Homeಮುಖಪುಟವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಶ್ವಾನಗಳಿಗೆ ದಯಾಮರಣ ವಿಧಿಸುವ ತೀರ್ಮಾನ

- Advertisement -
- Advertisement -

ನಾಯಿ ಮನುಷ್ಯನ ಆದಿ ಕಾಲದ ಸಂಗಾತಿ. ಜಗತ್ತಿನಲ್ಲಿ ನಾಯಿಗಳನ್ನು ಸಾಕದ ದೇಶಗಳು, ಜನರು ಅತ್ಯಂತ ವಿರಳ. ನಾಗರಿಕ ಸಮಾಜದಲ್ಲಿ ಅವಕ್ಕೊಂದು ವಿಶೇಷ ಸ್ಥಾನಮಾನ ಇದೆ. ಸಾಕು ನಾಯಿಗಳೆಂದರೆ ಎಲ್ಲರಿಗೂ ಇ‍‍‍‍‍‍ಷ್ಟ. ಮನೆಯ ಮಕ್ಕಳಿಗಿಂತಲೂ ಹೆಚ್ಚಿನ ಪ್ರೀತಿಯನ್ನು, ಕಾಳಜಿಯನ್ನು ಅನೇಕರು ತಮ್ಮ ಮುದ್ದಿನ ನಾಯಿಗಳಿಗೆ ತೋರಿಸುತ್ತಾರೆ. ತಿಂಗಳಿಗೆ ಸಾವಿರಾರು ರೂಪಾಯಿಗಳನ್ನು ಅವುಗಳ ಪೋಷಣೆ, ಆರೈಕೆಗೆ ವೆಚ್ಚ ಮಾಡುತ್ತಾರೆ. ದುಬಾರಿ ಬೆಲೆಯ ನಾಯಿ ಸಾಕುವುದು ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿ  ಮಾರ್ಪಟ್ಟಿದೆ. ‍‍‍‍‍‍‍‍

ಕೆಲವೊಮ್ಮೆ ಸಾಕು ನಾಯಿಗಳು ಮನುಷ್ಯನ ಮೇಲೆ ದಾಳಿ ಮಾಡಿದ ಘಟನೆಗಳು ನಡೆದಿವೆ. ಹೆಚ್ಚಾಗಿ ತನ್ನ ಒಡೆಯನ ಸುತ್ತ ಮುತ್ತ ಓಡಾಡುವ ಇವು ಅಪರೂಪಕ್ಕೆ ಮನುಷ್ಯನ ಮೇಲೆ ಎರಗುತ್ತವೆ. ಎರಡು ನಾಯಿಗಳು ಹಿರಿಯ ವಕೀಲರಿಗೆ ಕಚ್ಚಿ ತಮ್ಮ ಮಾಲಿಕನನ್ನು ಪೇಚಿಗೆ ಸಿಲುಕಿಸಿದ ಘಟನೆ ನಡೆದಿದೆ. ನಾಯಿ ಕಚ್ಚಿದ್ದಕ್ಕೆ ವಕೀಲರು ಸುಮ್ಮನೆ ಬಿಡಲಿಲ್ಲ ಮಾಲೀಕರನ್ನು ನ್ಯಾಯಾಲಯಕ್ಕೆ ಎಳೆದಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ಘಟನೆ ಇದು. ವಾಕಿಂಗ್ ವೇಳೆ ಹಿರಿಯ ವಕೀಲರ ಮೇಲೆ ಶ್ವಾನಗಳು ದಾಳಿ ಮಾಡಿದ್ದ ಈ ಘಟನೆ ಈಗ ಶ್ವಾನಗಳ `ಮರಣ ದಂಡನೆ’ ಶಿಕ್ಷೆಯ ತನಕ ಮುಟ್ಟಿದೆ. ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಇಂತಹದ್ದೊಂದು ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ: ಪಂಜಾಬ್‌: ನಾಯಿಯನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದ ಮಹಿಳೆ – ಪ್ರಕರಣ ದಾಖಲು

 ಕಳೆದ ತಿಂಗಳು ನಡೆದ ಘಟನೆ ಇದು. ಕರಾಚಿಯ ಡಿಫೆನ್ಸ್‌ ಹೌಸಿಂಗ್ ಅಥಾರಿಟಿ ಪ್ರದೇಶದಲ್ಲಿ ಬೆಳಗ್ಗಿನ ತನ್ನ ದೈನಂದಿನ ವಾಕ್‌ ವೇಳೆ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಅವರ ಮೇಲೆ ಅದೇ ಪ್ರದೇಶದ ನಿವಾಸಿ ಹುಮಾಯುನ್ ಖಾನ್ ಅವರ ಎರಡು ಶ್ವಾನಗಳು ದಾಳಿ ಮಾಡಿದ್ದವು. ಅಖ್ತರ್ ಅಲಿ ಅವರ ಮೇಲೆ ದಾಳಿ ಮಾಡಿದ್ದ ಶ್ವಾನಗಳು ಬಳಿಕ ಇವರನ್ನು ನೆಲಕ್ಕುರುಳಿಸಿದ್ದವು. ಇದರಿಂದ ಇವರಿಗೆ ತೀವ್ರ ಗಾಯಗಳಾಗಿತ್ತು.

