Homeಮುಖಪುಟವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಶ್ವಾನಗಳಿಗೆ ದಯಾಮರಣ ವಿಧಿಸುವ ತೀರ್ಮಾನ

- Advertisement -
- Advertisement -

ನಾಯಿ ಮನುಷ್ಯನ ಆದಿ ಕಾಲದ ಸಂಗಾತಿ. ಜಗತ್ತಿನಲ್ಲಿ ನಾಯಿಗಳನ್ನು ಸಾಕದ ದೇಶಗಳು, ಜನರು ಅತ್ಯಂತ ವಿರಳ. ನಾಗರಿಕ ಸಮಾಜದಲ್ಲಿ ಅವಕ್ಕೊಂದು ವಿಶೇಷ ಸ್ಥಾನಮಾನ ಇದೆ. ಸಾಕು ನಾಯಿಗಳೆಂದರೆ ಎಲ್ಲರಿಗೂ ಇ‍‍‍‍‍‍ಷ್ಟ. ಮನೆಯ ಮಕ್ಕಳಿಗಿಂತಲೂ ಹೆಚ್ಚಿನ ಪ್ರೀತಿಯನ್ನು, ಕಾಳಜಿಯನ್ನು ಅನೇಕರು ತಮ್ಮ ಮುದ್ದಿನ ನಾಯಿಗಳಿಗೆ ತೋರಿಸುತ್ತಾರೆ. ತಿಂಗಳಿಗೆ ಸಾವಿರಾರು ರೂಪಾಯಿಗಳನ್ನು ಅವುಗಳ ಪೋಷಣೆ, ಆರೈಕೆಗೆ ವೆಚ್ಚ ಮಾಡುತ್ತಾರೆ. ದುಬಾರಿ ಬೆಲೆಯ ನಾಯಿ ಸಾಕುವುದು ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿ  ಮಾರ್ಪಟ್ಟಿದೆ. ‍‍‍‍‍‍‍‍

ಕೆಲವೊಮ್ಮೆ ಸಾಕು ನಾಯಿಗಳು ಮನುಷ್ಯನ ಮೇಲೆ ದಾಳಿ ಮಾಡಿದ ಘಟನೆಗಳು ನಡೆದಿವೆ. ಹೆಚ್ಚಾಗಿ ತನ್ನ ಒಡೆಯನ ಸುತ್ತ ಮುತ್ತ ಓಡಾಡುವ ಇವು ಅಪರೂಪಕ್ಕೆ ಮನುಷ್ಯನ ಮೇಲೆ ಎರಗುತ್ತವೆ. ಎರಡು ನಾಯಿಗಳು ಹಿರಿಯ ವಕೀಲರಿಗೆ ಕಚ್ಚಿ ತಮ್ಮ ಮಾಲಿಕನನ್ನು ಪೇಚಿಗೆ ಸಿಲುಕಿಸಿದ ಘಟನೆ ನಡೆದಿದೆ. ನಾಯಿ ಕಚ್ಚಿದ್ದಕ್ಕೆ ವಕೀಲರು ಸುಮ್ಮನೆ ಬಿಡಲಿಲ್ಲ ಮಾಲೀಕರನ್ನು ನ್ಯಾಯಾಲಯಕ್ಕೆ ಎಳೆದಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ಘಟನೆ ಇದು. ವಾಕಿಂಗ್ ವೇಳೆ ಹಿರಿಯ ವಕೀಲರ ಮೇಲೆ ಶ್ವಾನಗಳು ದಾಳಿ ಮಾಡಿದ್ದ ಈ ಘಟನೆ ಈಗ ಶ್ವಾನಗಳ `ಮರಣ ದಂಡನೆ’ ಶಿಕ್ಷೆಯ ತನಕ ಮುಟ್ಟಿದೆ. ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಇಂತಹದ್ದೊಂದು ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ: ಪಂಜಾಬ್‌: ನಾಯಿಯನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದ ಮಹಿಳೆ – ಪ್ರಕರಣ ದಾಖಲು

 ಕಳೆದ ತಿಂಗಳು ನಡೆದ ಘಟನೆ ಇದು. ಕರಾಚಿಯ ಡಿಫೆನ್ಸ್‌ ಹೌಸಿಂಗ್ ಅಥಾರಿಟಿ ಪ್ರದೇಶದಲ್ಲಿ ಬೆಳಗ್ಗಿನ ತನ್ನ ದೈನಂದಿನ ವಾಕ್‌ ವೇಳೆ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಅವರ ಮೇಲೆ ಅದೇ ಪ್ರದೇಶದ ನಿವಾಸಿ ಹುಮಾಯುನ್ ಖಾನ್ ಅವರ ಎರಡು ಶ್ವಾನಗಳು ದಾಳಿ ಮಾಡಿದ್ದವು. ಅಖ್ತರ್ ಅಲಿ ಅವರ ಮೇಲೆ ದಾಳಿ ಮಾಡಿದ್ದ ಶ್ವಾನಗಳು ಬಳಿಕ ಇವರನ್ನು ನೆಲಕ್ಕುರುಳಿಸಿದ್ದವು. ಇದರಿಂದ ಇವರಿಗೆ ತೀವ್ರ ಗಾಯಗಳಾಗಿತ್ತು.

