Homeಮುಖಪುಟವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ವಕೀಲರ ಮೇಲೆ ಶ್ವಾನ ದಾಳಿ : 2 ಜರ್ಮನ್‌ ಶೇಪರ್ಡ್‌ಗಳಿಗೆ ಮರಣ ದಂಡನೆ

ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಶ್ವಾನಗಳಿಗೆ ದಯಾಮರಣ ವಿಧಿಸುವ ತೀರ್ಮಾನ

- Advertisement -
- Advertisement -

ನಾಯಿ ಮನುಷ್ಯನ ಆದಿ ಕಾಲದ ಸಂಗಾತಿ. ಜಗತ್ತಿನಲ್ಲಿ ನಾಯಿಗಳನ್ನು ಸಾಕದ ದೇಶಗಳು, ಜನರು ಅತ್ಯಂತ ವಿರಳ. ನಾಗರಿಕ ಸಮಾಜದಲ್ಲಿ ಅವಕ್ಕೊಂದು ವಿಶೇಷ ಸ್ಥಾನಮಾನ ಇದೆ. ಸಾಕು ನಾಯಿಗಳೆಂದರೆ ಎಲ್ಲರಿಗೂ ಇ‍‍‍‍‍‍ಷ್ಟ. ಮನೆಯ ಮಕ್ಕಳಿಗಿಂತಲೂ ಹೆಚ್ಚಿನ ಪ್ರೀತಿಯನ್ನು, ಕಾಳಜಿಯನ್ನು ಅನೇಕರು ತಮ್ಮ ಮುದ್ದಿನ ನಾಯಿಗಳಿಗೆ ತೋರಿಸುತ್ತಾರೆ. ತಿಂಗಳಿಗೆ ಸಾವಿರಾರು ರೂಪಾಯಿಗಳನ್ನು ಅವುಗಳ ಪೋಷಣೆ, ಆರೈಕೆಗೆ ವೆಚ್ಚ ಮಾಡುತ್ತಾರೆ. ದುಬಾರಿ ಬೆಲೆಯ ನಾಯಿ ಸಾಕುವುದು ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿ  ಮಾರ್ಪಟ್ಟಿದೆ. ‍‍‍‍‍‍‍‍

ಕೆಲವೊಮ್ಮೆ ಸಾಕು ನಾಯಿಗಳು ಮನುಷ್ಯನ ಮೇಲೆ ದಾಳಿ ಮಾಡಿದ ಘಟನೆಗಳು ನಡೆದಿವೆ. ಹೆಚ್ಚಾಗಿ ತನ್ನ ಒಡೆಯನ ಸುತ್ತ ಮುತ್ತ ಓಡಾಡುವ ಇವು ಅಪರೂಪಕ್ಕೆ ಮನುಷ್ಯನ ಮೇಲೆ ಎರಗುತ್ತವೆ. ಎರಡು ನಾಯಿಗಳು ಹಿರಿಯ ವಕೀಲರಿಗೆ ಕಚ್ಚಿ ತಮ್ಮ ಮಾಲಿಕನನ್ನು ಪೇಚಿಗೆ ಸಿಲುಕಿಸಿದ ಘಟನೆ ನಡೆದಿದೆ. ನಾಯಿ ಕಚ್ಚಿದ್ದಕ್ಕೆ ವಕೀಲರು ಸುಮ್ಮನೆ ಬಿಡಲಿಲ್ಲ ಮಾಲೀಕರನ್ನು ನ್ಯಾಯಾಲಯಕ್ಕೆ ಎಳೆದಿದ್ದಾರೆ.