ಈ ದೃಶ್ಯ ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಜೊತೆಗೆ, ಇದು ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿಯೂ ಹರಿದಾಡಿತ್ತು. ಅಲ್ಲದೆ, ಇದು ಬಹುತೇಕ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷ ತಳಿಗಳ ಶ್ವಾನಗಳನ್ನು ಯಾವುದೇ ಸೂಕ್ತ ತರಬೇತಿ ಇಲ್ಲದೆ ಜನವಸತಿ ಪ್ರದೇಶಗಳಲ್ಲಿ ಇಟ್ಟುಕೊಳ್ಳುವ ಮಾಲಿಕರ ಅಭ್ಯಾಸವನ್ನು ಹಲವರು ಟೀಕಿಸಿದ್ದರು.

ಶ್ವಾನಗಳ ದಾಳಿಯಿಂದ ಮಿರ್ಜಾ ಅಖ್ತರ್ ಅವರು ಸಾಕಷ್ಟು ಗಾಯಗೊಳಗಾಗಿದ್ದರು. ಜೊತೆಗೆ ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುವ ನಿರ್ಧಾರಕ್ಕೂ ಇವರು ಬಂದಿದ್ದರು. ಆದರೆ, ಇದಾದ ಬಳಿಕ ಮನಸ್ಸು ಬದಲಾಯಿಸಿದ ಅಖ್ತರ್ ನ್ಯಾಯಾಲಯದ ಆಚೆಗೆ ಸಂಧಾನದ ಮೂಲಕ ಇದನ್ನು ಪರಿಹರಿಸಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದರು. ಜೊತೆಗೆ, ಕೆಲ ಷರತ್ತುಗಳೊಂದಿಗೆ ಶ್ವಾನಗಳ ಮಾಲಿಕ ಹುಮಾಯುನ್‌ರನ್ನು ಕ್ಷಮಿಸುವುದಾಗಿ ಇವರು ಹೇಳಿದ್ದರು.

ಬೇಷರತ್ತಾಗಿ ಕ್ಷಮೆಯಾಚಿಸುವುದು, ಹುಮಾಯುನ್ ಮತ್ತು ಕುಟುಂಬ ಇನ್ನು ಮುಂದೆ ತಮ್ಮ ಮನೆಯಲ್ಲಿ ಯಾವುದೇ ಅಪಾಯಕಾರಿ ಶ್ವಾನಗಳನ್ನು ಇಟ್ಟಕೊಳ್ಳದೇ ಇರುವುದು, ದಾಳಿ ಮಾಡಿದ ಎರಡು ಶ್ವಾನಗಳಿಗೆ ತಕ್ಷಣ ಪಶುವೈದ್ಯರ ಮೂಲಕ ದಯಾಮರಣ ನೀಡುವುದು, ಹುಮಾಯುನ್ ಹೊಂದಿರುವ ಇತರ ಅಪಾಯಕಾರಿ ಶ್ವಾನಗಳನ್ನು ಆಶ್ರಯ ಕೇಂದ್ರಕ್ಕೆ ಬಿಡುವುದು. ಜೊತೆಗೆ, ಇತರ ಯಾವುದೇ ಶ್ವಾನಗಳು ಮನೆಯಲ್ಲಿ ಇದ್ದರೂ ಅವುಗಳನ್ನು ಕ್ಲಿಫ್ಟನ್ ಕಂಟೋನ್ಮೆಂಟ್ ಬೋರ್ಡ್ (ಸಿಬಿಸಿ)ನಲ್ಲಿ ನೋಂದಾಯಿಸಬೇಕು ಎಂಬ ಷರತ್ತಿನೊಂದಿಗೆ ಈ ಪ್ರಕರಣವನ್ನು ಇವರಿಬ್ಬರೇ ಇತ್ಯರ್ಥ ಮಾಡಿಕೊಂಡಿದ್ದಾರೆ.

ವ್ಯಗ್ರವಾದ ನಾಯಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದೆ. ನಿಜಕ್ಕೂ ಮನುಷ್ಯನ ತರಬೇತಿಯಿಂದ ನಾಯಿಗಳು ಸೌಮ್ಯವಾಗಿ ವರ್ತಿಸುತ್ತವೆಯೇ ? ಮೂಲದಲ್ಲಿ ಅವಕ್ಕೆ ಮಾಲಿಕನ ನಿರ್ದೇಶನ ಅರ್ಥ ಮಾಡಿಕೊಂಡು ಪಾಲಿಸುವ ಸಾಮರ್ಥ್ಯ ಇದೆಯೇ ಇಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಭಾರತದಲ್ಲಿ ಶ್ವಾನಗಳು ಮಾಡಿದ ಎಡವಟ್ಟಿಗೆ ಮಾಲಿಕರನ್ನು ಶಿಕ್ಷೆಗೆ ಗುರಿ ಪಡಿಸಿದ ಅನೇಕ ನಿರ್ದಶನಗಳು ಇವೆ. ಕೆಲವೊಮ್ಮೆ ಉಗ್ರ ಸ್ವರೂಪಿ ಶ್ವಾನಗಳನ್ನು ಸಮಾಜದಿಂದ ಬೇರ್ಪಡಿಸಿದ ಮತ್ತು ಸಾಯಿಸಿದ ಉದಾಹರಣೆಗಳು ಇವೆ. ಒಟ್ಟಿನಲ್ಲಿ ಈ ಘಟನೆ ಶ್ವಾನ ಪ್ರಿಯರಿಗೆ ಮತ್ತು ಮಾಲಿಕರಿಗೆ ಒಂದು ಎಚ್ಚರಿಕೆಯಾಗಿದ್ದು ತಮ್ಮ ಸಾಕು ಪ್ರಾಣಿಗಳನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲು ಮಾರ್ಗದರ್ಶನವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...