರಳ. ನಾಗರಿಕ ಸಮಾಜದಲ್ಲಿ ಅವಕ್ಕೊಂದು ವಿಶೇಷ ಸ್ಥಾನಮಾನ ಇದೆ. ಸಾಕು ನಾಯಿಗಳೆಂದರೆ ಎಲ್ಲರಿಗೂ ಇ‍‍‍‍‍‍ಷ್ಟ. ಮನೆಯ ಮಕ್ಕಳಿಗಿಂತಲೂ ಹೆಚ್ಚಿನ ಪ್ರೀತಿಯನ್ನು, ಕಾಳಜಿಯನ್ನು ಅನೇಕರು ತಮ್ಮ ಮುದ್ದಿನ ನಾಯಿಗಳಿಗೆ ತೋರಿಸುತ್ತಾರೆ. ತಿಂಗಳಿಗೆ ಸಾವಿರಾರು ರೂಪಾಯಿಗಳನ್ನು ಅವುಗಳ ಪೋಷಣೆ, ಆರೈಕೆಗೆ ವೆಚ್ಚ ಮಾಡುತ್ತಾರೆ. ದುಬಾರಿ ಬೆಲೆಯ ನಾಯಿ ಸಾಕುವುದು ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿ  ಮಾರ್ಪಟ್ಟಿದೆ. ‍‍‍‍‍‍‍‍

ಕೆಲವೊಮ್ಮೆ ಸಾಕು ನಾಯಿಗಳು ಮನುಷ್ಯನ ಮೇಲೆ ದಾಳಿ ಮಾಡಿದ ಘಟನೆಗಳು ನಡೆದಿವೆ. ಹೆಚ್ಚಾಗಿ ತನ್ನ ಒಡೆಯನ ಸುತ್ತ ಮುತ್ತ ಓಡಾಡುವ ಇವು ಅಪರೂಪಕ್ಕೆ ಮನುಷ್ಯನ ಮೇಲೆ ಎರಗುತ್ತವೆ. ಎರಡು ನಾಯಿಗಳು ಹಿರಿಯ ವಕೀಲರಿಗೆ ಕಚ್ಚಿ ತಮ್ಮ ಮಾಲಿಕನನ್ನು ಪೇಚಿಗೆ ಸಿಲುಕಿಸಿದ ಘಟನೆ ನಡೆದಿದೆ. ನಾಯಿ ಕಚ್ಚಿದ್ದಕ್ಕೆ ವಕೀಲರು ಸುಮ್ಮನೆ ಬಿಡಲಿಲ್ಲ ಮಾಲೀಕರನ್ನು ನ್ಯಾಯಾಲಯಕ್ಕೆ ಎಳೆದಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ಘಟನೆ ಇದು. ವಾಕಿಂಗ್ ವೇಳೆ ಹಿರಿಯ ವಕೀಲರ ಮೇಲೆ ಶ್ವಾನಗಳು ದಾಳಿ ಮಾಡಿದ್ದ ಈ ಘಟನೆ ಈಗ ಶ್ವಾನಗಳ `ಮರಣ ದಂಡನೆ’ ಶಿಕ್ಷೆಯ ತನಕ ಮುಟ್ಟಿದೆ. ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಇಂತಹದ್ದೊಂದು ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ: ಪಂಜಾಬ್‌: ನಾಯಿಯನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದ ಮಹಿಳೆ – ಪ್ರಕರಣ ದಾಖಲು

 ಕಳೆದ ತಿಂಗಳು ನಡೆದ ಘಟನೆ ಇದು. ಕರಾಚಿಯ ಡಿಫೆನ್ಸ್‌ ಹೌಸಿಂಗ್ ಅಥಾರಿಟಿ ಪ್ರದೇಶದಲ್ಲಿ ಬೆಳಗ್ಗಿನ ತನ್ನ ದೈನಂದಿನ ವಾಕ್‌ ವೇಳೆ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಅವರ ಮೇಲೆ ಅದೇ ಪ್ರದೇಶದ ನಿವಾಸಿ ಹುಮಾಯುನ್ ಖಾನ್ ಅವರ ಎರಡು ಶ್ವಾನಗಳು ದಾಳಿ ಮಾಡಿದ್ದವು. ಅಖ್ತರ್ ಅಲಿ ಅವರ ಮೇಲೆ ದಾಳಿ ಮಾಡಿದ್ದ ಶ್ವಾನಗಳು ಬಳಿಕ ಇವರನ್ನು ನೆಲಕ್ಕುರುಳಿಸಿದ್ದವು. ಇದರಿಂದ ಇವರಿಗೆ ತೀವ್ರ ಗಾಯಗಳಾಗಿತ್ತು.

ಈ ದೃಶ್ಯ ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಜೊತೆಗೆ, ಇದು ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿಯೂ ಹರಿದಾಡಿತ್ತು. ಅಲ್ಲದೆ, ಇದು ಬಹುತೇಕ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷ ತಳಿಗಳ ಶ್ವಾನಗಳನ್ನು ಯಾವುದೇ ಸೂಕ್ತ ತರಬೇತಿ ಇಲ್ಲದೆ ಜನವಸತಿ ಪ್ರದೇಶಗಳಲ್ಲಿ ಇಟ್ಟುಕೊಳ್ಳುವ ಮಾಲಿಕರ ಅಭ್ಯಾಸವನ್ನು ಹಲವರು ಟೀಕಿಸಿದ್ದರು.