ಈ ದೃಶ್ಯ ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಜೊತೆಗೆ, ಇದು ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿಯೂ ಹರಿದಾಡಿತ್ತು. ಅಲ್ಲದೆ, ಇದು ಬಹುತೇಕ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷ ತಳಿಗಳ ಶ್ವಾನಗಳನ್ನು ಯಾವುದೇ ಸೂಕ್ತ ತರಬೇತಿ ಇಲ್ಲದೆ ಜನವಸತಿ ಪ್ರದೇಶಗಳಲ್ಲಿ ಇಟ್ಟುಕೊಳ್ಳುವ ಮಾಲಿಕರ ಅಭ್ಯಾಸವನ್ನು ಹಲವರು ಟೀಕಿಸಿದ್ದರು.

ಶ್ವಾನಗಳ ದಾಳಿಯಿಂದ ಮಿರ್ಜಾ ಅಖ್ತರ್ ಅವರು ಸಾಕಷ್ಟು ಗಾಯಗೊಳಗಾಗಿದ್ದರು. ಜೊತೆಗೆ ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುವ ನಿರ್ಧಾರಕ್ಕೂ ಇವರು ಬಂದಿದ್ದರು. ಆದರೆ, ಇದಾದ ಬಳಿಕ ಮನಸ್ಸು ಬದಲಾಯಿಸಿದ ಅಖ್ತರ್ ನ್ಯಾಯಾಲಯದ ಆಚೆಗೆ ಸಂಧಾನದ ಮೂಲಕ ಇದನ್ನು ಪರಿಹರಿಸಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದರು. ಜೊತೆಗೆ, ಕೆಲ ಷರತ್ತುಗಳೊಂದಿಗೆ ಶ್ವಾನಗಳ ಮಾಲಿಕ ಹುಮಾಯುನ್‌ರನ್ನು ಕ್ಷಮಿಸುವುದಾಗಿ ಇವರು ಹೇಳಿದ್ದರು.

ಬೇಷರತ್ತಾಗಿ ಕ್ಷಮೆಯಾಚಿಸುವುದು, ಹುಮಾಯುನ್ ಮತ್ತು ಕುಟುಂಬ ಇನ್ನು ಮುಂದೆ ತಮ್ಮ ಮನೆಯಲ್ಲಿ ಯಾವುದೇ ಅಪಾಯಕಾರಿ ಶ್ವಾನಗಳನ್ನು ಇಟ್ಟಕೊಳ್ಳದೇ ಇರುವುದು, ದಾಳಿ ಮಾಡಿದ ಎರಡು ಶ್ವಾನಗಳಿಗೆ ತಕ್ಷಣ ಪಶುವೈದ್ಯರ ಮೂಲಕ ದಯಾಮರಣ ನೀಡುವುದು, ಹುಮಾಯುನ್ ಹೊಂದಿರುವ ಇತರ ಅಪಾಯಕಾರಿ ಶ್ವಾನಗಳನ್ನು ಆಶ್ರಯ ಕೇಂದ್ರಕ್ಕೆ ಬಿಡುವುದು. ಜೊತೆಗೆ, ಇತರ ಯಾವುದೇ ಶ್ವಾನಗಳು ಮನೆಯಲ್ಲಿ ಇದ್ದರೂ ಅವುಗಳನ್ನು ಕ್ಲಿಫ್ಟನ್ ಕಂಟೋನ್ಮೆಂಟ್ ಬೋರ್ಡ್ (ಸಿಬಿಸಿ)ನಲ್ಲಿ ನೋಂದಾಯಿಸಬೇಕು ಎಂಬ ಷರತ್ತಿನೊಂದಿಗೆ ಈ ಪ್ರಕರಣವನ್ನು ಇವರಿಬ್ಬರೇ ಇತ್ಯರ್ಥ ಮಾಡಿಕೊಂಡಿದ್ದಾರೆ.

ವ್ಯಗ್ರವಾದ ನಾಯಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದೆ. ನಿಜಕ್ಕೂ ಮನುಷ್ಯನ ತರಬೇತಿಯಿಂದ ನಾಯಿಗಳು ಸೌಮ್ಯವಾಗಿ ವರ್ತಿಸುತ್ತವೆಯೇ ? ಮೂಲದಲ್ಲಿ ಅವಕ್ಕೆ ಮಾಲಿಕನ ನಿರ್ದೇಶನ ಅರ್ಥ ಮಾಡಿಕೊಂಡು ಪಾಲಿಸುವ ಸಾಮರ್ಥ್ಯ ಇದೆಯೇ ಇಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಭಾರತದಲ್ಲಿ ಶ್ವಾನಗಳು ಮಾಡಿದ ಎಡವಟ್ಟಿಗೆ ಮಾಲಿಕರನ್ನು ಶಿಕ್ಷೆಗೆ ಗುರಿ ಪಡಿಸಿದ ಅನೇಕ ನಿರ್ದಶನಗಳು ಇವೆ. ಕೆಲವೊಮ್ಮೆ ಉಗ್ರ ಸ್ವರೂಪಿ ಶ್ವಾನಗಳನ್ನು ಸಮಾಜದಿಂದ ಬೇರ್ಪಡಿಸಿದ ಮತ್ತು ಸಾಯಿಸಿದ ಉದಾಹರಣೆಗಳು ಇವೆ. ಒಟ್ಟಿನಲ್ಲಿ ಈ ಘಟನೆ ಶ್ವಾನ ಪ್ರಿಯರಿಗೆ ಮತ್ತು ಮಾಲಿಕರಿಗೆ ಒಂದು ಎಚ್ಚರಿಕೆಯಾಗಿದ್ದು ತಮ್ಮ ಸಾಕು ಪ್ರಾಣಿಗಳನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲು ಮಾರ್ಗದರ್ಶನವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...