Homeಮುಖಪುಟಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರು ನಾಗರಿಕರ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರು ನಾಗರಿಕರ ಹತ್ಯೆ

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರಿಗೆ ಬುಲೆಟ್ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಫಾಲ್ ಪಶ್ಚಿಮದ ಗಡಿಯಲ್ಲಿರುವ ಲಮ್‌ಶಾಂಗ್ ಪ್ರದೇಶದ ಕಡಂಗ್‌ಬಂಡ್ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಕೆಲವು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ನೋಂಗ್‌ತೋಂಬಮ್ ಮೈಕೆಲ್ (33) ಮತ್ತು ಮೈಸ್ನಮ್ ಖಬಾ (23) ಎಂದು ಗುರುತಿಸಲಾಗಿದೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳು ನಡೆಸಿದ ದಾಳಿಗೆ ಪ್ರತಿಯಾಗಿ ಶಿಬಿರದಲ್ಲಿನ ಸ್ವಯಂಸೇವಕರು ಪ್ರತಿದಾಳಿ ನಡೆಸಿದ್ದಾರೆ. ಇದರ ಪರಿಣಾಮವಾಗಿ ಗುಂಡಿನ ಚಕಮಕಿ ನಡೆದಿದೆ. ಮಹಿಳೆಯರು ಸೇರಿದಂತೆ ಹಲವು ಮಂದಿ ತಮ್ಮ ಜೀವ ರಕ್ಷಣೆಗೆ ಓಡಿಹೋಗುತ್ತಿರುವ ದೃಶ್ಯ ವೈರಲ್ ವಿಡಿಯೊದಲ್ಲಿ ಸೆರೆಯಾಗಿದೆ. ಈ ಪ್ರದೇಶಕ್ಕೆ ಹೆಚ್ಚುವರಿ ಭದ್ರತೆಯನ್ನು ವ್ಯವಸ್ಥೆ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಿಸುವ ಪ್ರಯತ್ನ ಮಾಡಲಾಗುತ್ತಿದೆ.

ಕಾಂಗ್ಪೋಕ್ಪಿ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳ ನಡುವಿನ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ನಿಯಂತ್ರಣ ಕೊಠಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ದಾಳಿಯ ನಂತರ ಕಡಂಗ್‌ಬಂಡ್ ಮತ್ತು ನೆರೆಯ ಕೌಟ್ರುಕ್ ಗ್ರಾಮದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಜನರು ಸುರಕ್ಷಿತ ಸ್ಥಳಗಳಿಗೆ ಓಡಿಹೋದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಭದ್ರತಾ ಸಿಬ್ಬಂದಿ ಪ್ರದೇಶಕ್ಕೆ ದೌಡಾಯಿಸಿದ್ದಾರೆ.

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವು ಕೌಟ್ರುಕ್ ಮತ್ತು ಕಡಂಗ್‌ಬಂಡ್ ಗ್ರಾಮಗಳ ಮೇಲೆ ತೀವ್ರ ಹಾನಿಯನ್ನುಂಟುಮಾಡಿದೆ. ಇಲ್ಲಿ ಕುಕಿ ಮತ್ತು ಮೈತೈ ಸಮುದಾಯಗಳ ಗುಂಪುಗಳ ನಡುವೆ ಹಲವಾರು ಸಶಸ್ತ್ರ ಸಂಘರ್ಷಗಳು ನಡೆದಿದೆ.

ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ. ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಮೃತಪಟ್ಟಿದ್ದರು. ಕೆಲ ದಿನಗಳ ಕಾಲ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತ್ಯೇಕವಾದ ಘಟನೆಯಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದರು.

ಇದನ್ನು ಓದಿ: ದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...