Homeಮುಖಪುಟವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಶ್ವಾನಗಳಿಗೆ ದಯಾಮರಣ ವಿಧಿಸುವ ತೀರ್ಮಾನ

- Advertisement -
- Advertisement -

ನಾಯಿ ಮನುಷ್ಯನ ಆದಿ ಕಾಲದ ಸಂಗಾತಿ. ಜಗತ್ತಿನಲ್ಲಿ ನಾಯಿಗಳನ್ನು ಸಾಕದ ದೇಶಗಳು, ಜನರು ಅತ್ಯಂತ ವಿರಳ. ನಾಗರಿಕ ಸಮಾಜದಲ್ಲಿ ಅವಕ್ಕೊಂದು ವಿಶೇಷ ಸ್ಥಾನಮಾನ ಇದೆ. ಸಾಕು ನಾಯಿಗಳೆಂದರೆ ಎಲ್ಲರಿಗೂ ಇ‍‍‍‍‍‍ಷ್ಟ. ಮನೆಯ ಮಕ್ಕಳಿಗಿಂತಲೂ ಹೆಚ್ಚಿನ ಪ್ರೀತಿಯನ್ನು, ಕಾಳಜಿಯನ್ನು ಅನೇಕರು ತಮ್ಮ ಮುದ್ದಿನ ನಾಯಿಗಳಿಗೆ ತೋರಿಸುತ್ತಾರೆ. ತಿಂಗಳಿಗೆ ಸಾವಿರಾರು ರೂಪಾಯಿಗಳನ್ನು ಅವುಗಳ ಪೋಷಣೆ, ಆರೈಕೆಗೆ ವೆಚ್ಚ ಮಾಡುತ್ತಾರೆ. ದುಬಾರಿ ಬೆಲೆಯ ನಾಯಿ ಸಾಕುವುದು ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿ  ಮಾರ್ಪಟ್ಟಿದೆ. ‍‍‍‍‍‍‍‍

ಕೆಲವೊಮ್ಮೆ ಸಾಕು ನಾಯಿಗಳು ಮನುಷ್ಯನ ಮೇಲೆ ದಾಳಿ ಮಾಡಿದ ಘಟನೆಗಳು ನಡೆದಿವೆ. ಹೆಚ್ಚಾಗಿ ತನ್ನ ಒಡೆಯನ ಸುತ್ತ ಮುತ್ತ ಓಡಾಡುವ ಇವು ಅಪರೂಪಕ್ಕೆ ಮನುಷ್ಯನ ಮೇಲೆ ಎರಗುತ್ತವೆ. ಎರಡು ನಾಯಿಗಳು ಹಿರಿಯ ವಕೀಲರಿಗೆ ಕಚ್ಚಿ ತಮ್ಮ ಮಾಲಿಕನನ್ನು ಪೇಚಿಗೆ ಸಿಲುಕಿಸಿದ ಘಟನೆ ನಡೆದಿದೆ. ನಾಯಿ ಕಚ್ಚಿದ್ದಕ್ಕೆ ವಕೀಲರು ಸುಮ್ಮನೆ ಬಿಡಲಿಲ್ಲ ಮಾಲೀಕರನ್ನು ನ್ಯಾಯಾಲಯಕ್ಕೆ ಎಳೆದಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ಘಟನೆ ಇದು. ವಾಕಿಂಗ್ ವೇಳೆ ಹಿರಿಯ ವಕೀಲರ ಮೇಲೆ ಶ್ವಾನಗಳು ದಾಳಿ ಮಾಡಿದ್ದ ಈ ಘಟನೆ ಈಗ ಶ್ವಾನಗಳ `ಮರಣ ದಂಡನೆ’ ಶಿಕ್ಷೆಯ ತನಕ ಮುಟ್ಟಿದೆ. ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಇಂತಹದ್ದೊಂದು ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ: ಪಂಜಾಬ್‌: ನಾಯಿಯನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದ ಮಹಿಳೆ – ಪ್ರಕರಣ ದಾಖಲು

 ಕಳೆದ ತಿಂಗಳು ನಡೆದ ಘಟನೆ ಇದು. ಕರಾಚಿಯ ಡಿಫೆನ್ಸ್‌ ಹೌಸಿಂಗ್ ಅಥಾರಿಟಿ ಪ್ರದೇಶದಲ್ಲಿ ಬೆಳಗ್ಗಿನ ತನ್ನ ದೈನಂದಿನ ವಾಕ್‌ ವೇಳೆ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಅವರ ಮೇಲೆ ಅದೇ ಪ್ರದೇಶದ ನಿವಾಸಿ ಹುಮಾಯುನ್ ಖಾನ್ ಅವರ ಎರಡು ಶ್ವಾನಗಳು ದಾಳಿ ಮಾಡಿದ್ದವು. ಅಖ್ತರ್ ಅಲಿ ಅವರ ಮೇಲೆ ದಾಳಿ ಮಾಡಿದ್ದ ಶ್ವಾನಗಳು ಬಳಿಕ ಇವರನ್ನು ನೆಲಕ್ಕುರುಳಿಸಿದ್ದವು. ಇದರಿಂದ ಇವರಿಗೆ ತೀವ್ರ ಗಾಯಗಳಾಗಿತ್ತು.