ಪಾಕಿಸ್ತಾನದಲ್ಲಿ ನಡೆದ ಘಟನೆ ಇದು. ವಾಕಿಂಗ್ ವೇಳೆ ಹಿರಿಯ ವಕೀಲರ ಮೇಲೆ ಶ್ವಾನಗಳು ದಾಳಿ ಮಾಡಿದ್ದ ಈ ಘಟನೆ ಈಗ ಶ್ವಾನಗಳ `ಮರಣ ದಂಡನೆ’ ಶಿಕ್ಷೆಯ ತನಕ ಮುಟ್ಟಿದೆ. ಗಾಯಗೊಂಡಿರುವ ವಕೀಲ ಮತ್ತು ಶ್ವಾನದ ಮಾಲಿಕರ ನಡುವೆ ನಡೆದ ಒಪ್ಪಂದದಲ್ಲಿ ಇಂತಹದ್ದೊಂದು ನಿರ್ಧಾರಕ್ಕೆ ಬರಲಾಗಿದೆ.

ಇದನ್ನೂ ಓದಿ: ಪಂಜಾಬ್‌: ನಾಯಿಯನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದ ಮಹಿಳೆ – ಪ್ರಕರಣ ದಾಖಲು

 ಕಳೆದ ತಿಂಗಳು ನಡೆದ ಘಟನೆ ಇದು. ಕರಾಚಿಯ ಡಿಫೆನ್ಸ್‌ ಹೌಸಿಂಗ್ ಅಥಾರಿಟಿ ಪ್ರದೇಶದಲ್ಲಿ ಬೆಳಗ್ಗಿನ ತನ್ನ ದೈನಂದಿನ ವಾಕ್‌ ವೇಳೆ ಹಿರಿಯ ವಕೀಲ ಮಿರ್ಜಾ ಅಖ್ತರ್ ಅಲಿ ಅವರ ಮೇಲೆ ಅದೇ ಪ್ರದೇಶದ ನಿವಾಸಿ ಹುಮಾಯುನ್ ಖಾನ್ ಅವರ ಎರಡು ಶ್ವಾನಗಳು ದಾಳಿ ಮಾಡಿದ್ದವು. ಅಖ್ತರ್ ಅಲಿ ಅವರ ಮೇಲೆ ದಾಳಿ ಮಾಡಿದ್ದ ಶ್ವಾನಗಳು ಬಳಿಕ ಇವರನ್ನು ನೆಲಕ್ಕುರುಳಿಸಿದ್ದವು. ಇದರಿಂದ ಇವರಿಗೆ ತೀವ್ರ ಗಾಯಗಳಾಗಿತ್ತು.

ಈ ದೃಶ್ಯ ಅಲ್ಲೇ ಇದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಜೊತೆಗೆ, ಇದು ವಿವಿಧ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿಯೂ ಹರಿದಾಡಿತ್ತು. ಅಲ್ಲದೆ, ಇದು ಬಹುತೇಕ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷ ತಳಿಗಳ ಶ್ವಾನಗಳನ್ನು ಯಾವುದೇ ಸೂಕ್ತ ತರಬೇತಿ ಇಲ್ಲದೆ ಜನವಸತಿ ಪ್ರದೇಶಗಳಲ್ಲಿ ಇಟ್ಟುಕೊಳ್ಳುವ ಮಾಲಿಕರ ಅಭ್ಯಾಸವನ್ನು ಹಲವರು ಟೀಕಿಸಿದ್ದರು.

ಶ್ವಾನಗಳ ದಾಳಿಯಿಂದ ಮಿರ್ಜಾ ಅಖ್ತರ್ ಅವರು ಸಾಕಷ್ಟು ಗಾಯಗೊಳಗಾಗಿದ್ದರು. ಜೊತೆಗೆ ಈ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರುವ ನಿರ್ಧಾರಕ್ಕೂ ಇವರು ಬಂದಿದ್ದರು. ಆದರೆ, ಇದಾದ ಬಳಿಕ ಮನಸ್ಸು ಬದಲಾಯಿಸಿದ ಅಖ್ತರ್ ನ್ಯಾಯಾಲಯದ ಆಚೆಗೆ ಸಂಧಾನದ ಮೂಲಕ ಇದನ್ನು ಪರಿಹರಿಸಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದರು. ಜೊತೆಗೆ, ಕೆಲ ಷರತ್ತುಗಳೊಂದಿಗೆ ಶ್ವಾನಗಳ ಮಾಲಿಕ ಹುಮಾಯುನ್‌ರನ್ನು ಕ್ಷಮಿಸುವುದಾಗಿ ಇವರು ಹೇಳಿದ್ದರು.