ಶ್ವಾನಗಳ ದಾಳಿಯಿಂದ ಮಿರ್ಜಾ ಅಖ್ತರ್ ಅವರು ಸಾಕಷ್ಟು ಗಾಯಗೊಳಗಾಗಿದ್ದರು. ಜೊತೆಗೆ ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುವ ನಿರ್ಧಾರಕ್ಕೂ ಇವರು ಬಂದಿದ್ದರು. ಆದರೆ, ಇದಾದ ಬಳಿಕ ಮನಸ್ಸು ಬದಲಾಯಿಸಿದ ಅಖ್ತರ್ ನ್ಯಾಯಾಲಯದ ಆಚೆಗೆ ಸಂಧಾನದ ಮೂಲಕ ಇದನ್ನು ಪರಿಹರಿಸಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದರು. ಜೊತೆಗೆ, ಕೆಲ ಷರತ್ತುಗಳೊಂದಿಗೆ ಶ್ವಾನಗಳ ಮಾಲಿಕ ಹುಮಾಯುನ್‌ರನ್ನು ಕ್ಷಮಿಸುವುದಾಗಿ ಇವರು ಹೇಳಿದ್ದರು.

ಬೇಷರತ್ತಾಗಿ ಕ್ಷಮೆಯಾಚಿಸುವುದು, ಹುಮಾಯುನ್ ಮತ್ತು ಕುಟುಂಬ ಇನ್ನು ಮುಂದೆ ತಮ್ಮ ಮನೆಯಲ್ಲಿ ಯಾವುದೇ ಅಪಾಯಕಾರಿ ಶ್ವಾನಗಳನ್ನು ಇಟ್ಟಕೊಳ್ಳದೇ ಇರುವುದು, ದಾಳಿ ಮಾಡಿದ ಎರಡು ಶ್ವಾನಗಳಿಗೆ ತಕ್ಷಣ ಪಶುವೈದ್ಯರ ಮೂಲಕ ದಯಾಮರಣ ನೀಡುವುದು, ಹುಮಾಯುನ್ ಹೊಂದಿರುವ ಇತರ ಅಪಾಯಕಾರಿ ಶ್ವಾನಗಳನ್ನು ಆಶ್ರಯ ಕೇಂದ್ರಕ್ಕೆ ಬಿಡುವುದು. ಜೊತೆಗೆ, ಇತರ ಯಾವುದೇ ಶ್ವಾನಗಳು ಮನೆಯಲ್ಲಿ ಇದ್ದರೂ ಅವುಗಳನ್ನು ಕ್ಲಿಫ್ಟನ್ ಕಂಟೋನ್ಮೆಂಟ್ ಬೋರ್ಡ್ (ಸಿಬಿಸಿ)ನಲ್ಲಿ ನೋಂದಾಯಿಸಬೇಕು ಎಂಬ ಷರತ್ತಿನೊಂದಿಗೆ ಈ ಪ್ರಕರಣವನ್ನು ಇವರಿಬ್ಬರೇ ಇತ್ಯರ್ಥ ಮಾಡಿಕೊಂಡಿದ್ದಾರೆ.

ವ್ಯಗ್ರವಾದ ನಾಯಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದೆ. ನಿಜಕ್ಕೂ ಮನುಷ್ಯನ ತರಬೇತಿಯಿಂದ ನಾಯಿಗಳು ಸೌಮ್ಯವಾಗಿ ವರ್ತಿಸುತ್ತವೆಯೇ ? ಮೂಲದಲ್ಲಿ ಅವಕ್ಕೆ ಮಾಲಿಕನ ನಿರ್ದೇಶನ ಅರ್ಥ ಮಾಡಿಕೊಂಡು ಪಾಲಿಸುವ ಸಾಮರ್ಥ್ಯ ಇದೆಯೇ ಇಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಭಾರತದಲ್ಲಿ ಶ್ವಾನಗಳು ಮಾಡಿದ ಎಡವಟ್ಟಿಗೆ ಮಾಲಿಕರನ್ನು ಶಿಕ್ಷೆಗೆ ಗುರಿ ಪಡಿಸಿದ ಅನೇಕ ನಿರ್ದಶನಗಳು ಇವೆ. ಕೆಲವೊಮ್ಮೆ ಉಗ್ರ ಸ್ವರೂಪಿ ಶ್ವಾನಗಳನ್ನು ಸಮಾಜದಿಂದ ಬೇರ್ಪಡಿಸಿದ ಮತ್ತು ಸಾಯಿಸಿದ ಉದಾಹರಣೆಗಳು ಇವೆ. ಒಟ್ಟಿನಲ್ಲಿ ಈ ಘಟನೆ ಶ್ವಾನ ಪ್ರಿಯರಿಗೆ ಮತ್ತು ಮಾಲಿಕರಿಗೆ ಒಂದು ಎಚ್ಚರಿಕೆಯಾಗಿದ್ದು ತಮ್ಮ ಸಾಕು ಪ್ರಾಣಿಗಳನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲು ಮಾರ್ಗದರ್ಶನವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...