ಈ ದೃಶ್ಯ ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಜೊತೆಗೆ, ಇದು ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿಯೂ ಹರಿದಾಡಿತ್ತು. ಅಲ್ಲದೆ, ಇದು ಬಹುತೇಕ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷ ತಳಿಗಳ ಶ್ವಾನಗಳನ್ನು ಯಾವುದೇ ಸೂಕ್ತ ತರಬೇತಿ ಇಲ್ಲದೆ ಜನವಸತಿ ಪ್ರದೇಶಗಳಲ್ಲಿ ಇಟ್ಟುಕೊಳ್ಳುವ ಮಾಲಿಕರ ಅಭ್ಯಾಸವನ್ನು ಹಲವರು ಟೀಕಿಸಿದ್ದರು.

ಶ್ವಾನಗಳ ದಾಳಿಯಿಂದ ಮಿರ್ಜಾ ಅಖ್ತರ್ ಅವರು ಸಾಕಷ್ಟು ಗಾಯಗೊಳಗಾಗಿದ್ದರು. ಜೊತೆಗೆ ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುವ ನಿರ್ಧಾರಕ್ಕೂ ಇವರು ಬಂದಿದ್ದರು. ಆದರೆ, ಇದಾದ ಬಳಿಕ ಮನಸ್ಸು ಬದಲಾಯಿಸಿದ ಅಖ್ತರ್ ನ್ಯಾಯಾಲಯದ ಆಚೆಗೆ ಸಂಧಾನದ ಮೂಲಕ ಇದನ್ನು ಪರಿಹರಿಸಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದರು. ಜೊತೆಗೆ, ಕೆಲ ಷರತ್ತುಗಳೊಂದಿಗೆ ಶ್ವಾನಗಳ ಮಾಲಿಕ ಹುಮಾಯುನ್‌ರನ್ನು ಕ್ಷಮಿಸುವುದಾಗಿ ಇವರು ಹೇಳಿದ್ದರು.

ಬೇಷರತ್ತಾಗಿ ಕ್ಷಮೆಯಾಚಿಸುವುದು, ಹುಮಾಯುನ್ ಮತ್ತು ಕುಟುಂಬ ಇನ್ನು ಮುಂದೆ ತಮ್ಮ ಮನೆಯಲ್ಲಿ ಯಾವುದೇ ಅಪಾಯಕಾರಿ ಶ್ವಾನಗಳನ್ನು ಇಟ್ಟಕೊಳ್ಳದೇ ಇರುವುದು, ದಾಳಿ ಮಾಡಿದ ಎರಡು ಶ್ವಾನಗಳಿಗೆ ತಕ್ಷಣ ಪಶುವೈದ್ಯರ ಮೂಲಕ ದಯಾಮರಣ ನೀಡುವುದು, ಹುಮಾಯುನ್ ಹೊಂದಿರುವ ಇತರ ಅಪಾಯಕಾರಿ ಶ್ವಾನಗಳನ್ನು ಆಶ್ರಯ ಕೇಂದ್ರಕ್ಕೆ ಬಿಡುವುದು. ಜೊತೆಗೆ, ಇತರ ಯಾವುದೇ ಶ್ವಾನಗಳು ಮನೆಯಲ್ಲಿ ಇದ್ದರೂ ಅವುಗಳನ್ನು ಕ್ಲಿಫ್ಟನ್ ಕಂಟೋನ್ಮೆಂಟ್ ಬೋರ್ಡ್ (ಸಿಬಿಸಿ)ನಲ್ಲಿ ನೋಂದಾಯಿಸಬೇಕು ಎಂಬ ಷರತ್ತಿನೊಂದಿಗೆ ಈ ಪ್ರಕರಣವನ್ನು ಇವರಿಬ್ಬರೇ ಇತ್ಯರ್ಥ ಮಾಡಿಕೊಂಡಿದ್ದಾರೆ.

ವ್ಯಗ್ರವಾದ ನಾಯಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದೆ. ನಿಜಕ್ಕೂ ಮನುಷ್ಯನ ತರಬೇತಿಯಿಂದ ನಾಯಿಗಳು ಸೌಮ್ಯವಾಗಿ ವರ್ತಿಸುತ್ತವೆಯೇ ? ಮೂಲದಲ್ಲಿ ಅವಕ್ಕೆ ಮಾಲಿಕನ ನಿರ್ದೇಶನ ಅರ್ಥ ಮಾಡಿಕೊಂಡು ಪಾಲಿಸುವ ಸಾಮರ್ಥ್ಯ ಇದೆಯೇ ಇಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಭಾರತದಲ್ಲಿ ಶ್ವಾನಗಳು ಮಾಡಿದ ಎಡವಟ್ಟಿಗೆ ಮಾಲಿಕರನ್ನು ಶಿಕ್ಷೆಗೆ ಗುರಿ ಪಡಿಸಿದ ಅನೇಕ ನಿರ್ದಶನಗಳು ಇವೆ. ಕೆಲವೊಮ್ಮೆ ಉಗ್ರ ಸ್ವರೂಪಿ ಶ್ವಾನಗಳನ್ನು ಸಮಾಜದಿಂದ ಬೇರ್ಪಡಿಸಿದ ಮತ್ತು ಸಾಯಿಸಿದ ಉದಾಹರಣೆಗಳು ಇವೆ. ಒಟ್ಟಿನಲ್ಲಿ ಈ ಘಟನೆ ಶ್ವಾನ ಪ್ರಿಯರಿಗೆ ಮತ್ತು ಮಾಲಿಕರಿಗೆ ಒಂದು ಎಚ್ಚರಿಕೆಯಾಗಿದ್ದು ತಮ್ಮ ಸಾಕು ಪ್ರಾಣಿಗಳನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲು ಮಾರ್ಗದರ್ಶನವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...