ಬೇಷರತ್ತಾಗಿ ಕ್ಷಮೆಯಾಚಿಸುವುದು, ಹುಮಾಯುನ್ ಮತ್ತು ಕುಟುಂಬ ಇನ್ನು ಮುಂದೆ ತಮ್ಮ ಮನೆಯಲ್ಲಿ ಯಾವುದೇ ಅಪಾಯಕಾರಿ ಶ್ವಾನಗಳನ್ನು ಇಟ್ಟಕೊಳ್ಳದೇ ಇರುವುದು, ದಾಳಿ ಮಾಡಿದ ಎರಡು ಶ್ವಾನಗಳಿಗೆ ತಕ್ಷಣ ಪಶುವೈದ್ಯರ ಮೂಲಕ ದಯಾಮರಣ ನೀಡುವುದು, ಹುಮಾಯುನ್ ಹೊಂದಿರುವ ಇತರ ಅಪಾಯಕಾರಿ ಶ್ವಾನಗಳನ್ನು ಆಶ್ರಯ ಕೇಂದ್ರಕ್ಕೆ ಬಿಡುವುದು. ಜೊತೆಗೆ, ಇತರ ಯಾವುದೇ ಶ್ವಾನಗಳು ಮನೆಯಲ್ಲಿ ಇದ್ದರೂ ಅವುಗಳನ್ನು ಕ್ಲಿಫ್ಟನ್ ಕಂಟೋನ್ಮೆಂಟ್ ಬೋರ್ಡ್ (ಸಿಬಿಸಿ)ನಲ್ಲಿ ನೋಂದಾಯಿಸಬೇಕು ಎಂಬ ಷರತ್ತಿನೊಂದಿಗೆ ಈ ಪ್ರಕರಣವನ್ನು ಇವರಿಬ್ಬರೇ ಇತ್ಯರ್ಥ ಮಾಡಿಕೊಂಡಿದ್ದಾರೆ.

ವ್ಯಗ್ರವಾದ ನಾಯಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದೆ. ನಿಜಕ್ಕೂ ಮನುಷ್ಯನ ತರಬೇತಿಯಿಂದ ನಾಯಿಗಳು ಸೌಮ್ಯವಾಗಿ ವರ್ತಿಸುತ್ತವೆಯೇ ? ಮೂಲದಲ್ಲಿ ಅವಕ್ಕೆ ಮಾಲಿಕನ ನಿರ್ದೇಶನ ಅರ್ಥ ಮಾಡಿಕೊಂಡು ಪಾಲಿಸುವ ಸಾಮರ್ಥ್ಯ ಇದೆಯೇ ಇಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಭಾರತದಲ್ಲಿ ಶ್ವಾನಗಳು ಮಾಡಿದ ಎಡವಟ್ಟಿಗೆ ಮಾಲಿಕರನ್ನು ಶಿಕ್ಷೆಗೆ ಗುರಿ ಪಡಿಸಿದ ಅನೇಕ ನಿರ್ದಶನಗಳು ಇವೆ. ಕೆಲವೊಮ್ಮೆ ಉಗ್ರ ಸ್ವರೂಪಿ ಶ್ವಾನಗಳನ್ನು ಸಮಾಜದಿಂದ ಬೇರ್ಪಡಿಸಿದ ಮತ್ತು ಸಾಯಿಸಿದ ಉದಾಹರಣೆಗಳು ಇವೆ. ಒಟ್ಟಿನಲ್ಲಿ ಈ ಘಟನೆ ಶ್ವಾನ ಪ್ರಿಯರಿಗೆ ಮತ್ತು ಮಾಲಿಕರಿಗೆ ಒಂದು ಎಚ್ಚರಿಕೆಯಾಗಿದ್ದು ತಮ್ಮ ಸಾಕು ಪ್ರಾಣಿಗಳನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲು ಮಾರ್ಗದರ್ಶನವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...